ಮಿಲನ ಪ್ರಕಾಶ್ ವಿಚಾರಣೆ ಮಾಡಿದ್ದೇಕೆ ಪೊಲೀಸರು ? 'ಡೆವಿಲ್' ನಿರ್ದೇಶಕರಿಗೂ ದರ್ಶನ್ ಕೇಸ್‌ಗೂ ಏನು ಸಂಬಂಧ?

ಮಿಲನ ಪ್ರಕಾಶ್ ವಿಚಾರಣೆ ಮಾಡಿದ್ದೇಕೆ ಪೊಲೀಸರು ? 'ಡೆವಿಲ್' ನಿರ್ದೇಶಕರಿಗೂ ದರ್ಶನ್ ಕೇಸ್‌ಗೂ ಏನು ಸಂಬಂಧ?

Published : Jul 07, 2024, 09:18 AM IST

 ದರ್ಶನ್ ನಟಿಸುತ್ತಿದ್ದ 'ಡೆವಿಲ್' ಸಿನಿಮಾದ ನಿರ್ದೇಶಕ ಮಿಲನ ಪ್ರಕಾಶ್ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದರು.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ(Renukaswamy murder case) ಈಗಾಗಲೇ ದರ್ಶನ್, ಪವಿತ್ರಾ ಗೌಡ ಸೇರಿ ಅನೇಕರ ಬಂಧನ ನಡೆದಿದೆ. ಪ್ರಕರಣದ ಜೊತೆ, ದರ್ಶನ್(Darshan) ಜೊತೆ ಲಿಂಕ್ ಹೊಂದಿರೋ ಎಲ್ಲರನ್ನೂ ವಿಚಾರಣೆ ಮಾಡಲಾಗುತ್ತಿದೆ. ಈ ವೇಳೆ ಯಾವೆಲ್ಲ ಮಾಹಿತಿ ಹೊರ ಬೀಳುತ್ತದೆ ಅನ್ನೋದು ತುಂಬಾನೇ ಮುಖ್ಯವಾಗುತ್ತದೆ. ಈ ಸಂಬಂಧ ದರ್ಶನ್ ನಟಿಸುತ್ತಿದ್ದ 'ಡೆವಿಲ್' ಸಿನಿಮಾದ(Devil movie) ನಿರ್ದೇಶಕ ಮಿಲನ ಪ್ರಕಾಶ್ (Milan Prakash) ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದರು. ಸುಮಾರು ಒಂದೂವರೆ ಗಂಟೆಗಳ ಕಾಲ ನಿರ್ದೇಶನ ಮಿಲನ ಪ್ರಕಾಶ್ ಅವರನ್ನು ವಿಚಾರಣೆ ಮಾಡಲಾಗಿದೆ ಎಂದು ವರದಿಯಾಗಿದೆ. ದರ್ಶನ್ ಜೈಲು ಸೇರಿದ ಮೇಲೆ ತೀವ್ರಗೊಂಡ ವಿಚಾರಣೆಯಲ್ಲಿ ಯಶಸ್ಸು ಸೂರ್ಯ, ವಿಲನ ಪ್ರಕಾಶ್ ಅಂತಹ ಹೆಸರುಗಳು ಬಂದಿವೆ. ಇಷ್ಟಕ್ಕೂ ದರ್ಶನ್ ಕೇಸ್‌ನಲ್ಲಿ ಮಿಲನ ಪ್ರಕಾಶ್‌ಗೆ ಪೊಲೀಸರು ನೋಟಿಸ್ ಕೊಟ್ಟಿದ್ದು ಏಕೆ? ಈ ಕೇಸ್ಗೂ ಮಿಲನ ಪ್ರಕಾಶ್ಗೂ ಏನು ಸಂಬಂಧ? ಈ ಪ್ರಶ್ನೆಗಳಿಗೆ ಉತ್ತರವೆಂಬಂತೆ ಒಂದಿಷ್ಟು ಸುದ್ದಿಗಳು ಓಡಾಡುತ್ತಿದೆ. ಅಷ್ಟಕ್ಕೂ ಒಂದೂವರೆ ಗಂಟೆಯಲ್ಲಿ ಪೊಲೀಸರು ಮಿಲನ ಪ್ರಕಾಶ್ರಿಂದ ಏನೆಲ್ಲ ಮಾಹಿತಿ ಪಡೆದರು ಅನ್ನೋದು ಕುತೂಹಲ ಮೂಡಿಸಿದೆ. ದರ್ಶನ್ ನಟಿಸುತ್ತಿದ್ದ 'ಡೆವಿಲ್' ಸಿನಿಮಾದ ನಿರ್ಮಾಪಕ ಕಮ್ ನಿರ್ದೇಶಕ ಮಿಲನ ಪ್ರಕಾಶ್ಗೆ ನೋಟಿಸ್ ನೀಡಿದ ಬೆನ್ನಲ್ಲೇ ವಿಚಾರಣೆಗೆ ಹಾಜರಾಗಿದ್ದರು. ಎಸಿಪಿ ಕಚೇರಿಯಲ್ಲಿ ಇವರನ್ನು ವಿಚಾರಣೆಗೆ ಹಾಜರಾಗಿದ್ದು, ರೇಣುಕಾಸ್ವಾಮಿ ಕೊಲೆಯಾದ ಬಳಿಕ ಮೈಸೂರಿನಲ್ಲಿ ದರ್ಶನ್ 'ಡೆವಿಲ್' ಸಿನಿಮಾ ಶೂಟಿಂಗ್ಗೆ ಭಾಗಿಯಾಗಿದ್ದರು. ಅಲ್ಲಿನ ಕೆಲವು ವಿಚಾರಗಳನ್ನು ಮಿಲನ ಪ್ರಕಾಶ್ ಅವರಿಂದ ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ.

ಇದನ್ನೂ ವೀಕ್ಷಿಸಿ:  ಕಬಾಬ್‌ನಲ್ಲೂ .. ಗೋಬಿಯಲ್ಲೂ ವಿಷ..! ಸರ್ಕಾರ ಬ್ಯಾನ್ ಮಾಡಿದ್ರೂ ವ್ಯಾಪಾರಿಗಳು ಬಿಡ್ತಿಲ್ಲ..!

04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ