10 ವರ್ಷಗಳ ಬಳಿಕ ಡೈರೆಕ್ಟರ್ ಕ್ಯಾಪ್ ತೊಟ್ಟ ಕಿಚ್ಚ ಸುದೀಪ್..! ಫಸ್ಟ್ ಟೈಂ ಪ್ಯಾನ್ ಇಂಡಿಯಾ ಸಿನಿಮಾ ಡೈರೆಕ್ಷನ್..!

10 ವರ್ಷಗಳ ಬಳಿಕ ಡೈರೆಕ್ಟರ್ ಕ್ಯಾಪ್ ತೊಟ್ಟ ಕಿಚ್ಚ ಸುದೀಪ್..! ಫಸ್ಟ್ ಟೈಂ ಪ್ಯಾನ್ ಇಂಡಿಯಾ ಸಿನಿಮಾ ಡೈರೆಕ್ಷನ್..!

Published : Sep 03, 2023, 09:05 AM IST

50ನೇ ವರ್ಷದ ಹುಟ್ಟುಹಬ್ಬದಲ್ಲಿ ಬಾದ್ ಷಾ..!
ಬರ್ತ್ ಡೇ ದಿನ ಅಭಿಮಾನಿಗಳಿಗೆ ಭರಪೂರ ಗಿಫ್ಟ್..!
10 ವರ್ಷಗಳ ಬಳಿಕ ಡೈರೆಕ್ಟರ್ ಕ್ಯಾಪ್ ತೊಟ್ಟ ಕಿಚ್ಚ

ಅಭಿನಯ ಚಕ್ರವರ್ತಿ, ಕರುನಾಡ ಮಾಣಿಕ್ಯ, ಸ್ಯಾಂಡಲ್‌ವುಡ್‌ನ ಕೋಟಿಗೋಬ್ಬನಿಗೆ 51ನೇ ಹುಟ್ಟು ಹಬ್ಬದ ಸಂಭ್ರಮ. ಕಿಚ್ಚ ಸುದೀಪ್(Sudeep) ಅಭಿಮಾನಿಗಳು ಸುದೀಪ್ ಅವರ ಹುಟ್ಟು ಹಬ್ಬವನ್ನ(Birth Day) ಕಿಚ್ಚೋತ್ಸವವಾಗಿ ಆಚರಿಸಿದ್ರು. ಇದಕ್ಕೆ ಕಿಚ್ಚ ಸುದೀಪ್ ತಮ್ಮ ಅಭಿಮಾನಿಗಳಿಗೆ ಬಿಗ್ ಗಿಫ್ಟ್ ಕೊಟ್ಟಿದ್ದಾರೆ. ಅದ್ರಲ್ಲಿ 10 ವರ್ಷಗಳ ಬಳಿಕ ಮತ್ತೆ ನಿರ್ದೇಶಕನ ಕ್ಯಾಪ್ ತೊಡುತ್ತಿದ್ದಾರೆ ಸುದೀಪ್. ಅದೂ ಕೂಡ ಪ್ಯಾನ್ ಇಂಡಿಯಾ(Pan India) ಲೆವಲ್‌ನಲ್ಲಿ ಸುದೀಪ್ ಡೈರೆಕ್ಷನ್(Direction) ಮಾಡೊಕೆ ಹೊರಟಿದ್ದಾರೆ. 2014 ರಲ್ಲಿ ಬಿಡುಗಡೆಯಾಗಿದ್ದ ‘ಮಾಣಿಕ್ಯ’ ಸಿನಿಮಾದ ಬಳಿಕ ಯಾವುದೇ ಸಿನಿಮಾವನ್ನು ಸುದೀಪ್ ನಿರ್ದೇಶನ ಮಾಡಿರಲಿಲ್ಲ. ಆದ್ರೆ ಕೋಟಿಗೋಬ್ಬನ ಕೋಟಿ ಕೋಟಿ ಕನಸುಗಳನ್ನ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ತೋರಿಸೋಕೆ ಹೊರಟಿದ್ದಾರೆ. ಸುದೀಪ್ ನಿರ್ದೇಶಿಸಲಿರುವ ಸಿನಿಮಾವನ್ನು ಕೆಆರ್‌ಜಿ ಸ್ಟುಡಿಯೋಸ್ ನಿರ್ಮಾಣ ಮಾಡಲಿದೆ. ಇನ್ನು ಈ ಸಿನಿಮಾದ ಕೆಲಸ 2024ಕ್ಕೆ ಶುರುವಾಗಿಲಿದೆ. ‘ದೇವರು ಕ್ಷಮಿಸುತ್ತಾನೆ ಆದರೆ ನಾನು ಕ್ಷಮಿಸುವುದಿಲ್ಲ’ ಎಂಬ ಟ್ಯಾಗ್ ಲೈನ್ ಅನ್ನು ಸಿನಿಮಾಕ್ಕೆ ನೀಡಲಾಗಿದೆ. ಸಿನಿಮಾಕ್ಕೆ ಸದ್ಯಕ್ಕೆ ಕೆಕೆ ಅನ್ನೋ ಹೆಸರನ್ನಷ್ಟೆ ಇಡಲಾಗಿದೆ.

ಇದನ್ನೂ ವೀಕ್ಷಿಸಿ:  ಹುಟ್ಟುಹಬ್ಬದ 'ಸುವರ್ಣ' ಮಹೋತ್ಸವದಲ್ಲಿ ಕಿಚ್ಚ: ಅಭಿಮಾನದ 'ಕಿಚ್ಚೋತ್ಸವ'ದಲ್ಲಿ ಮಿಂದೆದ್ದ ಸುದೀಪ್ ಏನಂದ್ರು.?

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!