ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?

ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?

Published : Nov 13, 2025, 01:23 PM ISTUpdated : Nov 13, 2025, 03:55 PM IST

ಕಳೆದ ಕೆಲ ದಿನಗಳಿಂದ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲ್ ವಿಷ್ಯ ದೇಶಾದ್ಯಂತ ಸದ್ದು ಮಾಡಿದೆ. ಜೈಲು ಒಳಗಿರೋ ಕೈದಿಗಳಿಗೆ ರಾಜಾತಿತ್ಯ ನೀಡಲಾಗ್ತಾ ಇದೆ ಅನ್ನೋದು ಲೀಕ್ ಆಗಿರೋ ವಿಡಿಯೋಗಳ ಮೂಲಕ ಜಗಜ್ಜಾಹೀರಾಗಿವೆ. ಏನೇನು ಆಗಿದೆ? ಸ್ಟೋರಿ ನೋಡಿ..

ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲ್ ಒಳಗಿನ ಕೈದಿಗಳ ಕಳ್ಳಾಟ ದ ವಿಡಿಯೋ ಗಳು ಹೊರಬಂದು ಅಲ್ಲೋಲ ಕಲ್ಲೋಲ ಮಾಡಿವೆ. ಟೆರರಿಸ್ಟ್ ಗಳ ಕೈಗೆ ಮೊಬೈಲ್ ಸಿಗ್ತಾ ಇದೆ ಅನ್ನೋ ವಿಷ್ಯ ದೇಶವನ್ನೇ ಬೆಚ್ಚಿ ಬೀಳಿಸಿದೆ. ಅಸಲಿಗೆ ಈ ಜೈಲು ಕಳ್ಳಾಟ ಹೊರ ಬೀಳೋದಕ್ಕೆ ದರ್ಶನ್ ಅಸಲಿ ಕಾರಣನಾ..? ದಾಸನ ನೆಪದಿಂದ ಪರಪ್ಪನ ಅಗ್ರಹಾರ ಕ್ಲೀನ್ ಆಯ್ತಾ..? ಆ ಎಕ್ಸ್ ಕ್ಲೂಸಿವ್ ಸ್ಟೋರಿ ಇಲ್ಲಿದೆ ನೋಡಿ.

ಎಸ್ ಕಳೆದ ಕೆಲ ದಿನಗಳಿಂದ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲ್ ವಿಷ್ಯ ದೇಶಾದ್ಯಂತ ಸದ್ದು ಮಾಡಿದೆ. ಜೈಲು ಒಳಗಿರೋ ಕೈದಿಗಳಿಗೆ ರಾಜಾತಿತ್ಯ ನೀಡಲಾಗ್ತಾ ಇದೆ ಅನ್ನೋದು ಲೀಕ್ ಆಗಿರೋ ವಿಡಿಯೋಗಳ ಮೂಲಕ ಜಗಜ್ಜಾಹೀರಾಗಿವೆ.

ಅಸಲಿಗೆ ಈ ಜೈಲುಗಳ ಖರಾಬ್ ಕಥೆ ಹೊರ ಬರೋದಕ್ಕೆ ಕಾರಣ ದಾಸ ಅಂದರ್ ಆಗಿರೋದು. ಕಳೆದ ಸಾರಿ ದರ್ಶನ್ , ರೌಡಿಗಳ ಟೀಮ್ ಜೊತೆ ದಂ ಹೊಡೀತಾ ಕೂತ ಫೋಟೋಸ್ ಹೊರಬಂದು ಹಲ್ ಚಲ್ ಎಬ್ಬಿಸಿದ್ವು.

ಆಗ ದಾಸನನ್ನ ಬಳ್ಳಾರಿಗೆ ಎತ್ತಂಗಡಿ ಮಾಡಲಾಗಿತ್ತು. ಅದರ ಜೊತೆಗೆ ಪರಪ್ಪನ ಅಗ್ರಹಾರ ಕೂಡ ಕ್ಲೀನ್ ಆಗಿತ್ತು. ಬೃಷ್ಟ ಅಧಿಕಾರಿಗಳು ಸಸ್ಪೆಂಡ್ ಆಗಿ ಮನೆ ಸೇರಿದ್ರು.

ಟೆರರಿಸ್ಟ್, ರೇಪಿಸ್ಟ್ ಗಳಿಗೆ ನಡುಕ ಹುಟ್ಟಿಸಿದ ಡೆವಿಲ್..!
ಈ ಸಾರಿಯಂತೂ ಪರಪ್ಪನ ಅಗ್ರಹಾರದಲ್ಲಿ ರೇಪಿಸ್ಟ್ ಉಮೇಶ್ ರೆಡ್ಡಿ , ಐಸಿಸ್ ಟೆರರಿಸ್ಟ್ ಜುಹಾದ್ ಹಮೀದ್ ಶಕೀಲ್ ಮನ್ನಾ ಸೇರಿದಂತೆ ಜೈಲ್ ನಲ್ಲಿರೋ ಕೈದಿಗಳಿಗೆಲ್ಲ ಮೊಬೈಲ್ ಸೇರಿದಂತೆ ಸೌಲತ್ತು ಕೊಟ್ಟಿರೋ ವಿಡಿಯೋ ಹೊರಬಂದಿವೆ.

ಹೌದು ದರ್ಶನ್ ಗೆ ಈ ಸಾರಿ ಪರಪ್ಪನ ಅಗ್ರಹಾರದಲ್ಲಿ ನೆಟ್ಟಗೆ ಹಾಸಿಗೆ, ದಿಂಬು ಕೂಡ ಕೊಡ್ತಾ ಇಲ್ಲ. ಈ ಬಗ್ಗೆ ಕೋರ್ಟ್ನ ನಲ್ಲಿ ಪದೇ ಮನವಿ ಮಾಡಿದ್ರು ಪ್ರಯೋಜನ ಆಗಿಲ್ಲ. ಆದ್ರೆ ಬೇರೆ ಕೈದಿಗಳಿಗೆ, ಅದರಲ್ಲೂ ನಟೋರಿಯಸ್ ಕ್ರಿಮಿನಲ್ ಗಳಿಗೆ ಬೇಕಿದ್ದೆಲ್ಲಾ ಸಿಕ್ತ ಇದೆ.

ದರ್ಶನ್ ಗೆ ಅನ್ಯಾಯ ಆಗ್ತಾ ಇದೆ ಅಂತ , ಅವರ ಬಂಟ ಧನ್ವೀರ್ ಜೈಲ್ ನಲ್ಲಿರೋ ವಿಡಿಯೋ ವೈರಲ್ ಮಾಡಿದ್ದಾರೆ ಅಂತ ಸಿಸಿಬಿ ವಿಚಾರಣೆ ಮಾಡಿದೆ. ದಾಸನಿಗೆ ಸಿಗದೇ ಇದ್ದಿದ್ದು ಯಾರಿಗೂ ಸಿಗಬಾರದು ಅಂತ ಧನ್ವೀರ್ ಹೀಗೆ ಮಾಡಿದ್ರು ಎನ್ನಲಾಗ್ತಾ ಇದೆ

ಪೊರ್ಕಿ ಚಿತ್ರದಲ್ಲಿ ಕೈದಿಗಳ ಕಳ್ಳಾಟ ಬಯಲು ಮಾಡಿದ್ದ ದಚ್ಚು; ಈಗ ಖೈದಿಯಾಗಿ ಪರಪ್ಪನ ಅಗ್ರಹಾರ ಕ್ಲೀನ್ ಮಾಡಿದ್ರಾ ದಾಸ..?

ನಿಮಗೆಲ್ಲ ದರ್ಶನ್ ನಟನೆಯ ಪೊರ್ಕಿ ಸಿನಿಮಾ ನೆನಪಿದೆ ಅಲ್ವಾ. ಪೋರ್ಕಿಗಳ ಜೊತೆ ಸೇರಿ ಪೋರ್ಕಿಗಳ ಬಂಡವಾಳ ಬಯಲು ಮಾಡೋ ಪೊಲೀಸ್ ಕಥೆ ಅದು. ದರ್ಶನ್ ಅಲ್ಲಿ ಪೊರ್ಕಿ ಪೊಲೀಸ್ ಆಗಿ ಮಿಂಚಿದ್ರು..

ದರ್ಶನ್ ನೆಪದಿಂದ ಕ್ಲೀನ್ ಆಯ್ತಾ ಪರಪ್ಪನ ಅಗ್ರಹಾರ..?
ಈಗ ಕೈದಿಗಳ ಜೊತೆ ಕೈದಿಯಾಗಿ ಜೈಲಿನ ಕಳ್ಳಾಟ ಬಯಲು ಮಾಡ್ತಾ ಇದ್ದಾರೆ ದರ್ಶನ್. ಹಾಗಂತ ದರ್ಶನ್ ಏನೂ ತಪ್ಪು ಮಾಡದೇ ಜೈಲು ಸೇರಿದ್ದಾರೆ ಅಂತ ಅಲ್ಲ. ತನ್ನ ತಪ್ಪಿಗೆ ತಕ್ಕ  ಶಿಕ್ಷೆ ಅನುಭವಿಸ್ತಾ ಇದ್ದಾರೆ. ಈ ನಡುವೆ ಪರೋಕ್ಷ ವಾಗಿ ಜೈಲು ಕ್ವೀನ್ ಮಾಡ್ತಾ ಇದಾರೆ. ಇದನ್ನ ಆಪರೇಷನ್ ಜೈಲು ' ದರ್ಶನ ' ಅಂದ್ರೆ ತಪ್ಪಾಗಲ್ಲ. ಯಾಕಂದ್ರೆ ದರ್ಶನ್​​ ಜೈಲು ಸೇರಿದ ಮೇಲೆ ಪರಪ್ಪನ ಅಗ್ರಹಾರ ಕರ್ಮಕಾಂಡಗಳೆಲ್ಲಾ ಬಯಲಿಗೆ ಬರುತ್ತಿವೆ ಅಂತ ಅವರ ಫ್ಯಾನ್ಸ್​ ಬಳಹ ಹೇಳುತ್ತಿದೆ. 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more