ಮಹಿಷನ ಅವತಾರದಲ್ಲಿ ಪ್ರಜ್ವಲ್ ದೇವರಾಜ್: ಯಕ್ಷಗಾನ ಕಲಾವಿದನಾದ ಡೈನಾಮಿಕ್ ಪ್ರಿನ್ಸ್!

ಮಹಿಷನ ಅವತಾರದಲ್ಲಿ ಪ್ರಜ್ವಲ್ ದೇವರಾಜ್: ಯಕ್ಷಗಾನ ಕಲಾವಿದನಾದ ಡೈನಾಮಿಕ್ ಪ್ರಿನ್ಸ್!

Published : Apr 11, 2024, 04:26 PM IST

ಮೊಟ್ಟ ಮೊದಲ ಬಾರಿಗೆ ಪ್ರಜ್ವಲ್ ದೇವರಾಜ್ ಯಕ್ಷಗಾನ ವೇಷಧಾರಿಯಾಗಿ ಕಾಣಿಸಿಕೊಂಡಿದ್ದಾರೆ. ಗುರುದತ್ ಗಾಣಿಗ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಕರಾವಳಿ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ.

ಯಕ್ಷಗಾನ ನಮ್ಮ ನಾಡಿಕ ಕಲೆ. ಕರಾವಳಿ ಮಲೆನಾಡು ಭಾಗದ ಜೀವಸೆಲೆ. ಈ ಯಕ್ಷಗಾನ ಕಲೆ ಎಲ್ಲರನ್ನು ಸೆಳೆಯುತ್ತೆ. ಸಿನಿಮಾದಲ್ಲಿ ಆಗೊಂದು ಈಗೊಂದು ದೃಶ್ಯದಲ್ಲಿ ಯಕ್ಷಗಾನ ಬಂದು ಹೋಗುತ್ತಿತ್ತು. ಆದ್ರೆ ಈಗ ಅದೇ ಯಕ್ಷಗಾನ ಕಲೆಯ ಸುತ್ತಲೆ ಕನ್ನಡದಲ್ಲಿ ಹೊಸ ಸಿನಿಮಾ ಸಿದ್ಧವಾಗುತ್ತಿದೆ. ಆ ಸಿನಿಮಾದಲ್ಲಿ ಹೀರೋ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್. ಇದೀಗ ಯುಗಾಧಿ ಹಬ್ಬದ ನಿಮಿತ್ತ ಪ್ರಜ್ವಲ್ ದೇವರಾಜ್ ಮಹಿಷನ ಅವತಾರದಲ್ಲಿ ಯಕ್ಷಗಾನ ಕಲಾವಿಧನಾಗಿ ಬಂದಿದ್ದಾರೆ. ಇದು ಪ್ರಜ್ವಲ್ ದೇವರಾಜ್ ನಟಿಸುತ್ತಿರೋ ಕರಾವಳಿ ಸಿನಿಮಾದ ಮಹಿಷನ ಲುಕ್.

ಈ ಲುಕ್ ನೋಡಿದ್ರೆ ನಿಜಕ್ಕೂ ಪ್ರಜ್ವಲ್ ಅವರೇನಾ ಎಂದು ಅಚ್ಚರಿ ಆಗುತ್ತೆ. ಮೊಟ್ಟ ಮೊದಲ ಬಾರಿಗೆ ಪ್ರಜ್ವಲ್ ದೇವರಾಜ್ ಯಕ್ಷಗಾನ ವೇಷಧಾರಿಯಾಗಿ ಕಾಣಿಸಿಕೊಂಡಿದ್ದಾರೆ. ಗುರುದತ್ ಗಾಣಿಗ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಕರಾವಳಿ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಸದ್ಯ ಪ್ರಜ್ವಲ್ ದೇವರಾಜ್ ಅವರ ಹೊಸ ಲುಕ್ ರಿವೀಲ್ ಮಾಡುವ ಮೂಲಕ ಸಿನಿಮಾತಂಡ ನಿರೀಕ್ಷೆ ದುಪ್ಪಟ್ಟು ಮಾಡಿದೆ. ಕಂಬಳದ ಜೊತೆಗೆ ಯಕ್ಷಗಾನ ಕೂಡ ಕರಾವಳಿ ಸಿನಿಮಾದ ಹೈಲೈಟ್. ಅಂದಹಾಗೆ ಈ ಲುಕ್ ಅನ್ನು  ಪ್ರೊಫೆಷನಲ್ ಕಲಾವಿದರೇ ಮಾಡಿದ್ದು ವಿಶೇಷ. 

ಯಕ್ಷಗಾನ ಭಾಗವತರೇ ಆಗಿರುವ ಪಲ್ಲವ ಗಾಣಿಗ ಎನ್ನುವರು ಈ ಲುಕ್ ಡಿಸೈನ್ ಮಾಡಿದ್ದಾರೆ. ಪ್ರಜ್ವಲ್ ಅವರಿಗೆ ಈ ಲುಕ್ ಡಿಸೈನ್ ಮಾಡಲು ಅರ್ಥ ದಿನಾ ತೆಗೆದುಕೊಂಡಿದ್ದಾರೆ. ಕರಾವಳಿ ಮನುಷ್ಯ ಹಾಗೂ ಪ್ರಾಣಿಯ ಮಧ್ಯೆ ನಡೆಯುವ ಸಂಘರ್ಷದ ಕಥೆ. ಪಕ್ಕಾ ಹಳ್ಳಿ ಬ್ಯಾಕ್ ಡ್ರಾಪ್ ನಲ್ಲಿ ಮೂಡಿ ಬರಲಿದೆ. ಕರಾವಳಿ ಸಿನಿಮಾಗೆ ಅಭಿಮನ್ಯು ಸದಾನಂದ್ ಕ್ಯಾರೆಮಾ ವರ್ಕ್ ಇದೆ,  ಸಚಿನ್ ಬಸ್ರೂರು ಸಂಗೀತ ಚಿತ್ರಕ್ಕಿದೆ. ಇನ್ನು ಉಳಿದಂತೆ ಈ ಸಿನಿಮಾದಲ್ಲಿ  ನಟ ಮಿತ್ರ, ಟಿವಿ ಶ್ರೀಧರ್, ಜಿ ಜಿ, ನಿರಂಜನ್ ಸೇರಿದಂತೆ ಹಲವು ಪ್ರಖ್ಯಾತ ಕಲಾವಿದರು ನಟಿಸುತ್ತಿದ್ದಾರೆ.

04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
Read more