ರಿಷಬ್‌ ಶೆಟ್ಟಿ ಅವರ ಮೇಲಿನ ನಂಬಿಕೆಯೇ ಈ ಸಿನಿಮಾ ಮಾಡಲು ಕಾರಣವಾಯಿತು: ಸಂದೇಶ್‌ ನಾಗರಾಜ್‌

Jun 17, 2022, 12:57 PM IST

ರಿಷಬ್‌ ಶೆಟ್ಟಿ ನಟನೆಯ ‘ಹರಿಕಥೆ ಅಲ್ಲ ಗಿರಿಕಥೆ’ ಇತ್ತೀಚೆಗಷ್ಟೇ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ಕರಣ್‌ ಅನಂತ್‌ ಹಾಗೂ ಅನಿರುದ್ಧ್ ಮಹೇಶ್‌ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರಕ್ಕೆ ಬಂಡವಾಳ ಹೂಡಿರುವ ಸಂದೇಶ್ ನಾಗರಾಜ್ ಸಿನಿಮಾ ಬಗ್ಗೆ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾರೆ. ರಿಷಬ್‌ ಶೆಟ್ಟಿ ಡೈರೆಕ್ಷನ್ ಇಷ್ಟ. ಅವರ ಮೇಲಿನ ನಂಬಿಕೆಯೇ ಈ ಸಿನಿಮಾ ಮಾಡಲು ಕಾರಣವಾಯಿತು. ಒಳ್ಳೆಯ ಕತೆ ಇದೆ. ದೊಡ್ಡ ಮಟ್ಟದಲ್ಲಿ ಸಿನಿಮಾ ಬಿಡುಗಡೆ ಮಾಡುತ್ತಿದ್ದೇವೆ. ಒಳ್ಳೆಯ ಸಿನಿಮಾಗಳನ್ನು ಎಲ್ಲರು ನೋಡುತ್ತಾರೆಂಬ ನಂಬಿಕೆ ಇದೆ ಎಂದರು. ಇನ್ನು ಹೀರೋ ಪ್ರಧಾನವಾದ 'ಕೆಜಿಎಫ್‌' ನೋಡಿದ್ದಾರೆ. ಭಾವನೆಗಳನ್ನು ಹಂಚಿಕೊಳ್ಳುವ '777 ಚಾರ್ಲಿ' ಚಿತ್ರವನ್ನೂ ನೋಡಿ ಗೆಲ್ಲಿಸುವ ಪ್ರೇಕ್ಷಕನಿಗೆ ಈಗ ನಗುವ ಸಮಯ. ಅಂದರೆ ನಮ್ಮ ಹರಿಕಥೆ ಅಲ್ಲ ಗಿರಿಕಥೆ ಚಿತ್ರ ಸಂಪೂರ್ಣವಾಗಿ ಮನರಂಜನೆ ಪ್ರಧಾನವಾಗಿರುತ್ತದೆ ಎಂದು ರಿಷಬ್‌ ಶೆಟ್ಟಿ ಈ ಸಂದರ್ಭದಲ್ಲಿ ಹೇಳಿದರು.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies