ರಾಜ್ಯಾದ್ಯಂತ ತೆರೆಗೆ ಬಂದಿದೆ ಕೊತ್ತಲವಾಡಿ: ಹಳ್ಳಿ ಕಥೆಗೆ ಪೃಥ್ವಿ ಅಂಬರ್ ಮಾಸ್ ಟಚ್!

ರಾಜ್ಯಾದ್ಯಂತ ತೆರೆಗೆ ಬಂದಿದೆ ಕೊತ್ತಲವಾಡಿ: ಹಳ್ಳಿ ಕಥೆಗೆ ಪೃಥ್ವಿ ಅಂಬರ್ ಮಾಸ್ ಟಚ್!

Published : Aug 02, 2025, 04:40 PM ISTUpdated : Aug 02, 2025, 04:41 PM IST

ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಅರುಣ್​ಕುಮಾರ್ ನಿರ್ಮಾಣದ ಕೊತ್ತಲವಾಡಿ ಸಿನಿಮಾ ರಾಜ್ಯಾದ್ಯಂತ ತೆರೆಗೆ ಬಂದಿದೆ. ಸದ್ಯ ಅದೇ ಭರವಸೆಯೊಂದಿಗೆ ಚಿತ್ರ ನೋಡಿದ ಪ್ರೇಕ್ಷಕರು ಏನಂದ್ರು..? ಪ್ರೇಕ್ಷಕರ ರೆಸ್ಪಾನ್ಸ್ ನೋಡಿ ಚಿತ್ರತಂಡದವರು ಏನಂದ್ರು. ನೋಡೋಣ ಬನ್ನಿ.

ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಅರುಣ್​ಕುಮಾರ್ ನಿರ್ಮಾಣದ ಕೊತ್ತಲವಾಡಿ ಸಿನಿಮಾ ರಾಜ್ಯಾದ್ಯಂತ ತೆರೆಗೆ ಬಂದಿದೆ. ಪೃಥ್ವಿ ಅಂಬರ್-ಕಾವ್ಯ ಶೈವ ನಟಿಸಿರೋ ಈ ಸಿನಿಮಾ ತನ್ನ ಟ್ರೈಲರ್ & ಸಾಂಗ್ಸ್ ನಿಂದ ಭರವಸೆ ಮೂಡಿಸಿತ್ತು. ಈ ಸಿನಿಮಾ ಔಟ್ ಅಂಡ್ ಔಟ್ ಹಳ್ಳಿ ಸೊಗಡಿನ ಕಥೆಯಾಗಿದೆ. ರಾಜ್ಯದೆಲ್ಲೆಡೆ ಮರಳು ಮಾಫಿಯಾ ನಡೆಯುತ್ತದೆ ಅನ್ನೋ ಸುದ್ದಿ ಕೇಳ್ತಾನೆ ಇರ್ತೀವಿ. ಇಂಥದ್ದೇ ಕಥೆಯನ್ನು ಕೊತ್ತಲವಾಡಿ ಒಳಗೊಂಡಿದೆ. ಕೊತ್ತಲವಾಡಿ ಹಳ್ಳಿ ಸುತ್ತ ಹಚ್ಚ ಹಸಿರ ಅರಣ್ಯ. ಇದರ ಮಧ್ಯೆ ಕಾವೇರಿ ನದಿ ಹರಿದು ಹೋಗುತ್ತದೆ. ಈ ನದಿಗೂ ಕೊತ್ತಲವಾಡಿ ಹಳ್ಳಿಯ ಜನರಿಗೂ ಒಂದು ಸಂಬಂಧವಿದೆ. ಅದು ಏನು ಅನ್ನೋದನ್ನು ನೀವು ಚಿತ್ರಮಂದಿರಗಳಲ್ಲೇ ನೋಡಬೇಕು.

ಪಕ್ಕಾ ಹಳ್ಳಿ ಹೈದನಾಗಿ ಪೃಥ್ವಿ ಅಂಬಾರ್​ ಪ್ರೇಕ್ಷಕರಿಗೆ ದರ್ಶನ ಕೊಟ್ಟಿದ್ದಾರೆ. ಅತ್ಯುತ್ತಮ ಅಭಿನಯದ ಜೊತೆಗೆ ಆ್ಯಕ್ಷನ್​​ನಿಂದಾಗಿ ಸಖತ್​ ಮಾಸ್ ಆಗಿ ಕಾಣಿಸಿಕೊಂಡಿದ್ದಾರೆ. ಪೃಥ್ವಿ ಪ್ರೇಯಸಿಯಾಗಿ ಕಾವ್ಯ ಶೈವ ಹಳ್ಳಿ ಹುಡುಗಿ ಪಾತ್ರದಲ್ಲಿ ಮಿಂಚಿದ್ದಾರೆ. ಗುಜಾರಿ ಬಾಬು ಎಂಬ ಸಮಾಜ ಸೇವಕನ ಪಾತ್ರದಲ್ಲಿ ಗೋಪಾಲಕೃಷ್ಣ ದೇಶಪಾಂಡೆ ಅವರು ಕುತಂತ್ರಿಯಾಗಿ ಕೊತ್ತಲವಾಡಿ ಚಿತ್ರಪೂರ್ತಿ ಅವರಿಸಿಕೊಂಡಿದ್ದಾರೆ. ಉಳಿದಂತೆ ರಾಜೇಶ್ ನಟರಂಗ, ಅವಿನಾಶ್, ಬಲ ರಾಜ್ವಾಡಿ ಹಾಗೂ ರಘು ರಾಮನಕೊಪ್ಪ ತಮಗೆ ಕೊಟ್ಟ ಪಾತ್ರದಲ್ಲಿ ಗಮನ ಸೆಳೆದಿದ್ದಾರೆ. ಸದ್ಯ ಅದೇ ಭರವಸೆಯೊಂದಿಗೆ ಚಿತ್ರ ನೋಡಿದ ಪ್ರೇಕ್ಷಕರು ಏನಂದ್ರು..? ಪ್ರೇಕ್ಷಕರ ರೆಸ್ಪಾನ್ಸ್ ನೋಡಿ ಚಿತ್ರತಂಡದವರು ಏನಂದ್ರು. ನೋಡೋಣ ಬನ್ನಿ.

02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
Read more