ರಾಯರ ಸನ್ನಿಧಿಗೆ ಭೇಟಿ ನೀಡಿದ್ದ ಪುನೀತ್, ಅಂದು ನಡೆದಿತ್ತು ಪವಾಡ!

Oct 31, 2021, 2:30 PM IST

ಮಂತ್ರಾಲಯ(ಅ.21): ಸ್ಯಾಂಡಲ್‌ವುಡ್‌ ಸ್ಟಾರ್ ನಟ, ಪವರ್‌ ಸ್ಟಾರ್‌ ಪುನೀತ್ ರಾಜ್‌ಕುಮಾರ್‌ ನಿಧನದಿಂದ ರಾಜ್ಯಾದ್ಯಂತ ಶೋಕದ ವಾತಾವರಣ ನಿರ್ಮಾಣವಾಗಿದೆ. ಅತ್ತ ಸ್ಯಾಂಡಲ್‌ವುಡ್‌ ಇಂಡಸ್ಟ್ರಿಯಲ್ಲೂ ದುಃಖದ ವಾತಾವರಣ ಮಡುಗಟ್ಟಿದೆ. ಹೀಗಿರುವಾಗ ಪುನೀತ್ ರಾಜ್‌ಕುಮಾರ್‌ ಮಂತ್ರಾಲಯಕ್ಕೆ ಭೇಟಿ ನಿಡಿದಾಗ, ರಾಯರ ಸನ್ನಿಧಿಯಲ್ಲಿ ನಡೆದ ಘಟನೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹೌದು ಸುಭುದೇಂದ್ರ ತೀರ್ಥರ ಸಮಕ್ಷಮದಲ್ಲಿ ಈ ಪವಾಡ ನಡೆದಿತ್ತೆನ್ನಲಾಗಿದೆ. ಕಳೆದ ಬಾರಿ ಮಂತ್ರಾಲಯಕ್ಕೆ (Mantralaya) ಭೇಟಿ ನೀಡಿದ್ದ ಪುನೀತ್ ರಾಜ್‍ಕುಮಾರ್ ಭಾಗ್ಯವಂತ ಸಿನಿಮಾ ಬಗ್ಗೆ ವಿವರವಾಗಿ ಮಾತನಾಡಿದ್ದರು. ಮುಂದಿನ ಬಾರಿ ರಾಯರ ಆರಾಧನೆ ಬರುತ್ತೇನೆ ಎಂದು ಪುನೀತ್ ಹೇಳುತ್ತಿದ್ದಾಗಲೇ  ರಾಯರ ಮುಖವಾಡ ಅಲುಗಾಡಿತ್ತು. ವೀಣೆ ಸೆಹ ಕೆಳಕ್ಕೆ ಬಿಳುವ ಸಾಧ್ಯತೆ ಇದ್ದು ಸರಿ ಮಾಡಲಾಗಿತ್ತು. ಇದೊಂದು ಕೆಟ್ಟ ಸೂಚನೆ ಸಿಕ್ಕಿತ್ತಾ ಎನ್ನುವ ಮಾತನ್ನು ಅಭಿಮಾನಿಗಳು ಆಡಿಕೊಳ್ಳುತ್ತಿದ್ದಾರೆ.