James 2022: ಪುನೀತ್‌ ರಾಜ್‌ಕುಮಾರ್‌ಗಾಗಿ ಕುಣಿದು ಕುಪ್ಪಳಿಸಿದ ಫ್ಯಾನ್ಸ್

James 2022: ಪುನೀತ್‌ ರಾಜ್‌ಕುಮಾರ್‌ಗಾಗಿ ಕುಣಿದು ಕುಪ್ಪಳಿಸಿದ ಫ್ಯಾನ್ಸ್

Suvarna News   | Asianet News
Published : Mar 18, 2022, 12:27 PM IST

ಕರ್ನಾಟಕದಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಅಭಿಮಾನಿಗಳು ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬವನ್ನು ಹಾಗೂ 'ಜೇಮ್ಸ್' ಚಿತ್ರವನ್ನು ಸಂಭ್ರಮಿಸಿದ್ದಾರೆ. ಹಾಗೂ ಪುನೀತ್​ ಅವರು ಈಗಲೂ ನಮ್ಮ ಜತೆಗೆ ಇದ್ದಾರೆ ಎನ್ನುವ ಭಾವನೆಯನ್ನು ಅಭಿಮಾನಿಗಳು ವ್ಯಕ್ತಪಡಿಸುತ್ತಿದ್ದಾರೆ.

ರಾಜರ ರಾಜ ಪವರ್ ಸ್ಟಾರ್ ಡಾ. ಪುನೀತ್ ರಾಜ್‍ಕುಮಾರ್ (Puneeth Rajkumar) ಅಭಿನಯದ ಕೊನೆಯ ಚಿತ್ರ 'ಜೇಮ್ಸ್' (James) ಗುರುವಾರ ವಿಶ್ವಾದ್ಯಂತ ತೆರೆಕಂಡು ಭರ್ಜರಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಮಾತ್ರವಲದೇ ಅಪ್ಪು ಹುಟ್ಟುಹಬ್ಬದ ದಿನವೇ 'ಜೇಮ್ಸ್' ಸಿನಿಮಾ ರಿಲೀಸ್ ಆಗಿದ್ದರಿಂದ ಚಿತ್ರವನ್ನು ಅಭಿಮಾನಿಗಳು (Fans) ಹಬ್ಬದ ರೀತಿ ಬರಮಾಡಿಕೊಂಡಿದ್ದರು. ಕರ್ನಾಟಕದಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಅಭಿಮಾನಿಗಳು ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬವನ್ನು ಹಾಗೂ 'ಜೇಮ್ಸ್' ಚಿತ್ರವನ್ನು ಸಂಭ್ರಮಿಸಿದ್ದಾರೆ. ಹಾಗೂ ಪುನೀತ್​ ಅವರು ಈಗಲೂ ನಮ್ಮ ಜತೆಗೆ ಇದ್ದಾರೆ ಎನ್ನುವ ಭಾವನೆಯನ್ನು ಅಭಿಮಾನಿಗಳು ವ್ಯಕ್ತಪಡಿಸುತ್ತಿದ್ದಾರೆ.

ಡಬ್ಬಿಂಗ್ ಮಾಡುವಾಗ ಅಪ್ಪು ಇಲ್ಲೇ ಇದ್ದಾನೆ ಅನಿಸುತ್ತಿತ್ತು: ಶಿವರಾಜ್‌ಕುಮಾರ್

ಇನ್ನು ಚಿತ್ರಮಂದಿರಗಳ ಮುಂದೆ ಪುನೀತ್ ರಾಜ್‌ಕುಮಾರ್ ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಪರವಾಗಿ ಘೋಷಣೆಗಳನ್ನು ಕೂಗಿದರು. ಈ ವೇಳೆ ಹಲವು ಅಭಿಮಾನಿಗಳು ಭಾವುಕರಾದರು, ಕಣ್ಣೀರು ಸುರಿಸಿದರು. ಮತ್ತೊಂದೆಡೆ ಚಿತ್ರ ವೀಕ್ಷಿಸಿ ಹೊರ ಬಂದ ಅಭಿಮಾನಿಗಳು, ಪುನೀತ್ ರಾಜಕುಮಾರ್ ಅವರ ಧ್ವನಿಯನ್ನು ಮಿಸ್ ಮಾಡಿಕೊಳ್ಳುತ್ತಿದ್ದೇವೆ ಎಂದು ದುಃಖ ವ್ಯಕ್ತಪಡಿಸಿದರು. ವಿಶೇಷವಾಗಿ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮೇಲಿನ ಅಭಿಮಾನವನ್ನು ಹಲವು ರೀತಿಯಲ್ಲಿ ವ್ಯಕ್ತಪಡಿಸಿದರು. ಪ್ರತಿ ವರ್ಷವು ಇದೆ ರೀತಿಯಲ್ಲಿ ಹುಟ್ಟುಹಬ್ಬ ಆಚರಿಸುವುದಾಗಿಯೂ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more