ಜಡೆ ಜಗಳ ಕೊನೆಗೂ ಮುಕ್ತಾಯ:  ಏನಿದು ರಶ್ಮಿಕಾ- ಐಶ್ವರ್ಯಾ ಜಗಳ ?

ಜಡೆ ಜಗಳ ಕೊನೆಗೂ ಮುಕ್ತಾಯ: ಏನಿದು ರಶ್ಮಿಕಾ- ಐಶ್ವರ್ಯಾ ಜಗಳ ?

Published : May 20, 2023, 10:08 AM IST

ದೊಡ್ಡದಾಗಿ ಬೆಳೆಯಬಹುದಾಗಿದ್ದ ಜಗಳವನ್ನು ನಟಿ ರಶ್ಮಿಕಾ ಮಂದಣ್ಣ ಮತ್ತು ಐಶ್ವರ್ಯಾ ರಾಜೇಶ್‌ ಅಂತ್ಯಗೊಳಿಸಿದ್ದಾರೆ.

ಖ್ಯಾತ ನಟಿ ಐಶ್ವರ್ಯಾ ರಾಜೇಶ್ ಅವರು ಹಲವಾರು ಸಿನಿಮಾಗಳಲ್ಲಿ ನಟಿಸಿ ಜನಪ್ರಿಯತೆ ಪಡೆದಿದ್ದಾರೆ. ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಅವರು ಸಕ್ರಿಯರಾಗಿದ್ದಾರೆ. ಕೆಲವೇ ದಿನಗಳ ಹಿಂದೆ ರಶ್ಮಿಕಾ ಮಂದಣ್ಣ ಬಗ್ಗೆ ಅವರು ಆಡಿದ ಮಾತುಗಳು ವಿವಾದಕ್ಕೆ ಎಡೆಮಾಡಿಕೊಟ್ಟಿದ್ದವು. ‘ಪುಷ್ಪ ಸಿನಿಮಾದಲ್ಲಿನ ಶ್ರೀವಲ್ಲಿ ಪಾತ್ರವನ್ನು ರಶ್ಮಿಕಾ ಮಂದಣ್ಣ ಅವರಿಗಿಂತ ನಾನೇ ಚೆನ್ನಾಗಿ ಮಾಡುತ್ತಿದ್ದೆ’ ಎಂದು ಐಶ್ವರ್ಯಾ ರಾಜೇಶ್ ಹೇಳಿದ್ದರು ಎಂದು ಸುದ್ದಿ ಆಗಿತ್ತು. ಆದರೆ ತಾವು ಆ ರೀತಿ ಹೇಳಿಯೇ ಇಲ್ಲ ಎಂದು ಐಶ್ವರ್ಯಾ ರಾಜೇಶ್ ಸ್ಪಷ್ಟನೆ ನೀಡಿದ್ದರು. ಅದು ಈಗ ರಶ್ಮಿಕಾ ಮಂದಣ್ಣ ಅವರ ಗಮನಕ್ಕೆ ಬಂದಿದೆ. ಅದಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ದೊಡ್ಡದಾಗಿ ಬೆಳೆಯಬಹುದಾಗಿದ್ದ ಜಗಳವನ್ನು ಅವರು ಅಂತ್ಯಗೊಳಿಸಿದ್ದಾರೆ. ಯಾವುದೇ ಕಿರಿಕ್‌ಗೆ ಅವಕಾಶ ನೀಡದಂತೆ ಸ್ನೇಹದ ಹಸ್ತ ಚಾಚಿದ್ದಾರೆ. ‘ಹಾಯ್ ಲವ್.. ಈಗ ತಾನೇ ಇದನ್ನು ನೋಡಿದೆ. ವಿಷಯವೆಂದರೆ.. ನೀವು ಏನು ಹೇಳುತ್ತಿದ್ದೀರಿ ಎಂಬುದನ್ನು ನಾನು ಸಂಪೂರ್ಣವಾಗಿ ಅರ್ಥಮಾಡಿಕೊಂಡಿದ್ದೇನೆ. ನಾವು ಏನು ಎಂಬುದನ್ನು ವಿವರಿಸಬೇಕಾದ ಅವಶ್ಯಕತೆ ಇಲ್ಲ. ನಿಮಗೆ ತಿಳಿದಿರುವಂತೆ ನನಗೆ ನಿಮ್ಮ ಬಗ್ಗೆ ಪ್ರೀತಿ ಮತ್ತು ಗೌರವವಿದೆ. ನಿಮ್ಮ ‘ಫರ್ಹಾನಾ’ ಚಿತ್ರಕ್ಕೆ ಒಳ್ಳೆಯದಾಗಲಿ’ಎಂದು ರಶ್ಮಿಕಾ ಮಂದಣ್ಣ ಟ್ವೀಟ್ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ: Today Horoscope: ಶನಿವಾರದ ವಾರ ಭವಿಷ್ಯ : ಅಮೃತ ಸಿದ್ಧಿಫಲವಿದ್ದು, ಶುಭಕಾರ್ಯಗಳಿಗೆ ಈ ದಿನ ಉತ್ತಮ

02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
Read more