Ramya - Rashmika: ರಮ್ಯಾ, ರಶ್ಮಿಕಾ ಮಂದಣ್ಣ ವೋಟ್ ಹಾಕಿಲ್ವಂತೆ: ಮತದಾನ ಮಾಡದೇ ಇರೋದಕ್ಕೆ ಕಾರಣ ಏನು..?

Ramya - Rashmika: ರಮ್ಯಾ, ರಶ್ಮಿಕಾ ಮಂದಣ್ಣ ವೋಟ್ ಹಾಕಿಲ್ವಂತೆ: ಮತದಾನ ಮಾಡದೇ ಇರೋದಕ್ಕೆ ಕಾರಣ ಏನು..?

Published : Apr 28, 2024, 10:05 AM ISTUpdated : Apr 28, 2024, 10:06 AM IST

ಏಪ್ರಿಲ್ 26ರಂದು ಮೊದಲನೇ ಹಂತದ ಚುನಾವಣೆ ನಡೆದಿದೆ. ಇದರಲ್ಲಿ ಕರ್ನಾಟಕದ ಸುಮಾರು 14 ಕ್ಷೇತ್ರಗಳಲ್ಲಿ ಚುನಾವಣೆ ನಡೆದಿದೆ. ಆದ್ರೆ ಈ ಬಾರಿ ನಟಿ ರಮ್ಯಾ, ರಶ್ಮಿಕಾ ಮಂದಣ್ಣ ಮತದಾನ ಮಾಡಿಲ್ವಂತೆ.
 

ಎಂದಿನಂತೆ ಸಿನಿಮಾ ತಾರೆಯರು ಸರದಿ ಸಾಲಿನಲ್ಲಿ ನಿಂತು ಮತದಾನ(Voting) ಮಾಡಿ ಜನರಿಗೆ ಪ್ರೇರಣೆಯಾಗುವ ಕೆಲಸ ಮಾಡಿದ್ದಾರೆ. ಆದ್ರೆ ಕೆಲವು ಸೆಲೆಬ್ರೆಟಿಗಳು ಅದೆಷ್ಟೇ ಬ್ಯುಸಿಯಾಗಿದ್ದರೂ ಇದೊಂದು ದಿನ ಬಿಡುವು ಮಾಡಿಕೊಂಡು ಮತದಾನ ಮಾಡಲು ಬರುತ್ತಾರೆ. ಮತ್ತೆ ಕೆಲವರು ವೋಟ್ ಮಾಡುವುದನ್ನು ಮರೆತುಬಿಟ್ಟಂತೆ ಕಾಣುತ್ತಿದೆ. ಈ ಬಾರಿ ವೋಟ್ ಮಾಡದವರ ಪಟ್ಟಿಯಲ್ಲಿ ಮೋಹಕತಾರೆ ರಮ್ಯಾ(Ramya), ರಶ್ಮಿಕಾ ಮಂದಣ್ಣ ಹೆಸರುಗಳು ಸೇರಿಕೊಂಡಿವೆ. ರಮ್ಯಾ ಇತ್ತೀಚೆಗೆ ಆಕ್ಟಿವ್ ಆಗಿಲ್ಲ. ರಾಜಕೀಯದಿಂದ ದೂರ ಉಳಿದಿದ್ದ ರಮ್ಯಾ, ಸಿನಿಮಾಗಳ ಕಡೆ ಮುಖ ಮಾಡಿದ್ದರು. ಡಾಲಿ ಧನಂಜಯ್ ನಟಿಸುತ್ತಿರುವ 'ಉತ್ತರಕಾಂಡ' ಸಿನಿಮಾದಲ್ಲಿ ನಾಯಕಿಯಾಗಿ ಕಮ್‌ಬ್ಯಾಕ್ ಮಾಡುವುದಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದರು. ಆದರೆ, ಇತ್ತೀಚೆಗೆ ಆ ಸಿನಿಮಾದಿಂದಲೂ ಹೊರ ಬಂದಿದ್ದರು. ಆಗ ರಮ್ಯಾ ಮತ್ತೆ ರಾಜಕೀಯಕ್ಕೆ ಎಂಟ್ರಿ ಕೊಡಬಹುದೆಂದು ನಿರೀಕ್ಷೆ ಮಾಡಲಾಗಿತ್ತು. ಈ ಬಾರಿ ರಮ್ಯಾ ವೋಟ್ ಮಾಡಿಲ್ಲ. ಇದಕ್ಕೆ ಕಾರಣವೇನು ಅನ್ನೋದು ಇನ್ನೂ ತಿಳಿದು ಬಂದಿಲ್ಲ. ರಮ್ಯಾ ಮಂಡ್ಯದ ಪಿ ಎಲ್ ಡಿ ಬ್ಯಾಂಕ್ ಮತಗಟ್ಟೆಯಲ್ಲಿ ಹೆಸರಿದೆ ಎಂದು ವರದಿಯಾಗಿದೆ. ಇನ್ನು ರಮ್ಯಾ ಅಲ್ಲದೆ ರಶ್ಮಿಕಾ ಮಂದಣ್ಣ(Rashmika Mandanna) ಕೂಡ ಮತದಾನ ಮಾಡಿಲ್ಲ ಎಂದು ವರದಿಯಾಗಿದೆ. ರಶ್ಮಿಕಾ ಹುಟ್ಟೂರು ವಿರಾಜಪೇಟೆಯಲ್ಲಿ ಮತಚಲಾಯಿಸಬೇಕಿತ್ತು ಎನ್ನಲಾಗಿದೆ. ಆದರೆ, ರಶ್ಮಿಕಾ ಬಹುಭಾಷಾ ಸಿನಿಮಾಗಳಲ್ಲಿ ಬ್ಯುಸಿಯಾದ ಬಳಿಕ ಕರ್ನಾಟಕದಲ್ಲಿ(Karnataka) ಇರುವುದು ಕಡಿಮೆಯಾಗಿದೆ. ಹಾಗಾದ್ರೆ ಈ ನಟಿಯರಿಗೆ ವೋಟ್ ಹಾಕೋದು ಅಷ್ಟೊಂದು ಮುಖ್ಯ ಅನ್ನಿಸಲೇ ಇಲ್ವಾ ಎಂದು ಫ್ಯಾನ್ಸ್‌ ಕೇಳುತ್ತಿದ್ಧಾರೆ.

ಇದನ್ನೂ ವೀಕ್ಷಿಸಿ: Weekly-Horoscope: ಈ ರಾಶಿಯವರಿಗೆ ಆಪ್ತರು ದೂರವಾಗುತ್ತಾರೆ..ಎಚ್ಚರದಿಂದ ಇರಿ

04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
Read more