ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬದಲ್ಲಿ ಭಾಗಿಯಾಗಿ ಬಂಪರ್ ಬಹುಮಾನ ಗೆಲ್ಲಿ

ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬದಲ್ಲಿ ಭಾಗಿಯಾಗಿ ಬಂಪರ್ ಬಹುಮಾನ ಗೆಲ್ಲಿ

Published : Sep 05, 2022, 01:59 PM IST

ರಿಯಲ್ ಸ್ಟಾರ್ ಹುಟ್ಟುಹಬ್ಬ ಸೆಲೆಬ್ರೇಷನ್ ಗೆ ರಿಯಲ್ ಫ್ಯಾನ್ಸ್ ತುದಿಗಾಲಲ್ಲಿ ನಿಂತಿದ್ದಾರೆ. ಸೆಪ್ಟೆಂಬರ್  18ರಂದು ಉಪ್ಪಿ ಜನ್ಮದಿನ. ಆ ದಿನ ಬಗೆ ಬಗೆಯ ಗಿಫ್ಟ್ಗಳನ್ನ ಫ್ಯಾನ್ಸ್ ಕೊಡ್ತಾರೆ. ಆದ್ರೆ  ಈ ಭಾರಿ ರಿಯಲ್ ಸ್ಟಾರ್ ಉಪೇಂದ್ರ ಅವರೇ ತನ್ನ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್ ಕೊಡೋದಾಗಿ ಘೋಷಣೆ ಮಾಡಿದ್ದಾರೆ.

ನಮ್ ಹೀರೋ ಸೂಪರ್ ಸ್ಟಾರ್,  ಅಣ್ಣನಿಗೆ ಜೈ.. ಹ್ಯಾಪಿ ಬರ್ತ್ಡೇ ಬಾಸ್.. ಈತರ ಸೌಂಡು ಸ್ಟಾರ್ಸ್ ಮನೆ ಮುಂದೆ ಕೇಳಿ ಮೂರು ವರ್ಷ ಆಗಿತ್ತು. ಯಾಕಂದ್ರೆ ಕೋವಿಡ್ ಕಾರಣದಿಂದ ಹೀರೋಗಳು ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸೋದನ್ನ ನಿಲ್ಲಿಸಿದ್ರು. ಇದ್ರಿಂದ ಕೇಕು, ಹೂ ಹಾರ, ಸ್ಪೆಷಲ್ ಗಿಫ್ಟ್ ಹಿಡುದು ಬರೋ ಅಭಿಮಾನಿಗಳು, ಮತ್ತೆ ನಮ್ ಹೀರೋ ಹುಟ್ಟುಹಬ್ಬ ಸೆಲೆಬ್ರೇನ್ಗೆ ಒಳ್ಳೆ ದಿನಗಳ ಬರಲಿ ಅಂತ ಕಾಯುತ್ತಿದ್ರು. ಈಗ ಸ್ಟಾರ್ಸ್ ಮನೆ ಮುಂದೆ ಅಭಿಮಾನಿಗಳ ಜಾತ್ರೆ ಶುರುವಾಗಿದೆ. ಕಿಚ್ಚ ಸುದೀಪ್ ಅವರಿಂದ ಪ್ರಾರಂಭವಾಗಿದೆ.  ಇದೀಗ ರಿಯಲ್ ಸ್ಟಾರ್ ಉಪೇಂದ್ರ ಕೂಡ ಸಜ್ಜಾಗಿದ್ದು, ಬಿಗ್ ಪ್ಲಾನ್ ಮಾಡಿಕೊಂಡಿದ್ದಾರೆ. ರಿಯಲ್ ಸ್ಟಾರ್ ಹುಟ್ಟುಹಬ್ಬ ಸೆಲೆಬ್ರೇಷನ್ ಗೆ ರಿಯಲ್ ಫ್ಯಾನ್ಸ್ ತುದಿಗಾಲಲ್ಲಿ ನಿಂತಿದ್ದಾರೆ. ಸೆಪ್ಟೆಂಬರ್  18ರಂದು ಉಪ್ಪಿ ಜನ್ಮದಿನ. ಆ ದಿನ ಬಗೆ ಬಗೆಯ ಗಿಫ್ಟ್ಗಳನ್ನ ಫ್ಯಾನ್ಸ್ ಕೊಡ್ತಾರೆ. ಆದ್ರೆ  ಈ ಭಾರಿ ರಿಯಲ್ ಸ್ಟಾರ್ ಉಪೇಂದ್ರ ಅವರೇ ತನ್ನ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್ ಕೊಡೋದಾಗಿ ಘೋಷಣೆ ಮಾಡಿದ್ದಾರೆ.ಉಪೇಂದ್ರ ತನ್ನ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಂದ ಸಿಗೋ ಕೇಕ್, ಹೂ ಹಾರ, ಗಿಫ್ಟ್ಗಳನ್ನ ಪಡೆಯೋ ಸಂಪ್ರದಾಯಕ್ಕೆ ಬ್ರೇಕ್ ಹಾಕಿದ್ದಾರೆ. ಹುಟ್ಟುಹಬ್ಬದ ದಿನ ನನ್ನ ಮನೆಗೆ ಬನ್ನಿ, ಹಾರ-ಕೇಕ್ ಬದಲು ನನ್ನ ಈ ವಿಭಿನ್ನ ಕೋರಿಕೆ ಈಡೇರಿಸಿ ಎಂದು ಅಭಿಮಾನಿಗಳ ಬಳಿ ನಟ ಉಪೇಂದ್ರ ಕೇಳಿದ್ದಾರೆ. ಈ ಬಗ್ಗೆ ಪೋಸ್ಟ್ ಹಂಚಿರೋ ರಿಯಲ್ ಸ್ಟಾರ್, ವಿಚಾರವಂತರಾಗೋಣಾ? ಇದೇ ಸೆಪ್ಟೆಂಬರ್ 18 ಅಭಿಮಾನಿಗಳ ದಿನದಂದು ನಿಮ್ಮನ್ನ ನಮ್ಮ ಮನೆಯಲ್ಲಿ ಭೇಟಿಯಾಗುತ್ತೇನೆ. ಆ ದಿನ ಕೇಕ್, ಹೂಗುಚ್ಚ, ಗಿಫ್ಟ್ ಎಲ್ಲಾ ಬಿಟ್ಟು, ಒಂದು ಹಾಳೆಯಲ್ಲಿ 18 ಪದಗಳನ್ನು ಮೀರದಂತೆ ಏನಾದರೂ ಒಂದು ಉತ್ತಮ ವಿಚಾರವನ್ನು ಬರೆದು ತರುತ್ತೀರಾ? ಅತ್ಯುತ್ತಮವಾದ 18 ಬರವಣಿಗೆಗೆ ಸೂಕ್ತ ಬಹುಮಾನವಿರುತ್ತದೆ ಎಂದು ತಮ್ಮ ಉಪೇಂದ್ರ ಹೇಳಿದ್ದಾರೆ. 

03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more