ಮನೆ ಊಟ ಕೇಳಿದ ನಟನಿಗೆ ಕೋರ್ಟ್ ಖಡಕ್ ಉತ್ತರ: ಮತ್ತೆ ದರ್ಶನ್‌ಗೆ ಜೈಲೂಟವೇ ಫಿಕ್ಸ್!

ಮನೆ ಊಟ ಕೇಳಿದ ನಟನಿಗೆ ಕೋರ್ಟ್ ಖಡಕ್ ಉತ್ತರ: ಮತ್ತೆ ದರ್ಶನ್‌ಗೆ ಜೈಲೂಟವೇ ಫಿಕ್ಸ್!

Published : Aug 02, 2024, 10:18 AM IST

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಸೇರಿ ಅನೇಕರು ಅರೆಸ್ಟ್ ಆಗಿದ್ದಾರೆ. ಅವರಿಗೆ ಜೈಲಿನ ಊಟ ದೇಹಕ್ಕೆ ಒಗ್ಗುತ್ತಿಲ್ಲ. ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ದರ್ಶನ್ ಅರ್ಜಿ ವಿಚಾರಣೆ ನಡೆದಿದೆ.

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಸೇರಿ ಅನೇಕರು ಅರೆಸ್ಟ್ ಆಗಿದ್ದಾರೆ. ಅವರಿಗೆ ಜೈಲಿನ ಊಟ ದೇಹಕ್ಕೆ ಒಗ್ಗುತ್ತಿಲ್ಲ. ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ದರ್ಶನ್ ಅರ್ಜಿ ವಿಚಾರಣೆ ನಡೆದಿದೆ. ಈ ವೇಳೆ ವಾದ-ಪ್ರತಿವಾದ ನಡೆದಿದೆ.ಮನೆ ಊಟ, ಹಾಸಿಗೆ, ಚಮಚವನ್ನು ನೀಡಿ ಎಂದು ದರ್ಶನ್ ಅವರು ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ಕೋರಿದ್ದರು. ಆದರೆ, ಈ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿತ್ತು. ಇದನ್ನು ದರ್ಶನ್ ಪರ ವಕೀಲರು ಹೈಕೋರ್ಟ್ನಲ್ಲಿ ಪ್ರಶ್ನೆ ಮಾಡಿದ್ದಾರೆ. ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ದರ್ಶನ್ ಅರ್ಜಿ ವಿಚಾರಣೆ  ನಡೆದಿದೆ. 

10 ದಿನಗಳೊಳಗೆ ಜೈಲು ಅಧಿಕಾರಿಗಳು ತೀರ್ಮಾನ ಕೈಗೊಂಡು ಕೋರ್ಟ್ಗೆ ತಿಳಿಸಬೇಕು ಎಂದಿರುವ ಕೋರ್ಟ್ ಆಗಸ್ಟ್ 20ಕ್ಕೆ ವಿಚಾರಣೆ ಮುಂದೂಡಿದೆ. ದರ್ಶನ್‌ಗೆ ಬೆನ್ನು ನೋವಿದೆ, ಜ್ವರ ಇದೆ’ ಎಂದು ದರ್ಶನ್ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಾಡಿದರು. ‘ಅನಾರೋಗ್ಯ ತುಂಬಾ ಬಿಗಡಾಯಿಸಿದ್ದರೆ ಅದನ್ನು ಜೈಲು ವೈದ್ಯರು ಪರಿಗಣಿಸುತ್ತಾರೆ. ವೈದ್ಯರು ಏನು ಸೂಚಿಸುತ್ತಾರೋ ಅದನ್ನು ಜೈಲಿನಲ್ಲಿ ನೀಡುತ್ತಾರೆ. ಸೆಲೆಬ್ರಿಟಿ ಆದ ಮಾತ್ರಕ್ಕೆ ಬೇರೆ ಆಹಾರ ಕೇಳಲು ಸಾಧ್ಯವಿಲ್ಲ’ ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರನ್ನೊಳಗೊಂಡ ಏಕ ಸದಸ್ಯ ಪೀಠ ಹೇಳಿತು. 

‘ದರ್ಶನ್‌ಗೆ ಪೌಷ್ಟಿಕ ಆಹಾರ ನೀಡಬೇಕೆಂದು ಜೈಲಿನ ವೈದ್ಯಾಧಿಕಾರಿಯೂ ಸಲಹೆ ನೀಡಿದ್ದಾರೆ’ ಎಂದು ದರ್ಶನ್ ಪರ ವಕೀಲರು ವಾದ ಮಂಡಿಸಿದರು. ಇದಕ್ಕೆ ಉತ್ತರಿಸಿದ ಜಡ್ಜ್ ‘ಸಾವಿರಾರು ವಿಚಾರಣಾಧೀನ ಖೈದಿಗಳಿಗೆ ಪೌಷ್ಟಿಕ ಆಹಾರದ ಅಗತ್ಯ ಇರಬಹುದು. ದರ್ಶನ್ಗೂ ಇತರೆ ವಿಚಾರಣಾಧೀನ ಕೈದಿಗಳಿಗೂ ವ್ಯತ್ಯಾಸವಿಲ್ಲ’ ಎಂದಿದ್ದಾರೆ. ‘ವಿಚಾರಣಾಧೀನ ಖೈದಿಗಳು ಖಾಸಗಿಯಾಗಿ ಆಹಾರ ತರಿಸಿಕೊಳ್ಳಬಹುದು. ಜೈಲು ಅಧಿನಿಯಮ ಸೆಕ್ಷನ್ 30ರ ಅಡಿ ಮನೆ ಊಟಕ್ಕೆ ಅವಕಾಶವಿದೆ. ಆದರೆ ಜೈಲು ಕೈಪಿಡಿ ಆಧರಿಸಿ ಮ್ಯಾಜಿಸ್ಟ್ರೇಟ್ ಕೋರ್ಟ್ ಅನುಮತಿ ನಿರಾಕರಿಸಿದೆ. ಜೈಲು ಕೈಪಿಡಿಗೆ ಕಾನೂನಿನ ಬೆಂಬಲವಿಲ್ಲ. ಕೈಪಿಡಿಯಲ್ಲಿರುವುದು ಕೇವಲ ಆಡಳಿತಾತ್ಮಕ ನಿಯಮಗಳಷ್ಟೇ’ ಎಂದು ಪ್ರಭುಲಿಂಗ್ ನಾವದಗಿ ವಾದ ಮಾಡಿದರು. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
Read more