ಮನೆ ಊಟ ಕೇಳಿದ ನಟನಿಗೆ ಕೋರ್ಟ್ ಖಡಕ್ ಉತ್ತರ: ಮತ್ತೆ ದರ್ಶನ್‌ಗೆ ಜೈಲೂಟವೇ ಫಿಕ್ಸ್!

ಮನೆ ಊಟ ಕೇಳಿದ ನಟನಿಗೆ ಕೋರ್ಟ್ ಖಡಕ್ ಉತ್ತರ: ಮತ್ತೆ ದರ್ಶನ್‌ಗೆ ಜೈಲೂಟವೇ ಫಿಕ್ಸ್!

Published : Aug 02, 2024, 10:18 AM IST

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಸೇರಿ ಅನೇಕರು ಅರೆಸ್ಟ್ ಆಗಿದ್ದಾರೆ. ಅವರಿಗೆ ಜೈಲಿನ ಊಟ ದೇಹಕ್ಕೆ ಒಗ್ಗುತ್ತಿಲ್ಲ. ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ದರ್ಶನ್ ಅರ್ಜಿ ವಿಚಾರಣೆ ನಡೆದಿದೆ.

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಸೇರಿ ಅನೇಕರು ಅರೆಸ್ಟ್ ಆಗಿದ್ದಾರೆ. ಅವರಿಗೆ ಜೈಲಿನ ಊಟ ದೇಹಕ್ಕೆ ಒಗ್ಗುತ್ತಿಲ್ಲ. ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ದರ್ಶನ್ ಅರ್ಜಿ ವಿಚಾರಣೆ ನಡೆದಿದೆ. ಈ ವೇಳೆ ವಾದ-ಪ್ರತಿವಾದ ನಡೆದಿದೆ.ಮನೆ ಊಟ, ಹಾಸಿಗೆ, ಚಮಚವನ್ನು ನೀಡಿ ಎಂದು ದರ್ಶನ್ ಅವರು ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ಕೋರಿದ್ದರು. ಆದರೆ, ಈ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿತ್ತು. ಇದನ್ನು ದರ್ಶನ್ ಪರ ವಕೀಲರು ಹೈಕೋರ್ಟ್ನಲ್ಲಿ ಪ್ರಶ್ನೆ ಮಾಡಿದ್ದಾರೆ. ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ದರ್ಶನ್ ಅರ್ಜಿ ವಿಚಾರಣೆ  ನಡೆದಿದೆ. 

10 ದಿನಗಳೊಳಗೆ ಜೈಲು ಅಧಿಕಾರಿಗಳು ತೀರ್ಮಾನ ಕೈಗೊಂಡು ಕೋರ್ಟ್ಗೆ ತಿಳಿಸಬೇಕು ಎಂದಿರುವ ಕೋರ್ಟ್ ಆಗಸ್ಟ್ 20ಕ್ಕೆ ವಿಚಾರಣೆ ಮುಂದೂಡಿದೆ. ದರ್ಶನ್‌ಗೆ ಬೆನ್ನು ನೋವಿದೆ, ಜ್ವರ ಇದೆ’ ಎಂದು ದರ್ಶನ್ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಾಡಿದರು. ‘ಅನಾರೋಗ್ಯ ತುಂಬಾ ಬಿಗಡಾಯಿಸಿದ್ದರೆ ಅದನ್ನು ಜೈಲು ವೈದ್ಯರು ಪರಿಗಣಿಸುತ್ತಾರೆ. ವೈದ್ಯರು ಏನು ಸೂಚಿಸುತ್ತಾರೋ ಅದನ್ನು ಜೈಲಿನಲ್ಲಿ ನೀಡುತ್ತಾರೆ. ಸೆಲೆಬ್ರಿಟಿ ಆದ ಮಾತ್ರಕ್ಕೆ ಬೇರೆ ಆಹಾರ ಕೇಳಲು ಸಾಧ್ಯವಿಲ್ಲ’ ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರನ್ನೊಳಗೊಂಡ ಏಕ ಸದಸ್ಯ ಪೀಠ ಹೇಳಿತು. 

‘ದರ್ಶನ್‌ಗೆ ಪೌಷ್ಟಿಕ ಆಹಾರ ನೀಡಬೇಕೆಂದು ಜೈಲಿನ ವೈದ್ಯಾಧಿಕಾರಿಯೂ ಸಲಹೆ ನೀಡಿದ್ದಾರೆ’ ಎಂದು ದರ್ಶನ್ ಪರ ವಕೀಲರು ವಾದ ಮಂಡಿಸಿದರು. ಇದಕ್ಕೆ ಉತ್ತರಿಸಿದ ಜಡ್ಜ್ ‘ಸಾವಿರಾರು ವಿಚಾರಣಾಧೀನ ಖೈದಿಗಳಿಗೆ ಪೌಷ್ಟಿಕ ಆಹಾರದ ಅಗತ್ಯ ಇರಬಹುದು. ದರ್ಶನ್ಗೂ ಇತರೆ ವಿಚಾರಣಾಧೀನ ಕೈದಿಗಳಿಗೂ ವ್ಯತ್ಯಾಸವಿಲ್ಲ’ ಎಂದಿದ್ದಾರೆ. ‘ವಿಚಾರಣಾಧೀನ ಖೈದಿಗಳು ಖಾಸಗಿಯಾಗಿ ಆಹಾರ ತರಿಸಿಕೊಳ್ಳಬಹುದು. ಜೈಲು ಅಧಿನಿಯಮ ಸೆಕ್ಷನ್ 30ರ ಅಡಿ ಮನೆ ಊಟಕ್ಕೆ ಅವಕಾಶವಿದೆ. ಆದರೆ ಜೈಲು ಕೈಪಿಡಿ ಆಧರಿಸಿ ಮ್ಯಾಜಿಸ್ಟ್ರೇಟ್ ಕೋರ್ಟ್ ಅನುಮತಿ ನಿರಾಕರಿಸಿದೆ. ಜೈಲು ಕೈಪಿಡಿಗೆ ಕಾನೂನಿನ ಬೆಂಬಲವಿಲ್ಲ. ಕೈಪಿಡಿಯಲ್ಲಿರುವುದು ಕೇವಲ ಆಡಳಿತಾತ್ಮಕ ನಿಯಮಗಳಷ್ಟೇ’ ಎಂದು ಪ್ರಭುಲಿಂಗ್ ನಾವದಗಿ ವಾದ ಮಾಡಿದರು. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more