ಮನೆ ಊಟ ಕೇಳಿದ ನಟನಿಗೆ ಕೋರ್ಟ್ ಖಡಕ್ ಉತ್ತರ: ಮತ್ತೆ ದರ್ಶನ್‌ಗೆ ಜೈಲೂಟವೇ ಫಿಕ್ಸ್!

ಮನೆ ಊಟ ಕೇಳಿದ ನಟನಿಗೆ ಕೋರ್ಟ್ ಖಡಕ್ ಉತ್ತರ: ಮತ್ತೆ ದರ್ಶನ್‌ಗೆ ಜೈಲೂಟವೇ ಫಿಕ್ಸ್!

Published : Aug 02, 2024, 10:18 AM IST

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಸೇರಿ ಅನೇಕರು ಅರೆಸ್ಟ್ ಆಗಿದ್ದಾರೆ. ಅವರಿಗೆ ಜೈಲಿನ ಊಟ ದೇಹಕ್ಕೆ ಒಗ್ಗುತ್ತಿಲ್ಲ. ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ದರ್ಶನ್ ಅರ್ಜಿ ವಿಚಾರಣೆ ನಡೆದಿದೆ.

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಸೇರಿ ಅನೇಕರು ಅರೆಸ್ಟ್ ಆಗಿದ್ದಾರೆ. ಅವರಿಗೆ ಜೈಲಿನ ಊಟ ದೇಹಕ್ಕೆ ಒಗ್ಗುತ್ತಿಲ್ಲ. ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ದರ್ಶನ್ ಅರ್ಜಿ ವಿಚಾರಣೆ ನಡೆದಿದೆ. ಈ ವೇಳೆ ವಾದ-ಪ್ರತಿವಾದ ನಡೆದಿದೆ.ಮನೆ ಊಟ, ಹಾಸಿಗೆ, ಚಮಚವನ್ನು ನೀಡಿ ಎಂದು ದರ್ಶನ್ ಅವರು ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ಕೋರಿದ್ದರು. ಆದರೆ, ಈ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿತ್ತು. ಇದನ್ನು ದರ್ಶನ್ ಪರ ವಕೀಲರು ಹೈಕೋರ್ಟ್ನಲ್ಲಿ ಪ್ರಶ್ನೆ ಮಾಡಿದ್ದಾರೆ. ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ದರ್ಶನ್ ಅರ್ಜಿ ವಿಚಾರಣೆ  ನಡೆದಿದೆ. 

10 ದಿನಗಳೊಳಗೆ ಜೈಲು ಅಧಿಕಾರಿಗಳು ತೀರ್ಮಾನ ಕೈಗೊಂಡು ಕೋರ್ಟ್ಗೆ ತಿಳಿಸಬೇಕು ಎಂದಿರುವ ಕೋರ್ಟ್ ಆಗಸ್ಟ್ 20ಕ್ಕೆ ವಿಚಾರಣೆ ಮುಂದೂಡಿದೆ. ದರ್ಶನ್‌ಗೆ ಬೆನ್ನು ನೋವಿದೆ, ಜ್ವರ ಇದೆ’ ಎಂದು ದರ್ಶನ್ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಾಡಿದರು. ‘ಅನಾರೋಗ್ಯ ತುಂಬಾ ಬಿಗಡಾಯಿಸಿದ್ದರೆ ಅದನ್ನು ಜೈಲು ವೈದ್ಯರು ಪರಿಗಣಿಸುತ್ತಾರೆ. ವೈದ್ಯರು ಏನು ಸೂಚಿಸುತ್ತಾರೋ ಅದನ್ನು ಜೈಲಿನಲ್ಲಿ ನೀಡುತ್ತಾರೆ. ಸೆಲೆಬ್ರಿಟಿ ಆದ ಮಾತ್ರಕ್ಕೆ ಬೇರೆ ಆಹಾರ ಕೇಳಲು ಸಾಧ್ಯವಿಲ್ಲ’ ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರನ್ನೊಳಗೊಂಡ ಏಕ ಸದಸ್ಯ ಪೀಠ ಹೇಳಿತು. 

‘ದರ್ಶನ್‌ಗೆ ಪೌಷ್ಟಿಕ ಆಹಾರ ನೀಡಬೇಕೆಂದು ಜೈಲಿನ ವೈದ್ಯಾಧಿಕಾರಿಯೂ ಸಲಹೆ ನೀಡಿದ್ದಾರೆ’ ಎಂದು ದರ್ಶನ್ ಪರ ವಕೀಲರು ವಾದ ಮಂಡಿಸಿದರು. ಇದಕ್ಕೆ ಉತ್ತರಿಸಿದ ಜಡ್ಜ್ ‘ಸಾವಿರಾರು ವಿಚಾರಣಾಧೀನ ಖೈದಿಗಳಿಗೆ ಪೌಷ್ಟಿಕ ಆಹಾರದ ಅಗತ್ಯ ಇರಬಹುದು. ದರ್ಶನ್ಗೂ ಇತರೆ ವಿಚಾರಣಾಧೀನ ಕೈದಿಗಳಿಗೂ ವ್ಯತ್ಯಾಸವಿಲ್ಲ’ ಎಂದಿದ್ದಾರೆ. ‘ವಿಚಾರಣಾಧೀನ ಖೈದಿಗಳು ಖಾಸಗಿಯಾಗಿ ಆಹಾರ ತರಿಸಿಕೊಳ್ಳಬಹುದು. ಜೈಲು ಅಧಿನಿಯಮ ಸೆಕ್ಷನ್ 30ರ ಅಡಿ ಮನೆ ಊಟಕ್ಕೆ ಅವಕಾಶವಿದೆ. ಆದರೆ ಜೈಲು ಕೈಪಿಡಿ ಆಧರಿಸಿ ಮ್ಯಾಜಿಸ್ಟ್ರೇಟ್ ಕೋರ್ಟ್ ಅನುಮತಿ ನಿರಾಕರಿಸಿದೆ. ಜೈಲು ಕೈಪಿಡಿಗೆ ಕಾನೂನಿನ ಬೆಂಬಲವಿಲ್ಲ. ಕೈಪಿಡಿಯಲ್ಲಿರುವುದು ಕೇವಲ ಆಡಳಿತಾತ್ಮಕ ನಿಯಮಗಳಷ್ಟೇ’ ಎಂದು ಪ್ರಭುಲಿಂಗ್ ನಾವದಗಿ ವಾದ ಮಾಡಿದರು. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
Read more