ಮಂಗಳೂರು ವಜ್ರದೇಹಿ ಮಠದ ಕೋಲದಲ್ಲಿ ರಿಷಬ್..! ಧೈರ್ಯ ಕಳೆದುಕೊಳ್ಳದಂತೆ ನಟನಿಗೆ ದೈವದ ಅಭಯ..!

ಮಂಗಳೂರು ವಜ್ರದೇಹಿ ಮಠದ ಕೋಲದಲ್ಲಿ ರಿಷಬ್..! ಧೈರ್ಯ ಕಳೆದುಕೊಳ್ಳದಂತೆ ನಟನಿಗೆ ದೈವದ ಅಭಯ..!

Published : Jan 07, 2024, 09:18 AM IST

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಈಗ ಕಾಂತಾರ ಚಾಪ್ಟರ್ ಒನ್ ಶೂಟಿಂಗ್ ಹೋಗೋ ಟೈಂ ಬಂದಿದೆ. ಇಷ್ಟು ದಿನ ಕಾಂತಾರ ಸ್ಟೋರಿ, ಲೊಕೇಷನ್ ಹಂಟಿಂಗ್, ಕಲಾವಿದರ ಆಯ್ಕೆ ಕಡೆ ಗಮನ ಹರಿಸಿದ್ದ ಶೆಟ್ರು ಕುಂದಾಪುರದ ಆಣೆಗುಡ್ಡೆ ದೇವಸ್ಥಾನಲ್ಲಿ ವಿಘ್ನೇಶ್ವರನಿಗೆ ಪೂಜೆ ಮಾಡಿ ಸಿನಿಮಾದ ಮುಹೂರ್ತ ಮಾಡಿದ್ರು.

ಯಾವುದೇ ಕೆಲ್ಸ ಆಗ್ಲಿ ದೇವರ ಆಶೀರ್ವಾದ ಬೇಕು. ರಿಷಬ್ ಶೆಟ್ಟಿ ಕೂಡ ಕಾಂತಾರ 1(Kantara 1) ಶೂಟಿಂಗ್ ಹೋಗೋ ಮೊದಲು ದೈವರ ಆಶೀರ್ವಾದ ಕೇಳಿದ್ದಾರೆ. ಜನವರಿಯಿಂದ ಕಾಂತಾರ ಶೂಟಿಂಗ್ ಆರಂಭವಾಗಲಿದೆ. ಈಗ ಶೆಟ್ರು ಟೀಂ ಮುಂದಿನ ವಾರದಿಂದ ಶೂಟಿಂಗ್ ಹೋಗ್ತಿದ್ದಾರೆ. ಹೀಗಾಗಿ  ಕಾಂತಾರ ಚಾಪ್ಟರ್ ಒನ್ ಶೂಟಿಂಗ್ ಯಾವ್ದೇ ವಿಘ್ನವಿಲ್ಲದೆ ನಿರ್ವಿಘ್ನವಾಗಿ ನಡೆಯಲಿ ಅಂತ ದೈವದ ಅಭಯ ಬೇಡಿದ್ದಾರೆ ಶೆಟ್ರು.ಈಗ ಕರಾವಳಿ ಭಾಗದಲ್ಲಿ ಭೂತ ಕೋಲದ ಸಮಯ. ಮನೆ ಮನೆಯಲ್ಲೂ ದೈವಾರಾಧನೆ ನಡೆಯುತ್ತೆ. ಇದೀಗ ರಿಷಬ್ ಶೆಟ್ಟಿ ಇದೇ ಸಮಯಲ್ಲಿ ದೈವದ ಕತೆಯ ಕಾಂತಾರ ಚಾಪ್ಟರ್ 1 ಶೂಟಿಂಗ್ ಶುರು ಮಾಡ್ತಿದ್ದಾರೆ. ಹೀಗಾಗಿ ಮಂಗಳೂರಿನ ವಜ್ರದೇಹ ಮಠದ ಮೈಸಂದಾಯ ಕೋಲದಲ್ಲಿ ರಿಷಬ್ (Rishab Shetty) ಭಾಗಿ ಆಗಿದ್ದಾರೆ. ಈ ಹಿಂದೆ ವಜ್ರದೇಹಿ ಮಠದ ಸ್ವಾಮೀಜಿಯನ್ನ(Swamiji of Vajradehi Math)  ಭೇಟಿಯಾಗಿದ್ದ ರಿಷಬ್ ಈ ಮಠದಲ್ಲಿ ನಡೆಯೋ ಭೂತಕೋಲದಲ್ಲಿ ಭಾಗಿ ಆಗೋ ಆಸೆ ವ್ಯಕ್ತಪಡಿಸಿದ್ರು. ರಿಷಬ್ ಶೆಟ್ಟಿ ಇಚ್ಛೆಯಂತೆ ಕೋಲಕ್ಕೆ ಆಹ್ವಾನಿಸಿದ್ರು. ಹೀಗಾಗಿ ರಿಷಬ್ ಈ ಭೂತ ಕೋಲದಲ್ಲಿ(Buta Kola) ಭಾಗಿ ಆಗಿದ್ದಾರೆ.ಕಾಂತಾರದಲ್ಲಿ ರಿಷಬ್ ಮೈ ಮೇಲೆ ಬರೋ ದೈವ ಕಾಡು ಬೆಟ್ಟದ ಊರ ಜನರಿಗೆ ಯಾವುದೇ ಸಮಸ್ಯೆ ಬಂದ್ರು ಹೆದರಬೇಡಿ ನಿಮ್ಮ ಜೊತೆ ನಾನಿದ್ದೇನೆ ಅಂತ ಅಭಯ ಕೊಡುತ್ತೆ. ಇದೇ ತರದ ದೃಶ್ಯ ರಿಷಬ್ ಈಗ ನಡೆದಿದೆ. ಅತ್ತಿತ್ತ ಕಣ್ಣಾಡಿಸದೆ ದೈವವನ್ನೇ ನೋಡುತ್ತಾ ನಿಂತ ರಿಷಬ್ ಶೆಟ್ಟಿಗೆ ಏನೇ ಸಮಸ್ಯೆ ಬಂದ್ರು ಕುಗ್ಗಬೇಡ ಮುನ್ನುಗ್ಗು ನಿನ್ನ ಬೆನ್ನ ಹಿಂದೆ ನಾನಿದ್ದೇನೆ ಎಂದು ಸನ್ನೆ ಮಾಡಿ ಆಶೀರ್ವದಿಸಿದೆ ದೈವ.

ಇದನ್ನೂ ವೀಕ್ಷಿಸಿ:  ಅಯೋಧ್ಯೆಯಲ್ಲಿ ಸುವರ್ಣ ಹೆಜ್ಜೆ : ನಿರಂತರ ಸಂಚಾರ, ಸಮಗ್ರ ವರದಿ & ಲೇಟೆಸ್ಟ್ ಅಪ್ಡೇಟ್ಸ್‌ -ಒಂದು ಹಿನ್ನೋಟ

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
Read more