ಮಂಗಳೂರು ವಜ್ರದೇಹಿ ಮಠದ ಕೋಲದಲ್ಲಿ ರಿಷಬ್..! ಧೈರ್ಯ ಕಳೆದುಕೊಳ್ಳದಂತೆ ನಟನಿಗೆ ದೈವದ ಅಭಯ..!

Jan 7, 2024, 9:18 AM IST

ಯಾವುದೇ ಕೆಲ್ಸ ಆಗ್ಲಿ ದೇವರ ಆಶೀರ್ವಾದ ಬೇಕು. ರಿಷಬ್ ಶೆಟ್ಟಿ ಕೂಡ ಕಾಂತಾರ 1(Kantara 1) ಶೂಟಿಂಗ್ ಹೋಗೋ ಮೊದಲು ದೈವರ ಆಶೀರ್ವಾದ ಕೇಳಿದ್ದಾರೆ. ಜನವರಿಯಿಂದ ಕಾಂತಾರ ಶೂಟಿಂಗ್ ಆರಂಭವಾಗಲಿದೆ. ಈಗ ಶೆಟ್ರು ಟೀಂ ಮುಂದಿನ ವಾರದಿಂದ ಶೂಟಿಂಗ್ ಹೋಗ್ತಿದ್ದಾರೆ. ಹೀಗಾಗಿ  ಕಾಂತಾರ ಚಾಪ್ಟರ್ ಒನ್ ಶೂಟಿಂಗ್ ಯಾವ್ದೇ ವಿಘ್ನವಿಲ್ಲದೆ ನಿರ್ವಿಘ್ನವಾಗಿ ನಡೆಯಲಿ ಅಂತ ದೈವದ ಅಭಯ ಬೇಡಿದ್ದಾರೆ ಶೆಟ್ರು.ಈಗ ಕರಾವಳಿ ಭಾಗದಲ್ಲಿ ಭೂತ ಕೋಲದ ಸಮಯ. ಮನೆ ಮನೆಯಲ್ಲೂ ದೈವಾರಾಧನೆ ನಡೆಯುತ್ತೆ. ಇದೀಗ ರಿಷಬ್ ಶೆಟ್ಟಿ ಇದೇ ಸಮಯಲ್ಲಿ ದೈವದ ಕತೆಯ ಕಾಂತಾರ ಚಾಪ್ಟರ್ 1 ಶೂಟಿಂಗ್ ಶುರು ಮಾಡ್ತಿದ್ದಾರೆ. ಹೀಗಾಗಿ ಮಂಗಳೂರಿನ ವಜ್ರದೇಹ ಮಠದ ಮೈಸಂದಾಯ ಕೋಲದಲ್ಲಿ ರಿಷಬ್ (Rishab Shetty) ಭಾಗಿ ಆಗಿದ್ದಾರೆ. ಈ ಹಿಂದೆ ವಜ್ರದೇಹಿ ಮಠದ ಸ್ವಾಮೀಜಿಯನ್ನ(Swamiji of Vajradehi Math)  ಭೇಟಿಯಾಗಿದ್ದ ರಿಷಬ್ ಈ ಮಠದಲ್ಲಿ ನಡೆಯೋ ಭೂತಕೋಲದಲ್ಲಿ ಭಾಗಿ ಆಗೋ ಆಸೆ ವ್ಯಕ್ತಪಡಿಸಿದ್ರು. ರಿಷಬ್ ಶೆಟ್ಟಿ ಇಚ್ಛೆಯಂತೆ ಕೋಲಕ್ಕೆ ಆಹ್ವಾನಿಸಿದ್ರು. ಹೀಗಾಗಿ ರಿಷಬ್ ಈ ಭೂತ ಕೋಲದಲ್ಲಿ(Buta Kola) ಭಾಗಿ ಆಗಿದ್ದಾರೆ.ಕಾಂತಾರದಲ್ಲಿ ರಿಷಬ್ ಮೈ ಮೇಲೆ ಬರೋ ದೈವ ಕಾಡು ಬೆಟ್ಟದ ಊರ ಜನರಿಗೆ ಯಾವುದೇ ಸಮಸ್ಯೆ ಬಂದ್ರು ಹೆದರಬೇಡಿ ನಿಮ್ಮ ಜೊತೆ ನಾನಿದ್ದೇನೆ ಅಂತ ಅಭಯ ಕೊಡುತ್ತೆ. ಇದೇ ತರದ ದೃಶ್ಯ ರಿಷಬ್ ಈಗ ನಡೆದಿದೆ. ಅತ್ತಿತ್ತ ಕಣ್ಣಾಡಿಸದೆ ದೈವವನ್ನೇ ನೋಡುತ್ತಾ ನಿಂತ ರಿಷಬ್ ಶೆಟ್ಟಿಗೆ ಏನೇ ಸಮಸ್ಯೆ ಬಂದ್ರು ಕುಗ್ಗಬೇಡ ಮುನ್ನುಗ್ಗು ನಿನ್ನ ಬೆನ್ನ ಹಿಂದೆ ನಾನಿದ್ದೇನೆ ಎಂದು ಸನ್ನೆ ಮಾಡಿ ಆಶೀರ್ವದಿಸಿದೆ ದೈವ.

ಇದನ್ನೂ ವೀಕ್ಷಿಸಿ:  ಅಯೋಧ್ಯೆಯಲ್ಲಿ ಸುವರ್ಣ ಹೆಜ್ಜೆ : ನಿರಂತರ ಸಂಚಾರ, ಸಮಗ್ರ ವರದಿ & ಲೇಟೆಸ್ಟ್ ಅಪ್ಡೇಟ್ಸ್‌ -ಒಂದು ಹಿನ್ನೋಟ