ಮಂಗಳೂರು ವಜ್ರದೇಹಿ ಮಠದ ಕೋಲದಲ್ಲಿ ರಿಷಬ್..! ಧೈರ್ಯ ಕಳೆದುಕೊಳ್ಳದಂತೆ ನಟನಿಗೆ ದೈವದ ಅಭಯ..!

ಮಂಗಳೂರು ವಜ್ರದೇಹಿ ಮಠದ ಕೋಲದಲ್ಲಿ ರಿಷಬ್..! ಧೈರ್ಯ ಕಳೆದುಕೊಳ್ಳದಂತೆ ನಟನಿಗೆ ದೈವದ ಅಭಯ..!

Published : Jan 07, 2024, 09:18 AM IST

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಈಗ ಕಾಂತಾರ ಚಾಪ್ಟರ್ ಒನ್ ಶೂಟಿಂಗ್ ಹೋಗೋ ಟೈಂ ಬಂದಿದೆ. ಇಷ್ಟು ದಿನ ಕಾಂತಾರ ಸ್ಟೋರಿ, ಲೊಕೇಷನ್ ಹಂಟಿಂಗ್, ಕಲಾವಿದರ ಆಯ್ಕೆ ಕಡೆ ಗಮನ ಹರಿಸಿದ್ದ ಶೆಟ್ರು ಕುಂದಾಪುರದ ಆಣೆಗುಡ್ಡೆ ದೇವಸ್ಥಾನಲ್ಲಿ ವಿಘ್ನೇಶ್ವರನಿಗೆ ಪೂಜೆ ಮಾಡಿ ಸಿನಿಮಾದ ಮುಹೂರ್ತ ಮಾಡಿದ್ರು.

ಯಾವುದೇ ಕೆಲ್ಸ ಆಗ್ಲಿ ದೇವರ ಆಶೀರ್ವಾದ ಬೇಕು. ರಿಷಬ್ ಶೆಟ್ಟಿ ಕೂಡ ಕಾಂತಾರ 1(Kantara 1) ಶೂಟಿಂಗ್ ಹೋಗೋ ಮೊದಲು ದೈವರ ಆಶೀರ್ವಾದ ಕೇಳಿದ್ದಾರೆ. ಜನವರಿಯಿಂದ ಕಾಂತಾರ ಶೂಟಿಂಗ್ ಆರಂಭವಾಗಲಿದೆ. ಈಗ ಶೆಟ್ರು ಟೀಂ ಮುಂದಿನ ವಾರದಿಂದ ಶೂಟಿಂಗ್ ಹೋಗ್ತಿದ್ದಾರೆ. ಹೀಗಾಗಿ  ಕಾಂತಾರ ಚಾಪ್ಟರ್ ಒನ್ ಶೂಟಿಂಗ್ ಯಾವ್ದೇ ವಿಘ್ನವಿಲ್ಲದೆ ನಿರ್ವಿಘ್ನವಾಗಿ ನಡೆಯಲಿ ಅಂತ ದೈವದ ಅಭಯ ಬೇಡಿದ್ದಾರೆ ಶೆಟ್ರು.ಈಗ ಕರಾವಳಿ ಭಾಗದಲ್ಲಿ ಭೂತ ಕೋಲದ ಸಮಯ. ಮನೆ ಮನೆಯಲ್ಲೂ ದೈವಾರಾಧನೆ ನಡೆಯುತ್ತೆ. ಇದೀಗ ರಿಷಬ್ ಶೆಟ್ಟಿ ಇದೇ ಸಮಯಲ್ಲಿ ದೈವದ ಕತೆಯ ಕಾಂತಾರ ಚಾಪ್ಟರ್ 1 ಶೂಟಿಂಗ್ ಶುರು ಮಾಡ್ತಿದ್ದಾರೆ. ಹೀಗಾಗಿ ಮಂಗಳೂರಿನ ವಜ್ರದೇಹ ಮಠದ ಮೈಸಂದಾಯ ಕೋಲದಲ್ಲಿ ರಿಷಬ್ (Rishab Shetty) ಭಾಗಿ ಆಗಿದ್ದಾರೆ. ಈ ಹಿಂದೆ ವಜ್ರದೇಹಿ ಮಠದ ಸ್ವಾಮೀಜಿಯನ್ನ(Swamiji of Vajradehi Math)  ಭೇಟಿಯಾಗಿದ್ದ ರಿಷಬ್ ಈ ಮಠದಲ್ಲಿ ನಡೆಯೋ ಭೂತಕೋಲದಲ್ಲಿ ಭಾಗಿ ಆಗೋ ಆಸೆ ವ್ಯಕ್ತಪಡಿಸಿದ್ರು. ರಿಷಬ್ ಶೆಟ್ಟಿ ಇಚ್ಛೆಯಂತೆ ಕೋಲಕ್ಕೆ ಆಹ್ವಾನಿಸಿದ್ರು. ಹೀಗಾಗಿ ರಿಷಬ್ ಈ ಭೂತ ಕೋಲದಲ್ಲಿ(Buta Kola) ಭಾಗಿ ಆಗಿದ್ದಾರೆ.ಕಾಂತಾರದಲ್ಲಿ ರಿಷಬ್ ಮೈ ಮೇಲೆ ಬರೋ ದೈವ ಕಾಡು ಬೆಟ್ಟದ ಊರ ಜನರಿಗೆ ಯಾವುದೇ ಸಮಸ್ಯೆ ಬಂದ್ರು ಹೆದರಬೇಡಿ ನಿಮ್ಮ ಜೊತೆ ನಾನಿದ್ದೇನೆ ಅಂತ ಅಭಯ ಕೊಡುತ್ತೆ. ಇದೇ ತರದ ದೃಶ್ಯ ರಿಷಬ್ ಈಗ ನಡೆದಿದೆ. ಅತ್ತಿತ್ತ ಕಣ್ಣಾಡಿಸದೆ ದೈವವನ್ನೇ ನೋಡುತ್ತಾ ನಿಂತ ರಿಷಬ್ ಶೆಟ್ಟಿಗೆ ಏನೇ ಸಮಸ್ಯೆ ಬಂದ್ರು ಕುಗ್ಗಬೇಡ ಮುನ್ನುಗ್ಗು ನಿನ್ನ ಬೆನ್ನ ಹಿಂದೆ ನಾನಿದ್ದೇನೆ ಎಂದು ಸನ್ನೆ ಮಾಡಿ ಆಶೀರ್ವದಿಸಿದೆ ದೈವ.

ಇದನ್ನೂ ವೀಕ್ಷಿಸಿ:  ಅಯೋಧ್ಯೆಯಲ್ಲಿ ಸುವರ್ಣ ಹೆಜ್ಜೆ : ನಿರಂತರ ಸಂಚಾರ, ಸಮಗ್ರ ವರದಿ & ಲೇಟೆಸ್ಟ್ ಅಪ್ಡೇಟ್ಸ್‌ -ಒಂದು ಹಿನ್ನೋಟ

05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
Read more