ಸೀತೆಯಾಗುವ ಮೊದಲು ಕೃಷ್ಣನ ದರ್ಶನ ಪಡೆದ ಸಹಜ ಸುಂದರಿ! ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಸಾಯಿಪಲ್ಲವಿ!

ಸೀತೆಯಾಗುವ ಮೊದಲು ಕೃಷ್ಣನ ದರ್ಶನ ಪಡೆದ ಸಹಜ ಸುಂದರಿ! ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಸಾಯಿಪಲ್ಲವಿ!

Published : Dec 24, 2023, 09:55 AM IST

ದಕ್ಷಿಣ ಭಾರತದ ಹೆಸರಾಂತ ನಟಿ ಸಾಯಿ ಪಲ್ಲವಿ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ. ಖಾಸಗಿ ಕಾರ್ಯದ ನಿಮಿತ್ತ ಉಡುಪಿಗೆ ಬಂದಿರುವ ಅವರು, ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದೇವರ ದರ್ಶನ ಕೈಗೊಂಡಿದ್ದಾರೆ.

ರಥಬೀದಿಯಲ್ಲಿರುವ ಕಾಣಿಯೂರು ಮಠಕ್ಕೆ ತೆರಳಿ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ(Sri Vidyavallabha Theertha Swamiji) ಅವರಿಂದ ಆಶೀರ್ವಾದ ಪಡೆದಿದ್ದಾರೆ. ಮಠಕ್ಕೆ ಭೇಟಿ ನೀಡಿದ ಸಾಯಿ ಪಲ್ಲವಿ(Actress Sai Pallavi) ಅವರನ್ನು ಶ್ರೀ ಕೃಷ್ಣ ಮಠದ(Shri Krishna Math) ವತಿಯಿಂದ ಗೌರವಿಸಲಾಯಿತು. ಸಾಯಿ ಪಲ್ಲವಿ ಸದ್ಯ ಬಾಲಿವುಡ್‌ನ ರಾಮಾಯಣ(Ramayana) ಸಿನಿಮಾದಲ್ಲಿ ನಟಿಸುತ್ತಾರೆಂದು ಹೇಳಲಾಗುತ್ತಿದೆ. ರಣ್‌ಬೀರ್ ಜೋಡಿಯಾಗಿ ರಾಮನ ಪತ್ನಿ ಸೀತೆಯ ಪಾತ್ರದಲ್ಲಿ ನಟಿಸುತ್ತಾರೆನ್ನಲಾಗಿದೆ. ಹಿಂದಿಯ ಈ ಸಿನಿಮಾ ಮಾಡೋದಕ್ಕೂ ಮೊದಲು ಕೆಲ ಪವರ್ಫುಲ್ ದೇವಸ್ಥಾನಗಳ ಭೇಟಿ ಮಾಡಲು ಸಾಯಿ ಪಲ್ಲವಿ ನಿರ್ಧರಿಸಿದ್ದು ಉಡುಪಿಯ ಶ್ರೀಕೃಷ್ಣ ದೇವಾಲಯ ದರ್ಶನ ಮಾಡಿಕೊಂಡಿದ್ದಾರೆನ್ನುತ್ತವೆ ಆಪ್ತ ಮೂಲಗಳು. ಕಾಶ್ಮೀರಿ ಫೈಲ್ಸ್ ಸಿನಿಮಾ ವಿರುದ್ಧ ಮಾತನಾಡಿ ಹಿಂದೂಗಳ ವಿರೋಧ ಕಟ್ಟಿಕೊಂಡ ಸಾಯಿ ಪಲ್ಲವಿ ನಂತರ ಕ್ಷಮೆ ಯಾಚಿಸಿದ್ದರು. ಇತ್ತೀಚೆಗೆ ಯಶ್ 19 ಸಿನಿಮಾ ಟಾಕ್ಸಿಕ್‌ಗೆ ಹೀರೋಯಿನ್ ಆಗ್ತಾರೆಂಬ ಸುದ್ದಿಯೂ ದಟ್ಟವಾಗಿತ್ತು. ಇದಾದ ನಂತರ ಸಾಯಿ ಪಲ್ಲವಿ ದೊಡ್ಡ ಸುದ್ದಿಯಾಗಲಿಲ್ಲ. ಇದೀಗ ರಾಮಾಯಣ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಇದೀಗ ಶ್ರೀಕೃಷ್ಣ ಮಠಕ್ಕೆ ಬೇಟಿ ನೀಡಿರುವ ಸಾಯಿ ಪಲ್ಲವಿ ಫೋಟೊಗಳು ವೈರಲ್ ಆಗಿವೆ.

ಇದನ್ನೂ ವೀಕ್ಷಿಸಿ:  ಈ ವಾರ ಕಿಚ್ಚನ ಪಂಚಾಯ್ತಿಗೆ ಸುದೀಪ್ ಬರಲ್ಲ..! ಕಿಚ್ಚನ ಪಂಚಾಯ್ತಿಗೆ ಶೃತಿ ಎಂಟ್ರಿ..!

03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
Read more