ಸೀತೆಯಾಗುವ ಮೊದಲು ಕೃಷ್ಣನ ದರ್ಶನ ಪಡೆದ ಸಹಜ ಸುಂದರಿ! ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಸಾಯಿಪಲ್ಲವಿ!

ಸೀತೆಯಾಗುವ ಮೊದಲು ಕೃಷ್ಣನ ದರ್ಶನ ಪಡೆದ ಸಹಜ ಸುಂದರಿ! ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಸಾಯಿಪಲ್ಲವಿ!

Published : Dec 24, 2023, 09:55 AM IST

ದಕ್ಷಿಣ ಭಾರತದ ಹೆಸರಾಂತ ನಟಿ ಸಾಯಿ ಪಲ್ಲವಿ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ. ಖಾಸಗಿ ಕಾರ್ಯದ ನಿಮಿತ್ತ ಉಡುಪಿಗೆ ಬಂದಿರುವ ಅವರು, ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದೇವರ ದರ್ಶನ ಕೈಗೊಂಡಿದ್ದಾರೆ.

ರಥಬೀದಿಯಲ್ಲಿರುವ ಕಾಣಿಯೂರು ಮಠಕ್ಕೆ ತೆರಳಿ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ(Sri Vidyavallabha Theertha Swamiji) ಅವರಿಂದ ಆಶೀರ್ವಾದ ಪಡೆದಿದ್ದಾರೆ. ಮಠಕ್ಕೆ ಭೇಟಿ ನೀಡಿದ ಸಾಯಿ ಪಲ್ಲವಿ(Actress Sai Pallavi) ಅವರನ್ನು ಶ್ರೀ ಕೃಷ್ಣ ಮಠದ(Shri Krishna Math) ವತಿಯಿಂದ ಗೌರವಿಸಲಾಯಿತು. ಸಾಯಿ ಪಲ್ಲವಿ ಸದ್ಯ ಬಾಲಿವುಡ್‌ನ ರಾಮಾಯಣ(Ramayana) ಸಿನಿಮಾದಲ್ಲಿ ನಟಿಸುತ್ತಾರೆಂದು ಹೇಳಲಾಗುತ್ತಿದೆ. ರಣ್‌ಬೀರ್ ಜೋಡಿಯಾಗಿ ರಾಮನ ಪತ್ನಿ ಸೀತೆಯ ಪಾತ್ರದಲ್ಲಿ ನಟಿಸುತ್ತಾರೆನ್ನಲಾಗಿದೆ. ಹಿಂದಿಯ ಈ ಸಿನಿಮಾ ಮಾಡೋದಕ್ಕೂ ಮೊದಲು ಕೆಲ ಪವರ್ಫುಲ್ ದೇವಸ್ಥಾನಗಳ ಭೇಟಿ ಮಾಡಲು ಸಾಯಿ ಪಲ್ಲವಿ ನಿರ್ಧರಿಸಿದ್ದು ಉಡುಪಿಯ ಶ್ರೀಕೃಷ್ಣ ದೇವಾಲಯ ದರ್ಶನ ಮಾಡಿಕೊಂಡಿದ್ದಾರೆನ್ನುತ್ತವೆ ಆಪ್ತ ಮೂಲಗಳು. ಕಾಶ್ಮೀರಿ ಫೈಲ್ಸ್ ಸಿನಿಮಾ ವಿರುದ್ಧ ಮಾತನಾಡಿ ಹಿಂದೂಗಳ ವಿರೋಧ ಕಟ್ಟಿಕೊಂಡ ಸಾಯಿ ಪಲ್ಲವಿ ನಂತರ ಕ್ಷಮೆ ಯಾಚಿಸಿದ್ದರು. ಇತ್ತೀಚೆಗೆ ಯಶ್ 19 ಸಿನಿಮಾ ಟಾಕ್ಸಿಕ್‌ಗೆ ಹೀರೋಯಿನ್ ಆಗ್ತಾರೆಂಬ ಸುದ್ದಿಯೂ ದಟ್ಟವಾಗಿತ್ತು. ಇದಾದ ನಂತರ ಸಾಯಿ ಪಲ್ಲವಿ ದೊಡ್ಡ ಸುದ್ದಿಯಾಗಲಿಲ್ಲ. ಇದೀಗ ರಾಮಾಯಣ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಇದೀಗ ಶ್ರೀಕೃಷ್ಣ ಮಠಕ್ಕೆ ಬೇಟಿ ನೀಡಿರುವ ಸಾಯಿ ಪಲ್ಲವಿ ಫೋಟೊಗಳು ವೈರಲ್ ಆಗಿವೆ.

ಇದನ್ನೂ ವೀಕ್ಷಿಸಿ:  ಈ ವಾರ ಕಿಚ್ಚನ ಪಂಚಾಯ್ತಿಗೆ ಸುದೀಪ್ ಬರಲ್ಲ..! ಕಿಚ್ಚನ ಪಂಚಾಯ್ತಿಗೆ ಶೃತಿ ಎಂಟ್ರಿ..!

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more