ಸೀತೆಯಾಗುವ ಮೊದಲು ಕೃಷ್ಣನ ದರ್ಶನ ಪಡೆದ ಸಹಜ ಸುಂದರಿ! ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಸಾಯಿಪಲ್ಲವಿ!

ಸೀತೆಯಾಗುವ ಮೊದಲು ಕೃಷ್ಣನ ದರ್ಶನ ಪಡೆದ ಸಹಜ ಸುಂದರಿ! ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಸಾಯಿಪಲ್ಲವಿ!

Published : Dec 24, 2023, 09:55 AM IST

ದಕ್ಷಿಣ ಭಾರತದ ಹೆಸರಾಂತ ನಟಿ ಸಾಯಿ ಪಲ್ಲವಿ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ. ಖಾಸಗಿ ಕಾರ್ಯದ ನಿಮಿತ್ತ ಉಡುಪಿಗೆ ಬಂದಿರುವ ಅವರು, ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದೇವರ ದರ್ಶನ ಕೈಗೊಂಡಿದ್ದಾರೆ.

ರಥಬೀದಿಯಲ್ಲಿರುವ ಕಾಣಿಯೂರು ಮಠಕ್ಕೆ ತೆರಳಿ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ(Sri Vidyavallabha Theertha Swamiji) ಅವರಿಂದ ಆಶೀರ್ವಾದ ಪಡೆದಿದ್ದಾರೆ. ಮಠಕ್ಕೆ ಭೇಟಿ ನೀಡಿದ ಸಾಯಿ ಪಲ್ಲವಿ(Actress Sai Pallavi) ಅವರನ್ನು ಶ್ರೀ ಕೃಷ್ಣ ಮಠದ(Shri Krishna Math) ವತಿಯಿಂದ ಗೌರವಿಸಲಾಯಿತು. ಸಾಯಿ ಪಲ್ಲವಿ ಸದ್ಯ ಬಾಲಿವುಡ್‌ನ ರಾಮಾಯಣ(Ramayana) ಸಿನಿಮಾದಲ್ಲಿ ನಟಿಸುತ್ತಾರೆಂದು ಹೇಳಲಾಗುತ್ತಿದೆ. ರಣ್‌ಬೀರ್ ಜೋಡಿಯಾಗಿ ರಾಮನ ಪತ್ನಿ ಸೀತೆಯ ಪಾತ್ರದಲ್ಲಿ ನಟಿಸುತ್ತಾರೆನ್ನಲಾಗಿದೆ. ಹಿಂದಿಯ ಈ ಸಿನಿಮಾ ಮಾಡೋದಕ್ಕೂ ಮೊದಲು ಕೆಲ ಪವರ್ಫುಲ್ ದೇವಸ್ಥಾನಗಳ ಭೇಟಿ ಮಾಡಲು ಸಾಯಿ ಪಲ್ಲವಿ ನಿರ್ಧರಿಸಿದ್ದು ಉಡುಪಿಯ ಶ್ರೀಕೃಷ್ಣ ದೇವಾಲಯ ದರ್ಶನ ಮಾಡಿಕೊಂಡಿದ್ದಾರೆನ್ನುತ್ತವೆ ಆಪ್ತ ಮೂಲಗಳು. ಕಾಶ್ಮೀರಿ ಫೈಲ್ಸ್ ಸಿನಿಮಾ ವಿರುದ್ಧ ಮಾತನಾಡಿ ಹಿಂದೂಗಳ ವಿರೋಧ ಕಟ್ಟಿಕೊಂಡ ಸಾಯಿ ಪಲ್ಲವಿ ನಂತರ ಕ್ಷಮೆ ಯಾಚಿಸಿದ್ದರು. ಇತ್ತೀಚೆಗೆ ಯಶ್ 19 ಸಿನಿಮಾ ಟಾಕ್ಸಿಕ್‌ಗೆ ಹೀರೋಯಿನ್ ಆಗ್ತಾರೆಂಬ ಸುದ್ದಿಯೂ ದಟ್ಟವಾಗಿತ್ತು. ಇದಾದ ನಂತರ ಸಾಯಿ ಪಲ್ಲವಿ ದೊಡ್ಡ ಸುದ್ದಿಯಾಗಲಿಲ್ಲ. ಇದೀಗ ರಾಮಾಯಣ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಇದೀಗ ಶ್ರೀಕೃಷ್ಣ ಮಠಕ್ಕೆ ಬೇಟಿ ನೀಡಿರುವ ಸಾಯಿ ಪಲ್ಲವಿ ಫೋಟೊಗಳು ವೈರಲ್ ಆಗಿವೆ.

ಇದನ್ನೂ ವೀಕ್ಷಿಸಿ:  ಈ ವಾರ ಕಿಚ್ಚನ ಪಂಚಾಯ್ತಿಗೆ ಸುದೀಪ್ ಬರಲ್ಲ..! ಕಿಚ್ಚನ ಪಂಚಾಯ್ತಿಗೆ ಶೃತಿ ಎಂಟ್ರಿ..!

04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
Read more