ಅಘೋರಿ ಪಾತ್ರಕ್ಕಾಗಿ ವಿಭೂತಿ ಬಳಿದುಕೊಂಡಿದ್ದಕ್ಕೆ ರಾಧಿಕಾ ಕುಮಾರಸ್ವಾಮಿಗೆ ಏನಾಗಿತ್ತು ಗೊತ್ತಾ?

ಅಘೋರಿ ಪಾತ್ರಕ್ಕಾಗಿ ವಿಭೂತಿ ಬಳಿದುಕೊಂಡಿದ್ದಕ್ಕೆ ರಾಧಿಕಾ ಕುಮಾರಸ್ವಾಮಿಗೆ ಏನಾಗಿತ್ತು ಗೊತ್ತಾ?

Published : Sep 08, 2024, 11:50 AM ISTUpdated : Sep 08, 2024, 12:05 PM IST

ಭೈರಾದೇವಿ ಸಿನಿಮಾ ಚಿತ್ರೀಕರಣದ ಹಂತದಲ್ಲಿ ಇಡೀ ತಂಡ ಸಾಕಷ್ಟು ಅಡೆತಡೆಗಳನ್ನು ಅನುಭವಿಸಿದೆ. ಆದರೆ, ಎಲ್ಲ ಅಡ್ಡಿ ಆತಂಕಗಳನ್ನು ನಿವಾರಿಸಿಕೊಂಡು ಇದೀಗ ಬಿಡುಗಡೆಗೆ ಸಜ್ಜಾಗಿದೆ. ಚಿತ್ರೀಕರಣದ ವೇಳೆ ಅಘೋರಿ ಪಾತ್ರಕ್ಕಾಗಿ..

ಸ್ಯಾಂಡಲ್‌ವುಡ್ ಸ್ವೀಟಿ ಖ್ಯಾತಿಯ ನಟಿ ರಾಧಿಕಾ ಕುಮಾರಸ್ವಾಮಿ ನಟನೆಯ ಭೈರಾದೇವಿ ಚಿತ್ರವು ಬಿಡುಗಡೆಗೆ ಸಿದ್ಧವಾಗಿದೆ. ಮುಂದಿನ ತಿಂಗಳು ದಸರಾ ವೇಳೆ (ಅಕ್ಟೋಬರ್ 03) ಭೈರಾದೇವಿ ಬಿಡುಗಡೆ ಘೋಷಿಸಿರುವ ಚಿತ್ರತಂಡವು ಸದ್ಯ ಪ್ರಚಾರ ಕಾರ್ಯದಲ್ಲಿ ನಿರತವಾಗಿದೆ. ಈ ನಿಟ್ಟಿನಲ್ಲಿ, ನಟಿ ಹಾಗೂ ಭೈರಾದೇವಿ ನಿರ್ಮಾಪಕಿಯೂ ಆಗಿರುವ ರಾಧಿಕಾ ಕುಮಾರಸ್ವಾಮಿ ಅವರು ತಮ್ಮ ಸಂದರ್ಶನಗಳಲ್ಲಿ ಹಲವು ಸಂಗತಿಗಳ ಬಗ್ಗೆ ಮಾತನಾಡಿದ್ದಾರೆ. 

ಭೈರಾದೇವಿ ಸಿನಿಮಾ ಚಿತ್ರೀಕರಣದ ಹಂತದಲ್ಲಿ ಇಡೀ ತಂಡ ಸಾಕಷ್ಟು ಅಡೆತಡೆಗಳನ್ನು ಅನುಭವಿಸಿದೆ. ಆದರೆ, ಎಲ್ಲ ಅಡ್ಡಿ ಆತಂಕಗಳನ್ನು ನಿವಾರಿಸಿಕೊಂಡು ಇದೀಗ ಬಿಡುಗಡೆಗೆ ಸಜ್ಜಾಗಿದೆ. ಚಿತ್ರೀಕರಣದ ವೇಳೆ ಅಘೋರಿ ಪಾತ್ರಕ್ಕಾಗಿ ಮುಖ ಮಾತ್ರವಲ್ಲದೇ ಮೈ ತುಂಬಾ ಬೂದಿ (ವಿಭೂತಿ) ಬಳಿದುಕೊಂಡಿದ್ದ ಕಾರಣಕ್ಕೆ ರಾಧಿಕಾ ಅವರಿಗೆ ಸ್ಕಿನ್ ಅಲರ್ಜಿ ಕೂಡ ಕಾಣಿಸಿಕೊಂಡಿತ್ತಂತೆ. ಆದರೆ, ತಮ್ಮ ವೃತ್ತಿಜೀವನದಲ್ಲಿ ಮಾಡುತ್ತಿರುವ ವಿಭಿನ್ನ ಪಾತ್ರ ಎಂಬ ಕಾರಣಕ್ಕೆ ಎಲ್ಲವನ್ನೂ ಸಹಿಸಿಕೊಂಡಿದ್ದಾಗಿ ಹೇಳಿಕೊಂಡಿದ್ದಾರೆ ರಾಧಿಕಾ ಕುಮಾರಸ್ವಾಮಿ. 

ಮೊದಲ ಬಾರಿಗೆ ನಟ ದರ್ಶನ್ ಕೇಸ್ ಬಗ್ಗೆ ಬಾಯ್ಬಿಟ್ಟ ರಾಧಿಕಾ ಕುಮಾರಸ್ವಾಮಿ, ಏನ್ ಹೇಳಿದ್ರು ನೋಡಿ!

ಇನ್ನು, ಚಿತ್ರೀಕರಣದ ವೇಳೆ ತಮ್ಮ ಬ್ಯೂಟಿ ಹಾಗು ಡಯಟ್ ಮ್ಯಾನೇಜ್ ಮಾಡೋಕೆ ನಟಿ ರಾಧಿಕಾ ಅವರಿಗೆ ಸಾಧ್ಯವೇ ಆಗಲಿಲ್ಲವಂತೆ. ಈ ಕಾರಣಕ್ಕೆ ಸದ್ಯ ತಾವು ಸ್ವಲ್ಪ ದಪ್ಪ ಆಗಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಜತೆಗೆ, ಮೊದಲೆಲ್ಲಾ ಇಷ್ಟಪಡುತ್ತಿದ್ದ ತುಪ್ಪ ತಿನ್ನುವುದನ್ನು ಸದ್ಯ ನಿಲ್ಲಿಸಿರುವುದಾಗಿ ಕೂಡ ಹೇಳಿದ್ದಾರೆ ರಾಧಿಕಾ ಕುಮಾರಸ್ವಾಮಿ! ಇನ್ನೂ ಏನೇನು ಹೇಳಿದ್ದಾರೆ ಅನ್ನೋದಕ್ಕೆ ವಿಡಿಯೋ ನೋಡಿ!

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
Read more