ಡಾ.ರಾಜ್‌ಕುಮಾರ್ ಕರುನಾಡನ್ನಗಲಿ ಕಳೆಯಿತು 15 ವರ್ಷ!

Apr 13, 2021, 5:12 PM IST

ವರನಟ, ನಟಸಾರ್ವಭೌಮ ಡಾ.ರಾಜ್‌ಕುಮಾರ್ ಅವರ 15ನೇ ಪುಣ್ಯ ಸ್ಮರಣೆಯಲ್ಲಿ ಅವರ ಕುಟುಂಬದ ಸದಸ್ಯರು ಸಮಾಧಿಗೆ ಪೂಜೆ ಸಲ್ಲಿಸಿದರು. ಅಪ್ಪಾಜಿ ನಮ್ಮನ್ನು ಅಗಲಿ ಅದೆಷ್ಟು ಬೇಗ 15 ವರ್ಷ ಕಳೆದು ಹೋಯಿತೋ ಗೊತ್ತಾಗಲಿಲ್ಲ. ಎನ್ನುತ್ತಿದ್ದಾರೆ ರಾಜ್ ಪುತ್ರರು. ಬೆಂಗಳೂರಿನ ಕಂಠೀರವ ಸ್ಟುಡಿಯೋಗೆ ಆಗಮಿಸಿದ ಶಿವರಾಜ್‌ಕುಮಾರ್, ಪುನೀತ್ ರಾಜ್‌ಕುಮಾರ್ ಹಾಗೂ ರಾಘವೇಂದ್ರ ರಾಜ್‌ಕುಮಾರ್ ಕುಟುಂಬ ಸರಳವಾಗಿ ಪೂಜೆ ಸಲ್ಲಿಸಿದ್ದಾರೆ. ಕೊರೋನಾ ಸೋಂಕು ಮತ್ತೆ ಹೆಚ್ಚಾಗುತ್ತಿರುವ ಕಾರಣ ಅಭಿಮಾನಿಗಳು ಸರ್ಕಾರದ ನಿಯಮಗಳನ್ನು ಪಾಲಿಸಿ ಪೂಜೆಯಲ್ಲಿ ಭಾಗಿಯಾಗಿದ್ದರು.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment