ಕಾಟೇರನಿಗೆ ಕಾನೂನಿನ ಕೋಳ ತೊಡಿಸಿದ್ದೇ ಸಿದ್ದರಾಮಯ್ಯನ ಖಡಕ್ ನಿರ್ಧಾರ!

ಕಾಟೇರನಿಗೆ ಕಾನೂನಿನ ಕೋಳ ತೊಡಿಸಿದ್ದೇ ಸಿದ್ದರಾಮಯ್ಯನ ಖಡಕ್ ನಿರ್ಧಾರ!

Published : Aug 28, 2024, 01:59 PM IST

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ಪರಪ್ಪನ ಅಗ್ರಹಾರದಲ್ಲಿದ್ದ ದರ್ಶನ್‌ರನ್ನು ಬಳ್ಳಾರಿ ಜೈಲಿಗೆ ವರ್ಗಾಯಿಸಲಾಗುತ್ತಿದೆ. ಚುನಾವಣೆಯಲ್ಲಿ ದರ್ಶನ್ ಪರ ಪ್ರಚಾರ ನಡೆಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

ರೇಣುಕಾಸ್ವಾಮಿಯನ್ನು ಕೊಲೆ ಮಾಡಿ ಶಿಕ್ಷೆ ಅನುಭವಿಸಲು ಹೋಗಿದ್ದ ಸೆರೆಮನೆಯನ್ನೇ ಅರಮನೆಯಾಗಿಸಿಕೊಂಡಿದ್ದ ಕಾಟೇರನಿಗೆ ಮತ್ತೆ ಕಂಟಕ ಶುರುವಾಗಿದೆ. ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಸೆಂಟ್ರಲ್ ಜೈಲಿಗೆ ವರ್ಗಾವಣೆ ಆಗಲಿದ್ದಾನೆ. ಇನ್ನು ವಿಧಾನಸಭಾ ಚುನಾವಣೆಯ ವೇಳೆ ತಮ್ಮ ಪರವಾಗಿ ಪ್ರಚಾರ ನಡೆಸಿದ ದರ್ಶನ್ ತಪ್ಪು ಮಾಡಿದ್ದರಿಂದ ಯಾವುದೇ ಮುಲಾಜೂ ನೋಡದೇ ಸಿಎಂ ಸಿದ್ದರಾಮಯ್ಯ ಖಡಕ್ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಹಳೆಯ ಋಣ, ಮೈಸೂರು ಸ್ನೇಹ, ನಮ್ಮ ಹುಡುಗ, ಪ್ರೀತಿ ಅಭಿಮಾನ ಎಂದಿದ್ದ ಎಲ್ಲವನ್ನೂ ಬದಿಗಿಟ್ಟು ಕೊಲೆ ಆರೋಪಿ ದರ್ಶನ್ ವಿಚಾರದಲ್ಲಿ ಸಿಎಂ ಖಡಕ್ ತೀರ್ಮಾನದಿಂದ ಕಾಟೇರನಿಗೆ ಭಾರಿ ಸಂಕಷ್ಟ ಎದುರಾಗಿದೆ.

ದರ್ಶನ್ ಕೇಸಿನಲ್ಲಿ ಸಿದ್ದರಾಮಯ್ಯನವರು ಹೆಜ್ಜೆ ಹೆಜ್ಜೆಗೂ ಖಡಕ್ ರಾಮಯ್ಯನಾಗಿದ್ದಾರೆ. ದರ್ಶನ್ ಅರೆಸ್ಟ್ ಆದಾಗಿನಿಂದ ಹಿಡಿದು ಪರಪ್ಪನ ಅಗ್ರಹಾರ ಜೈಲು ಸೇರವವರೆಗೆ ಪ್ರತೀ ಹಂತದಲ್ಲೂ ಪೊಲೀಸರ ಬೆನ್ನಿಗೆ ನಿಂತು ಕಾಟೇರನಿಗೆ ಶಾಕ್ ಕೊಟ್ಟಿದ್ದಾರೆ. ಅಷ್ಟಕ್ಕೂ ದರ್ಶನ್ ವಿಚಾರದಲ್ಲಿ ಸಿದ್ದರಾಮಯ್ಯ ಖಡಕ್ ರಾಮಯ್ಯನಾಗಲು ಕಾರಣ ಏನ್ ಗೊತ್ತಾ? ಅದೊಂದು ಫೋಟೋ. ಆಪೋಟೋವನ್ನು ನೋಡಿದ ನಂತರ ಸಿಎಂ ಸಿದ್ದರಾಮಯ್ಯ ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಹೆಜ್ಜೆ ಹೆಜ್ಜೆಗೂ ಶಾಕ್ ಕೊಟ್ಟಿದ್ದಾರೆ. ಕೊಲೆ ಮಾಡಿ ಜೈಲು ಸೇರಿದ್ದ ಕಾಟೇರನ ಕೊರಳಿಗೆ ಕಾನೂನಿನ ಉರುಳು ಸುತ್ತಿಕೊಳ್ಳುವಂತೆ ಮಾಡಿದ್ದಾರೆ. 

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಖಡಕ್ ಆಗಿ ನಿಲ್ಲದೇ ಹೋಗಿದ್ದರೆ ಕೇಸ್ ಹಳ್ಳ ಹಿಡೀತಾ ಇತ್ತು. ದರ್ಶನ್ ಬಚಾವ್ ಆಗುತ್ತಿದ್ದನು. ಆದರೆ, ಸಿದ್ದರಾಮಯ್ಯ ಖಡಕ್ ಆಗಿ ತೀರ್ಮಾನ ಮಾಡಿದ್ದರಿಂದಲೇ ದರ್ಶನ್ ಲಾಕ್ ಆಗಿದ್ದು. ನಂತರ ಇಡೀ ಕೇಸಿಗೆ ನ್ಯಾಯ ಸಿಗುತ್ತಿದೆ. ಆಡಳಿತ ಮಾಡುವ ಸರ್ಕಾರ ಎಲ್ಲಾ ಪ್ರಕರಣಗಳಲ್ಲೂ ಇಂಥದ್ದೇ ಗಟ್ಟಿತನವನ್ನು ತೋರಿಸಬೇಕು ಅನ್ನೋದು ಸಾರ್ವಜನಿಕರ ಅಭಿಪ್ರಾಯ.

04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
Read more