ಡಾ ರಾಜ್‌ಕುಮಾರ್ ಅಪಹರಣ: ಆ 108 ದಿನಗಳು, ಹೇಗಿತ್ತು ಸಿ.ಎಂ ಕೃಷ್ಣ ಹೋರಾಟ?

ಡಾ ರಾಜ್‌ಕುಮಾರ್ ಅಪಹರಣ: ಆ 108 ದಿನಗಳು, ಹೇಗಿತ್ತು ಸಿ.ಎಂ ಕೃಷ್ಣ ಹೋರಾಟ?

Published : Dec 11, 2024, 11:43 AM IST

ಡಾ. ರಾಜ್‌ಕುಮಾರ್ ಅವರ ಅಪಹರಣದ ಸಂದರ್ಭದಲ್ಲಿ ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ಎದುರಿಸಿದ ಸವಾಲುಗಳನ್ನು ಈ ಲೇಖನವು ವಿವರಿಸುತ್ತದೆ. ಕೃಷ್ಣ ಅವರು ಜನರ ಆಕ್ರೋಶ ಮತ್ತು ವೀರಪ್ಪನ್‌ನಿಂದ ರಾಜ್‌ಕುಮಾರ್ ಅವರನ್ನು ಬಿಡಿಸಿಕೊಳ್ಳುವ ಒತ್ತಡವನ್ನು ಹೇಗೆ ನಿಭಾಯಿಸಿದರು ಎಂಬುದನ್ನು ಒಳಗೊಂಡಿದೆ.

ಧೀಮಂತ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ (SM Krishna) ಕರುನಾಡಿಗೆ ಹಲವು ಕೊಡುಗೆಗಳನ್ನ ಕೊಟ್ಟಿದ್ದಾರೆ. ಕನ್ನಡ ಸಿನಿಮಾರಂಗಕ್ಕೆ ಕೂಡ ಕೃಷ್ಣರಿಂದ ಒಂದು ಬಹುಮುಖ್ಯವಾದ ಕೊಡುಗೆ ಇದೆ.  ವರನಟ ಡಾ.ರಾಜ್​ಕುಮಾರ್​ರನ್ನ ಕಾಡುಗಳ್ಳ ವೀರಪ್ಪನ್ ಅಪಹರಣ ಮಾಡಿದಾಗ, ಎಸ್.ಎಂ ಕೃಷ್ಣ ಕರ್ನಾಟಕದ ಮುಖ್ಯಮಂತ್ರಿಯಾಗಿದ್ರು. ಅಣ್ಣಾವ್ರನ್ನ ನರಹಂತಕನ ಕೈಯಿಂದ ಬಚಾವ್ ಮಾಡಿ ತರುವ ಗುರುತರ ಜವಾಬ್ದಾರಿ ಕೃಷ್ಣ ಮೇಲಿತ್ತು.. ಆ ಸವಾಲನ್ನ ಕೃಷ್ಣ ಎದುರಿಸಿದ್ದು ಹೇಗೆ..? ಆ 108 ದಿನಗಳ ಕಾಲ ಏನೆಲ್ಲಾ ನಡೀತು..? ರಜನಿಕಾಂತ್ , ಅಂಬರೀಷ್ ಜೊತೆ ಎಸ್.ಎಂ ಕೃಷ್ಣ ಮಾಡಿಕೊಂಡ ಒಪ್ಪಂದ ಏನಿತ್ತು..? ಆ ಕುರಿತ ಅಪರೂಪದ ಸ್ಟೋರಿ ಇಲ್ಲಿದೆ ನೋಡಿ.

ಹೌದು, ನಮ್ಮನ್ನಗಲಿರೋ ಧೀಮಂತ ರಾಜಕಾರಣಿ ಎಸ್.ಎಂ. ಕೃಷ್ಣ, ಅವರ ರಾಜಕೀಯ ಜೀವನದಲ್ಲಿ ಹಲವು ಸವಾಲು ಎದುರಿಸಿದ್ದಾರೆ. ಆದ್ರೆ ಖುದ್ದು ಕೃಷ್ಣ ಹೇಳಿಕೊಂಡ ಪ್ರಕಾರ ಅವರ ಬದುಕಿನಲ್ಲಿ ಎದುರಿಸಿದ ಅತಿದೊಡ್ಡ, ಆತಂಕ ಸವಾಲು ಅಂದ್ರೆ ಡಾ.ರಾಜ್​ಕುಮಾರ್ ಅಪಹರಣದ ಎಪಿಸೋಡ್. 2000ನೇ ಇಸವಿಯಲ್ಲಿ ಕಾಡುಗಳ್ಳ ವೀರಪ್ಪನ್ ಕರ್ನಾಟಕ ರತ್ನ ರಾಜ್​ಕುಮಾರ್​ರನ್ನ ಕಿಡ್ನಾಪ್ ಮಾಡಿದಾಗ ಇದೇ ಎಸ್.ಎಂ ಕೃಷ್ಣ ಸಿಎಂ ಆಗಿದ್ರು. 

ಡಾ.ರಾಜ್​ಕುಮಾರ್ ಕಿಡ್ನಾಪ್ ಸುದ್ದಿ ಕೇಳಿ ರೊಚ್ಚಿಗೆದ್ದಿದ್ದ ಜನತೆಯನ್ನ ನಿಭಾಯಿಸೋ ಸವಾಲು, ಅಂಥಾ ನರಹಂತಕನ ಕಪಿಮುಷ್ಠಿಯಿಂದ ಅಣ್ಣಾವ್ರನ್ನ ಮರಳಿ ಕರೆತರುವ ಸವಾಲು ಕೃಷ್ಣ ಎದುರಿಗಿದ್ವು. ಆ 108 ದಿನಗಳ ಕಾಲ ಕೃಷ್ಣ ಅಕ್ಷರಶಃ ನಿದ್ದೆಯಿಲ್ಲದೇ ಕಳೆದಿದ್ರು. ಬಹುಶಃ ಯಾವ ಮುಖ್ಯಮಂತ್ರಿ ಕೂಡ ಎದುರಿಸದ ಕಠಿಣ ಸವಾಲೊಂದನ್ನ ಕೃಷ್ಣ ಎದುರಿಸಿದ್ರು. ಎಲ್ಲ ಮಾಹಿತಿಗಾಗಿ ವಿಡಿಯೋ ನೋಡಿ.. 

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
Read more