ಡಾ. ರಾಜ್​ ಕಿಡ್ನಾಪ್ ಕೇಸ್: ಎಸ್ಎಂ ಕೃಷ್ಣ, ಅಂಬಿ &  ರಜನಿ ನಡುವೆ ನಡೆದಿತ್ತು ರಹಸ್ಯ ಒಪ್ಪಂದ !

ಡಾ. ರಾಜ್​ ಕಿಡ್ನಾಪ್ ಕೇಸ್: ಎಸ್ಎಂ ಕೃಷ್ಣ, ಅಂಬಿ & ರಜನಿ ನಡುವೆ ನಡೆದಿತ್ತು ರಹಸ್ಯ ಒಪ್ಪಂದ !

Published : Dec 11, 2024, 12:09 PM ISTUpdated : Dec 11, 2024, 12:18 PM IST

ಕರುನಾಡಿನ ಜನತೆ ವೀರಪ್ಪನ್ ಭಯದಲ್ಲಿ ಮುಳುಗಿದ್ದ ದಿನಗಳಲ್ಲಿ ರಾಜ್‌ಕುಮಾರ್ ಅವರ ಬಿಡುಗಡೆಗೆ ಎಸ್.ಎಂ. ಕೃಷ್ಣ ಅವರು ರಹಸ್ಯ ವ್ಯೂಹ ರೂಪಿಸಿದ್ದರು. ಗೋವಿಂದರಾಜು ಬಿಡುಗಡೆಯ ನಂತರ, ರಾಜ್‌ಕುಮಾರ್ ಅವರ ಆರೋಗ್ಯ ಹದಗೆಡುತ್ತಿರುವ ಸುದ್ದಿ ಆತಂಕ ಹೆಚ್ಚಿಸಿತ್ತು. ಕೇಂದ್ರ ಸರ್ಕಾರದ ಒಪ್ಪಿಗೆಯ ಹೊರತಾಗಿಯೂ ಕೋರ್ಟ್ ವೀರಪ್ಪನ್ ಸಹಚರರ ಬಿಡುಗಡೆಗೆ ಅವಕಾಶ ನೀಡಲಿಲ್ಲ.

ಅವು ಅದೆಂಥಾ ಅತಂಕದ ದಿನಗಳು ಅಂದ್ರೆ, ಕರುನಾಡಿನ ಜನತೆ ಪ್ರತಿದಿನವೂ ಏನಾಗಿಬಿಡುತ್ತೋ ಅನ್ನೋ ಭಯದಲ್ಲಿ ಮುಳುಗಿದ್ರು. ನರಹಂತಕ ವೀರಪ್ಪನ್, ರಾಜ್​ಕುಮಾರ್​ಗೆ ಏನು ಮಾಡಿಬಿಡ್ತಾನೋ ಅನ್ನೋ ಆತಂಕದಲ್ಲಿ ದಿನದೂಡ್ತಾ ಇದ್ರು. ಅಣ್ಣಾವ್ರಿಗೆ ಏನಾದ್ರೂ ಹೆಚ್ಚು ಕಡಿಮೆ ಆದ್ರೆ ಇಡೀ ಕರ್ನಾಟಕ ಹೊತ್ತಿ ಉರಿಯುತ್ತೆ ಅನ್ನೋ ವಿಚಾರ ಮುಖ್ಯಮಂತ್ರಿ ಎಸ್,ಎಂ ಕೃಷ್ಣಗಿತ್ತು. ಇಂಥಾ ಸಮಯದಲ್ಲಿ ಯಾರು ತಾನೇ ನೆಮ್ಮದಿಯಿಂದ ನಿದ್ರಿಸೋಕೆ ಸಾಧ್ಯ..?

ಎಸ್.ಎಂ ಕೃಷ್ಣ - ತಮಿಳುನಾಡು ಸರ್ಕಾರದ ಜೊತೆಗೂಡಿ ಸಂಧಾನಕಾರರನ್ನ ಕಳುಹಿಸಿ, ರಾಜ್ ಬಿಡುಗಡೆಗೆ ಅವಿರತ ಪ್ರಯತ್ನ ಮಾಡ್ತಾ ಇದ್ರು. ನೆಡುಮಾರನ್ ಸಂಧಾನಕಾರನಾಗಿ ಎಂಟ್ರಿ ಕೊಟ್ಟ ಮೇಲೆ ತಕ್ಕ ಮಟ್ಟಿಗೆ ಸಂಧಾನ ಫಲಪೃದವಾಯ್ತು. ಮೊದಲ ಹಂತದಲ್ಲಿ ರಾಜ್​ಕುಮಾರ್ ಅಳಿಯ ಗೋವಿಂದರಾಜು ರಿಲೀಸ್ ಅದ್ರು. ಗೋವಿಂದ್​ರಾಜುರನ್ನ ಕೂರಿಸಿಕೊಂಡು ಅಲ್ಲಿನ ಸಕಲ ವಿಷಯ ತಿಳಿದುಕೊಂಡು ಮುಂದಿನ ಹೆಜ್ಜೆ ಇಟ್ರು ಎಸ್.ಎಂ ಕೃಷ್ಣ.

ಒಂದು ಹಂತದಲ್ಲಿ ಕೇಂದ್ರ ಸರ್ಕಾರವೇ ವೀರಪ್ಪನ್ ಸಹಚರರ ಬಿಡುಗಡೆಗೆ ಒಪ್ಪಿಗೆ ಕೊಟ್ರೂ, ಕೋರ್ಟ್ ಇದಕ್ಕೆ ಅವಕಾಶ ಕೊಡಲಿಲ್ಲ. ಅರಣ್ಯದಲ್ಲಿದ್ದ ಡಾ.ರಾಜ್​ಕುಮಾರ್ ಆರೋಗ್ಯ ಕೂಡ ಹದಗೆಡ್ತಾ ಇದೆ ಅನ್ನೋ ಸುದ್ದಿ ಮತ್ತಷ್ಟು ಆತಂಕ ಸೃಷ್ಟಿಮಾಡ್ತಾ ಇತ್ತು. ಆ ಹಂತದಲ್ಲೇ ಹಲವಾರು ರಹಸ್ಯ ಮಾತುಕಥೆಗಳನ್ನ ಮಾಡಿ, ಕೊನೆಗೂ ಅಣ್ಣಾವ್ರ ರಿಲೀಸ್​ಗೆ ಕೃಷ್ಣ ಒಂದು ವ್ಯೂಹವನ್ನ ರೂಪಿಸಿದ್ರು. ಅಂಬರೀಷ್ ರಜಿನಿಕಾಂತ್ ಮತ್ತು ಕೃಷ್ಣ ಬಿಟ್ರೆ ಆ ವಿಚಾರ ಯಾರಿಗೂ ತಿಳಿದಿರಲಿಲ್ಲ... ಅದೇನು ಅಂತ ವಿಡಿಯೋ ನೋಡಿ... 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more