ಸ್ಪಂದನಾ ಸಾವಿಗೆ ಕಣ್ಣೀರಿಟ್ಟ ಕರುನಾಡು: ಪರಿಚಯ..ಪ್ರೇಮ..ವಿವಾಹ..ಹೇಗಿತ್ತು 16 ವರ್ಷದ ಬದುಕು..?

ಸ್ಪಂದನಾ ಸಾವಿಗೆ ಕಣ್ಣೀರಿಟ್ಟ ಕರುನಾಡು: ಪರಿಚಯ..ಪ್ರೇಮ..ವಿವಾಹ..ಹೇಗಿತ್ತು 16 ವರ್ಷದ ಬದುಕು..?

Published : Aug 08, 2023, 02:47 PM IST

ಬ್ಯಾಕಾಂಕ್ ಪ್ರವಾಸಕ್ಕೆ ಹೋಗಿದ್ದವರು ಮರಳಿ ಬರಲೇ ಇಲ್ಲ!
ಬ್ಯಾಂಕಾಕ್‌ನಲ್ಲಿ ಏನಾಯ್ತು..? ಹೇಗಿತ್ತು ಆ ಸಂದರ್ಭ..? 
ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ನಿಧನ..!

ಅದು ಚಿನ್ನದಂಥಾ ಜೋಡಿ.. ಅವರದು ಮುತ್ತಿನಂಥಾ ಕುಟುಂಬ.. ಕನ್ನಡ ಜನ ಅವರನ್ನ ತಮ್ಮ ಕುಟುಂಬದವರು ಅಂತಲೇ ಅವರನ್ನ ನೋಡ್ತಾ ಇತ್ತು. ಅದೇ ಕಾರಣಕ್ಕೇ, ಇವತ್ತು ಕರುನಾಡಡು ಸೂತಕದ ಮನೆಯಾಗಿರೋದು. ಪ್ರವಾಸಕ್ಕೆ ಅಂತ ಬ್ಯಾಕಾಂಕ್‌ಗೆ(Bangkok) ಹೋಗಿದ್ದವರು, ಮರಳಿ ಬರಲೇ ಇಲ್ಲ.. ಬಂದದ್ದು ಭರಸಿಡಿಲಿನಂಥಾ ಶಾಕಿಂಗ್ ನ್ಯೂಸ್ ಮಾತ್ರ. ಸೋಮವಾರ ಬೆಳಗ್ಗೆಯೇ ಕರ್ನಾಟಕಕ್ಕೆ ಕೆಟ್ಟಸುದ್ದಿಯೊಂದು ಕೇಳಿಸಿತ್ತು. ನಟ ವಿಜಯ ರಾಘವೇಂದ್ರ(Vijay raghavendra) ಅವರ ಪತ್ನಿ, ಸ್ಪಂದನಾ(spandana) ಅವರು ನಿಧನರಾಗಿದ್ದಾರೆ ಅನ್ನೋ ಆಘಾತಕಾರಿ ಸಂಗತಿ, ರಾಜ್ಯಕ್ಕೆ ಶೋಕವುಂಟು ಮಾಡಿತ್ತು. ಮುದ್ದಾದ ಜೋಡಿನಾ ನೋಡಿ ದೃಷ್ಟಿ ತೆಗೆದಿದ್ದ ಜನರೆಲ್ಲಾ, ಈ ಸುದ್ದಿ ಕೇಳ್ತಿದ್ದ ಹಾಗೇ ಕಣ್ಣಲ್ಲಿ ನೀರು ತುಂಬಿಕೊಂಡಿದ್ರು. ವಿಜಯ ರಾಘವೇಂದ್ರ ಅವರು, ತಮ್ಮ ಪತ್ನಿನಾ ಅದೆಷ್ಟು ಹಚ್ಚಿಕೊಂಡಿದ್ರು, ಪ್ರೀತಿಸ್ತಾ ಇದ್ರು ಅಂದ್ರೆ, ಒಂದೇ ಜೀವ ಎರಡು ದೇಹ ಅಂತಾರಲ್ಲಾ, ಆ ಮಾತಿಗೆ  ಸಾಕ್ಷಿಭೂತವಾಗಿದ್ರು. ಈಗ ಸ್ಪಂದನ ಅವರ ಅಗಲಿಕೆ, ರಾಜ್ಯಕ್ಕೇ ಆಘಾತ ನೀಡಿದೆ. ಇನ್ನು ವಿಜಯ್ ರಾಘವೇಂದ್ರ ಅವರ ಬಗ್ಗೆ ನಮಗೆ ಯೋಚಿಸೋದಕ್ಕಾದ್ರೂ ಸಾಧ್ಯವಾಗುತ್ತಾ. ಖಂಡಿತಾ ಇಲ್ಲ. ವಿಜಯ ರಾಘವೇಂದ್ರ ಅವರನ್ನ ಕರ್ನಾಟಕದ ಜನ ಕರೆಯೋದೇ ಚಿನ್ನಾರಿ ಮುತ್ತಾ ಅಂತ. ಕನ್ನಡಿಗರು ವಿಜಯ್ ರಾಘವೇಂದ್ರ ಅವರನ್ನ ಸಿನಿಮಾಗಳಲ್ಲಿ ಹೀರೋ ಆಗಿ ನೋಡೋ ಮುಂಚೆ, ಬಾಲನಟನಾಗಿ ಅಭಿನಯಿಸಿದ್ದನ್ನ ಮೆಚ್ಚಿಕೊಂಡಿದ್ರು. ಹಾಗಾಗಿನೇ, ಕರ್ನಾಟಕದ ಮನೆ ಮಗ ಅನ್ನೋ ಹಾಗೆ ವಿಜಯ ರಾಘವೇಂದ್ರ ಗುರ್ತಿಸಿಕೊಂಡಿದ್ರು. ಹಿರಿಯ ನಟರಾದ ಮೇಲೂ ಖ್ಯಾತಿ ಉಳಿಸಿಕೊಂಡ ಆರ್ಟಿಸ್ಟ್‌ಗಳ ಲಿಸ್ಟ್ ರೆಡಿ ಮಾಡಿದ್ರೆ, ಅಲ್ಲಿ ಸಿಗೋ ಕೆಲವೇ ಕೆಲವು ಹೆಸರುಗಳಲ್ಲಿ, ವಿಜಯ ರಾಘವೇಂದ್ರ ಅವರ ಹೆಸರೂ ಇರುತ್ತೆ.

ಇದನ್ನೂ ವೀಕ್ಷಿಸಿ:  ಉಸಿರು ಚೆಲ್ಲಿದ ಚಿನ್ನಾರಿ ಮುತ್ತನ "ಚಿನ್ನ": ನಟ ವಿಜಯ್ ರಾಘವೇಂದ್ರಗೆ ಮನ ಮೆಚ್ಚಿದ ಮಡದಿ ಸಿಕ್ಕಿದ್ದು ಹೇಗೆ..?

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
Read more