ಸ್ಪಂದನಾ ಸಾವಿಗೆ ಕಣ್ಣೀರಿಟ್ಟ ಕರುನಾಡು: ಪರಿಚಯ..ಪ್ರೇಮ..ವಿವಾಹ..ಹೇಗಿತ್ತು 16 ವರ್ಷದ ಬದುಕು..?

ಸ್ಪಂದನಾ ಸಾವಿಗೆ ಕಣ್ಣೀರಿಟ್ಟ ಕರುನಾಡು: ಪರಿಚಯ..ಪ್ರೇಮ..ವಿವಾಹ..ಹೇಗಿತ್ತು 16 ವರ್ಷದ ಬದುಕು..?

Published : Aug 08, 2023, 02:47 PM IST

ಬ್ಯಾಕಾಂಕ್ ಪ್ರವಾಸಕ್ಕೆ ಹೋಗಿದ್ದವರು ಮರಳಿ ಬರಲೇ ಇಲ್ಲ!
ಬ್ಯಾಂಕಾಕ್‌ನಲ್ಲಿ ಏನಾಯ್ತು..? ಹೇಗಿತ್ತು ಆ ಸಂದರ್ಭ..? 
ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ನಿಧನ..!

ಅದು ಚಿನ್ನದಂಥಾ ಜೋಡಿ.. ಅವರದು ಮುತ್ತಿನಂಥಾ ಕುಟುಂಬ.. ಕನ್ನಡ ಜನ ಅವರನ್ನ ತಮ್ಮ ಕುಟುಂಬದವರು ಅಂತಲೇ ಅವರನ್ನ ನೋಡ್ತಾ ಇತ್ತು. ಅದೇ ಕಾರಣಕ್ಕೇ, ಇವತ್ತು ಕರುನಾಡಡು ಸೂತಕದ ಮನೆಯಾಗಿರೋದು. ಪ್ರವಾಸಕ್ಕೆ ಅಂತ ಬ್ಯಾಕಾಂಕ್‌ಗೆ(Bangkok) ಹೋಗಿದ್ದವರು, ಮರಳಿ ಬರಲೇ ಇಲ್ಲ.. ಬಂದದ್ದು ಭರಸಿಡಿಲಿನಂಥಾ ಶಾಕಿಂಗ್ ನ್ಯೂಸ್ ಮಾತ್ರ. ಸೋಮವಾರ ಬೆಳಗ್ಗೆಯೇ ಕರ್ನಾಟಕಕ್ಕೆ ಕೆಟ್ಟಸುದ್ದಿಯೊಂದು ಕೇಳಿಸಿತ್ತು. ನಟ ವಿಜಯ ರಾಘವೇಂದ್ರ(Vijay raghavendra) ಅವರ ಪತ್ನಿ, ಸ್ಪಂದನಾ(spandana) ಅವರು ನಿಧನರಾಗಿದ್ದಾರೆ ಅನ್ನೋ ಆಘಾತಕಾರಿ ಸಂಗತಿ, ರಾಜ್ಯಕ್ಕೆ ಶೋಕವುಂಟು ಮಾಡಿತ್ತು. ಮುದ್ದಾದ ಜೋಡಿನಾ ನೋಡಿ ದೃಷ್ಟಿ ತೆಗೆದಿದ್ದ ಜನರೆಲ್ಲಾ, ಈ ಸುದ್ದಿ ಕೇಳ್ತಿದ್ದ ಹಾಗೇ ಕಣ್ಣಲ್ಲಿ ನೀರು ತುಂಬಿಕೊಂಡಿದ್ರು. ವಿಜಯ ರಾಘವೇಂದ್ರ ಅವರು, ತಮ್ಮ ಪತ್ನಿನಾ ಅದೆಷ್ಟು ಹಚ್ಚಿಕೊಂಡಿದ್ರು, ಪ್ರೀತಿಸ್ತಾ ಇದ್ರು ಅಂದ್ರೆ, ಒಂದೇ ಜೀವ ಎರಡು ದೇಹ ಅಂತಾರಲ್ಲಾ, ಆ ಮಾತಿಗೆ  ಸಾಕ್ಷಿಭೂತವಾಗಿದ್ರು. ಈಗ ಸ್ಪಂದನ ಅವರ ಅಗಲಿಕೆ, ರಾಜ್ಯಕ್ಕೇ ಆಘಾತ ನೀಡಿದೆ. ಇನ್ನು ವಿಜಯ್ ರಾಘವೇಂದ್ರ ಅವರ ಬಗ್ಗೆ ನಮಗೆ ಯೋಚಿಸೋದಕ್ಕಾದ್ರೂ ಸಾಧ್ಯವಾಗುತ್ತಾ. ಖಂಡಿತಾ ಇಲ್ಲ. ವಿಜಯ ರಾಘವೇಂದ್ರ ಅವರನ್ನ ಕರ್ನಾಟಕದ ಜನ ಕರೆಯೋದೇ ಚಿನ್ನಾರಿ ಮುತ್ತಾ ಅಂತ. ಕನ್ನಡಿಗರು ವಿಜಯ್ ರಾಘವೇಂದ್ರ ಅವರನ್ನ ಸಿನಿಮಾಗಳಲ್ಲಿ ಹೀರೋ ಆಗಿ ನೋಡೋ ಮುಂಚೆ, ಬಾಲನಟನಾಗಿ ಅಭಿನಯಿಸಿದ್ದನ್ನ ಮೆಚ್ಚಿಕೊಂಡಿದ್ರು. ಹಾಗಾಗಿನೇ, ಕರ್ನಾಟಕದ ಮನೆ ಮಗ ಅನ್ನೋ ಹಾಗೆ ವಿಜಯ ರಾಘವೇಂದ್ರ ಗುರ್ತಿಸಿಕೊಂಡಿದ್ರು. ಹಿರಿಯ ನಟರಾದ ಮೇಲೂ ಖ್ಯಾತಿ ಉಳಿಸಿಕೊಂಡ ಆರ್ಟಿಸ್ಟ್‌ಗಳ ಲಿಸ್ಟ್ ರೆಡಿ ಮಾಡಿದ್ರೆ, ಅಲ್ಲಿ ಸಿಗೋ ಕೆಲವೇ ಕೆಲವು ಹೆಸರುಗಳಲ್ಲಿ, ವಿಜಯ ರಾಘವೇಂದ್ರ ಅವರ ಹೆಸರೂ ಇರುತ್ತೆ.

ಇದನ್ನೂ ವೀಕ್ಷಿಸಿ:  ಉಸಿರು ಚೆಲ್ಲಿದ ಚಿನ್ನಾರಿ ಮುತ್ತನ "ಚಿನ್ನ": ನಟ ವಿಜಯ್ ರಾಘವೇಂದ್ರಗೆ ಮನ ಮೆಚ್ಚಿದ ಮಡದಿ ಸಿಕ್ಕಿದ್ದು ಹೇಗೆ..?

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
Read more