ಬ್ಯಾಂಕಾಕ್‌ಗೆ ಹೋದ ಸ್ಪಂದನಾ ಬಾರದ ಲೋಕಕ್ಕೆ: ನೆನೆದು ಕಣ್ಣೀರಿಟ್ಟ ಮಾವ ಚಿನ್ನೇಗೌಡ , ಮೈದುನ ಮುರಳಿ

ಬ್ಯಾಂಕಾಕ್‌ಗೆ ಹೋದ ಸ್ಪಂದನಾ ಬಾರದ ಲೋಕಕ್ಕೆ: ನೆನೆದು ಕಣ್ಣೀರಿಟ್ಟ ಮಾವ ಚಿನ್ನೇಗೌಡ , ಮೈದುನ ಮುರಳಿ

Published : Aug 08, 2023, 09:07 AM IST

ಸ್ಯಾಂಡಲ್‌ವುಡ್‌ನಲ್ಲಿ ಸಾಲು ಸಾಲು ಸಾವಿನ ಸುದ್ದಿ ಕೇಳಿ ಜನ ಕಂಗಾಲಾಗಿದ್ದಾರೆ. ಕರ್ನಾಟಕ ರತ್ನ, ದೊಡ್ಮನೆ ಹುಡುಗ ಪುನೀತ್ ರಾಜಕುಮಾರ್ ಅಗಲಿಕೆಯೇ ಇನ್ನೂ ಜನರ ಮನಸಿಂದ ಮಾಸಿಲ್ಲ. ಅಷ್ಟರಲ್ಲೇ ರಾಜ್ ಕುಟುಂಬದಲ್ಲಿ ಮತ್ತೊಂದು ದೊಡ್ಡ ಆಘಾತ ಕಣ್ಣೀರಿಡುವಂತೆ ಮಾಡಿದೆ.

ಚಂದನವನದ ಚಿನ್ನಾರಿ ಮುತ್ತ, ನಟ ವಿಜಯ ರಾಘವೇಂದ್ರ(Vijay Raghavendra ) ಪತ್ನಿ ಸ್ಪಂದನಾ (Spandana)ಬ್ಯಾಂಕಾಕ್‌ನಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಕಳೆದ ಸೋಮವಾರ ಸ್ಪಂದನಾ ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ರು. ಪ್ರವಾಸದುದ್ದಕ್ಕೂ ಆರೋಗ್ಯವಾಗಿದ್ದ ಸ್ಪಂದನಾಗೆ ನಿನ್ನೆ ಬೆಳಗ್ಗೆ 8 ಗಂಟೆ ಸುಮಾರಿಗೆ ಲೋ ಬಿಪಿ(Low BP) ಕಾಣಿಸಿಕೊಂಡಿದೆ. ಬಳಿಕ ಆಸ್ಪತ್ರೆಗೆ ಕರೆದೊಯ್ದಾಗ, ಹೃದಯಾಘಾತದಿಂದ ಸ್ಪಂದನಾ ಇಹಲೋಕ ತ್ಯಜಿಸಿದ್ದಾರೆಂದು ವೈದ್ಯರು ಖಚಿತ ಪಡಿಸಿದ್ದಾರೆ. ಸ್ಪಂದನಾ ಹಠತ್ ಸಾವು ದೊಡ್ಡ ಶಾಕ್ ಕೊಟ್ಟಿದೆ. ಸ್ಫುರದ್ರೂಪಿಯಾಗಿದ್ದ ಸ್ಪಂದನಾ ಜೀವಕ್ಕೆ ತೂಕ ಇಳಿಕೆಯೇ(Weight loss) ಕುತ್ತಾಯ್ತಾ ಎಂಬ ಅನುಮಾನ ಬಲವಾಗಿದೆ. ಇತ್ತೀಚೆಗಷ್ಟೇ ಸ್ಪಂದನಾ ಜಿಮ್, ಡಯಟ್ ಮಾಡಿ ಬರೋಬ್ಬರಿ 16 ಕೆಜಿ ತೂಕ ಇಳಿಸಿದ್ರು. ಈ ದಿಢೀರ್ ತೂಕ ಇಳಿಕೆಯೇ ಸ್ಪಂದನಾ ಹೃದಯಾಘಾತಕ್ಕೆ ಕಾರಣವಾಗಿರುವಬಹುದು ಎನ್ನಲಾಗ್ತಿದೆ. ಆದ್ರೆ ಇದು ಊಹಪೋಹ ಎಂದು ಸ್ಪಂದನ ದೊಡ್ಡಪ್ಪರಾದ ಬಿಕೆ ಹರಿಪ್ರಸಾದ್ ಹೇಳಿದ್ದಾರೆ. ಸ್ಪಂದನಾ ಬ್ಯಾಂಕಾಕ್‌ನಲ್ಲೇ ಮೃತಪಟ್ಟಿರುವ ಹಿನ್ನೆಲೆ, ಅಲ್ಲೇ ಮರಣೋತ್ತರ ಪರೀಕ್ಷೆ ಪ್ರಕ್ರಿಯೆಯೂ ನಡೆದಿದೆ. ಇಂದು ರಾತ್ರಿ ಸ್ಪಂದನಾ ಪಾರ್ಥಿವವನ್ನ ಬೆಂಗಳೂರಿಗೆ ತರಲಿದ್ದಾರೆ. ನಾಳೆ ಅಂತ್ಯಕ್ರಿಯೆ ನಡೆಸುವ ಸಾಧ್ಯತೆ ಇದೆ.

ಇದನ್ನೂ ವೀಕ್ಷಿಸಿ:  Today Horoscope: ಮಿಥುನ ರಾಶಿಯವರಿಗೆ ಈ ದಿನ ಶತ್ರುಭಾದೆ ಕಾಡಲಿದೆ..ಹಣಕಾಸಿನಲ್ಲಿ ಅನುಕೂಲ

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
Read more