ಕಾಂತಾರ ಸಿನಿಮಾಗೆ ಐವತ್ತು ದಿನದ ಸಂಭ್ರಮ: ಕಡಲ ತೀರದಲ್ಲಿ ಅರಳಿದ ಪಂಜುರ್ಲಿ ಕಲಾಕೃತಿ

ಕಾಂತಾರ ಸಿನಿಮಾಗೆ ಐವತ್ತು ದಿನದ ಸಂಭ್ರಮ: ಕಡಲ ತೀರದಲ್ಲಿ ಅರಳಿದ ಪಂಜುರ್ಲಿ ಕಲಾಕೃತಿ

Published : Nov 15, 2022, 12:36 PM IST

ಕಾಂತಾರ ಸಿನಿಮಾ ಐವತ್ತು ದಿನಗಳನ್ನು ಪೂರೈಸಿದ ಹಿನ್ನೆಲೆ ಮಣಿಪಾಲದ ಸ್ಯಾಂಡ್ ಹಾರ್ಟ್'ನ ಕಲಾವಿದರು ಅದ್ಭುತ ಮರಳುಶಿಲ್ಪ ರಚಿಸಿದ್ದಾರೆ.
 

ಕರಾವಳಿಯ ಕೌತುಕದ ಕತೆ ಹೇಳಿದ ಕಾಂತಾರ ಚಿತ್ರವು ಐವತ್ತು ದಿನ ಪೂರೈಸಿದ್ದು, ಕಾಪುವಿನ ಸ್ಯಾಂಡ್ ಹಾರ್ಟ್ ತಂಡ ಹೃದಯ ತುಂಬಿ ಶುಭ ಹಾರೈಸಿದೆ. ಶ್ರೀನಾಥ್ ಮಣಿಪಾಲ, ವೆಂಕಿ‌ ಪಲಿಮಾರು, ರವಿ ಹಿರೇಬೆಟ್ಡು ಎಂಬುವವರು ದಿನವಿಡೀ ಪರಿಶ್ರಮ ಪಟ್ಟು ಕಲಾಕೃತಿಯಲ್ಲಿ ಪಂಜುರ್ಲಿ ದೈವದ ಮುಖವರ್ಣಿಕೆಯ ಕಲರ್ ಫುಲ್ ಚಿತ್ರಣವನ್ನು ಮೂಡಿಸಿದ್ದಾರೆ‌.  ಕಾಂತಾರದ ಸಕ್ಸಸ್'ಗೆ ಕೇವಲ ಚಿತ್ರತಂಡ ಮಾತ್ರವಲ್ಲ, ಕರುನಾಡೇ ಹೆಮ್ಮೆಯಿಂದ ಬೀಗುತ್ತಿದೆ. ಕರಾವಳಿ ಭಾಗದ ಸಮುದ್ರ ತೀರದಲ್ಲಿ ರಚಿಸುವ ಮರಳು ಶಿಲ್ಪಗಳಿಗೆ ವಿಶೇಷ ಆಕರ್ಷಣೆಯಿದೆ. ಈ ಮರಳು ಶಿಲ್ಪಗಳನ್ನು ರಚಿಸುವುದು ಸುಲಭದ ಕೆಲಸವಲ್ಲ. ದಿನವಿಡೀ ಶ್ರಮಪಟ್ಟು, ಹಲವು ಗಂಟೆಗಳ ಪರಿಶ್ರಮದ ಅಗತ್ಯವಿದ್ದು, ಜಾರುವ ಗುಣದ ಮರಳಿನ ಕಣಗಳನ್ನು ಜೋಡಿಸಿ‌ ಕಲಾಕೃತಿ ಮೂಡಿಸುವುದೇ ಒಂದು ಸಾಹಸ. ಇಷ್ಟೊಂದು‌ ಕಷ್ಟ ಪಟ್ಟು ತಯಾರಿಸಿದ ಈ ಮರಳು ಶಿಲ್ಪವನ್ನು ಕೆಲವೇ ನಿಮಿಷಗಳ ಕಾಲ ಮಾತ್ರ ನೋಡಬಹುದು. ನಂತರ ಈ ಕಲಾಕೃತಿ ಮರಳುಪಾಲಾಗುತ್ತೆ.

'ಜೆಂಟಲ್ ಬರ್ತ್ ಮೆಥಡ್'ನಿಂದ ನ್ಯಾಚುರಲ್ ಡೆಲಿವರಿ ಆಯಿತು; ಸಹಜ ಹೆರಿಗೆ ಸೀಕ್ರೆಟ್ ರಿವೀಲ್ ಮಾಡಿದ ಸೋನಮ್

03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more