ಕಾಂತಾರ ಸಿನಿಮಾಗೆ ಐವತ್ತು ದಿನದ ಸಂಭ್ರಮ: ಕಡಲ ತೀರದಲ್ಲಿ ಅರಳಿದ ಪಂಜುರ್ಲಿ ಕಲಾಕೃತಿ

ಕಾಂತಾರ ಸಿನಿಮಾಗೆ ಐವತ್ತು ದಿನದ ಸಂಭ್ರಮ: ಕಡಲ ತೀರದಲ್ಲಿ ಅರಳಿದ ಪಂಜುರ್ಲಿ ಕಲಾಕೃತಿ

Published : Nov 15, 2022, 12:36 PM IST

ಕಾಂತಾರ ಸಿನಿಮಾ ಐವತ್ತು ದಿನಗಳನ್ನು ಪೂರೈಸಿದ ಹಿನ್ನೆಲೆ ಮಣಿಪಾಲದ ಸ್ಯಾಂಡ್ ಹಾರ್ಟ್'ನ ಕಲಾವಿದರು ಅದ್ಭುತ ಮರಳುಶಿಲ್ಪ ರಚಿಸಿದ್ದಾರೆ.
 

ಕರಾವಳಿಯ ಕೌತುಕದ ಕತೆ ಹೇಳಿದ ಕಾಂತಾರ ಚಿತ್ರವು ಐವತ್ತು ದಿನ ಪೂರೈಸಿದ್ದು, ಕಾಪುವಿನ ಸ್ಯಾಂಡ್ ಹಾರ್ಟ್ ತಂಡ ಹೃದಯ ತುಂಬಿ ಶುಭ ಹಾರೈಸಿದೆ. ಶ್ರೀನಾಥ್ ಮಣಿಪಾಲ, ವೆಂಕಿ‌ ಪಲಿಮಾರು, ರವಿ ಹಿರೇಬೆಟ್ಡು ಎಂಬುವವರು ದಿನವಿಡೀ ಪರಿಶ್ರಮ ಪಟ್ಟು ಕಲಾಕೃತಿಯಲ್ಲಿ ಪಂಜುರ್ಲಿ ದೈವದ ಮುಖವರ್ಣಿಕೆಯ ಕಲರ್ ಫುಲ್ ಚಿತ್ರಣವನ್ನು ಮೂಡಿಸಿದ್ದಾರೆ‌.  ಕಾಂತಾರದ ಸಕ್ಸಸ್'ಗೆ ಕೇವಲ ಚಿತ್ರತಂಡ ಮಾತ್ರವಲ್ಲ, ಕರುನಾಡೇ ಹೆಮ್ಮೆಯಿಂದ ಬೀಗುತ್ತಿದೆ. ಕರಾವಳಿ ಭಾಗದ ಸಮುದ್ರ ತೀರದಲ್ಲಿ ರಚಿಸುವ ಮರಳು ಶಿಲ್ಪಗಳಿಗೆ ವಿಶೇಷ ಆಕರ್ಷಣೆಯಿದೆ. ಈ ಮರಳು ಶಿಲ್ಪಗಳನ್ನು ರಚಿಸುವುದು ಸುಲಭದ ಕೆಲಸವಲ್ಲ. ದಿನವಿಡೀ ಶ್ರಮಪಟ್ಟು, ಹಲವು ಗಂಟೆಗಳ ಪರಿಶ್ರಮದ ಅಗತ್ಯವಿದ್ದು, ಜಾರುವ ಗುಣದ ಮರಳಿನ ಕಣಗಳನ್ನು ಜೋಡಿಸಿ‌ ಕಲಾಕೃತಿ ಮೂಡಿಸುವುದೇ ಒಂದು ಸಾಹಸ. ಇಷ್ಟೊಂದು‌ ಕಷ್ಟ ಪಟ್ಟು ತಯಾರಿಸಿದ ಈ ಮರಳು ಶಿಲ್ಪವನ್ನು ಕೆಲವೇ ನಿಮಿಷಗಳ ಕಾಲ ಮಾತ್ರ ನೋಡಬಹುದು. ನಂತರ ಈ ಕಲಾಕೃತಿ ಮರಳುಪಾಲಾಗುತ್ತೆ.

'ಜೆಂಟಲ್ ಬರ್ತ್ ಮೆಥಡ್'ನಿಂದ ನ್ಯಾಚುರಲ್ ಡೆಲಿವರಿ ಆಯಿತು; ಸಹಜ ಹೆರಿಗೆ ಸೀಕ್ರೆಟ್ ರಿವೀಲ್ ಮಾಡಿದ ಸೋನಮ್

04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
Read more