ಇಳಿವಯಸ್ಸಲ್ಲೂ ಐಟಂ ಹಾಡಿನದ್ದೇ ಗುಂಗು; ಸಿವಿ ಶಿವಶಂಕರ್ ಫನ್ನಿ ವಿಡಿಯೋ ನೆನಪಿಸಿಕೊಂಡ ಜನ!

ಇಳಿವಯಸ್ಸಲ್ಲೂ ಐಟಂ ಹಾಡಿನದ್ದೇ ಗುಂಗು; ಸಿವಿ ಶಿವಶಂಕರ್ ಫನ್ನಿ ವಿಡಿಯೋ ನೆನಪಿಸಿಕೊಂಡ ಜನ!

Published : Jun 27, 2023, 06:15 PM ISTUpdated : Jun 27, 2023, 06:27 PM IST

'ಸಿರಿವಂತನಾದರೂ ಕನ್ನಡ ನಾಡಲ್ಲೆ ಮೆರೆವೆ..' ಹಾಡು ಬರೆದಿದ್ದ ನಟ/ನಿರ್ದೇಶಕ ಸಿ ವಿ ಶಿವಶಂಕರ್ ನಿಧರಾಗಿದ್ದಾರೆ. ಸಿನಿಮಾರಂಗದಲ್ಲಿ ಪರಿಚಿತರಾಗಿದ್ದ ಸಿವಿ ಶಿವಶಂಕರ್‌ ಇತ್ತೀಚಿನ ದಿನಗಳಲ್ಲಿ ತಮ್ಮ ಜನಪ್ರಿಯ ರೀಲ್ಸ್‌ ಒಂದರಿಂದ ವೈರಲ್‌ ಆಗಿದ್ದರು.

ಬೆಂಗಳೂರು (ಜೂ.27): ಕನ್ನಡದ ಹೆಸರಾಂತ ನಿರ್ದೇಶಕ ಹಾಗೂ ನಿರ್ಮಾಪಕ ಸಿವಿ ಶಿವಶಂಕರ್‌ ಮಂಗಳವಾರ ನಿಧನರಾದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. ಸಿನಿಮಾ ರಂಗದಲ್ಲಿದ್ದವರ ಪಾಲಿಗೆ ಚಿರಪರಿಚಿತರಾಗಿದ್ದ ಸಿವಿ ಶಿವಶಂಕರ್‌, ಇತ್ತೀಚಿಗೆ ತಮ್ಮ ರೀಲ್ಸ್‌ವೊಂದರಿಂದ ವೈರಲ್‌ ಆಗಿದ್ದರು.

ಪುತ್ರ ಲಕ್ಷ್ಮಣ್‌ ಭಾರದ್ವಾಜ್ ಹಾಗೂ ಸಿವಿ ಶಿವಶಂಕರ್‌ ಅವರು ಈ ವಿಡಿಯೋದಲ್ಲಿದ್ದರು. ಅಪ್ಪನಿಗೆ ಮೊಬೈಲ್‌ನಲ್ಲಿ ವಿಷ್ಣು ಸಹಸ್ರನಾಮ ಪ್ಲೇ ಮಾಡುವುದು ಹೇಗೆ ಎನ್ನುವುದನ್ನು ವಿವರಿಸುತ್ತಾ ಅದನ್ನು ಪ್ಲೇ ಮಾಡುತ್ತಾರೆ. ಅದರ ಬೆನ್ನಲ್ಲಿಯೇ ಅಪ್ಪನ ಕೈಯಲ್ಲಿ ಮೊಬೈಲ್‌ ಕೊಡುತ್ತಾರೆ. ಅದನ್ನು ಪಡೆದುಕೊಳ್ಳುವ ಅವರು ವಿಷ್ಣು ಸಹಸ್ರನಾಮ ನಿಲ್ಲಿಸಿ, 'ಐಟಂ ಸಾಂಗ್‌' ಎಂದು ಹೇಳುತ್ತಾರೆ. ನನಗೆ ವಿಷ್ಣು ಸಹಸ್ರನಾಮ ಬರುತ್ತೆ ಎಂದು ಅವರು ಹೇಳುವ ಬೆನ್ನಲ್ಲೇ, ಪುಷ್ಪಾ ಚಿತ್ರದ 'ಊ ಅಂಟಾವಾ, ಊಹೂಂ ಅಂಟಾವ' ಹಾಡು ಪ್ಲೇ ಆಗುತ್ತದೆ. ತಪಾಷೆಯ ಈ ವಿಡಿಯೋ ಸೋಶಿಯಲ್‌ ಮೀಡಿಯಾ ಹಾಗೂ ವಾಟ್ಸಾಪ್‌ನಲ್ಲಿ ಜನಪ್ರಿಯವಾಗಿತ್ತು.

CV Shivashankar Death: ಹಿರಿಯ ನಟ, ನಿರ್ದೇಶಕ ಸಿವಿ ಶಿವಶಂಕರ್​ ಹೃದಯಾಘಾತದಿಂದ ನಿಧನ

ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನಲ್ಲಿ ವಾಸವಾಗಿದ್ದ ಶಿವಶಂಕರ್‌ ಅವರು ಹೃದಯಾಘಾತದಿಂದ ಸಾವು ಕಂಡಿದ್ದಾರೆ, ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ, ಅವರು ಬದುಕುಳಿಯಲಿಲ್ಲ. . ಬೆಂಗಳೂರಿನ ಬನಶಂಕರಿ ಚಿತಾಗಾರದಲ್ಲಿ ಸಿ ವಿ ಶಿವಶಂಕರ್ ಅವರ ಅಂತ್ಯಕ್ರಿಯೆ ನಡೆಯಲಿದೆ.

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more