ಉಸಿರು ಚೆಲ್ಲಿದ ಚಿನ್ನಾರಿ ಮುತ್ತನ "ಚಿನ್ನ": ನಟ ವಿಜಯ್ ರಾಘವೇಂದ್ರಗೆ ಮನ ಮೆಚ್ಚಿದ ಮಡದಿ ಸಿಕ್ಕಿದ್ದು ಹೇಗೆ..?

ಉಸಿರು ಚೆಲ್ಲಿದ ಚಿನ್ನಾರಿ ಮುತ್ತನ "ಚಿನ್ನ": ನಟ ವಿಜಯ್ ರಾಘವೇಂದ್ರಗೆ ಮನ ಮೆಚ್ಚಿದ ಮಡದಿ ಸಿಕ್ಕಿದ್ದು ಹೇಗೆ..?

Published : Aug 08, 2023, 02:43 PM IST

ವಯಸ್ಸಲ್ಲದ ವಯಸ್ಸಲ್ಲಿ ಉಸಿರು ಚೆಲ್ಲಿದ ಚಿನ್ನಾರಿ ಮುತ್ತನ ಚಿನ್ನ..!
ನಗುವಿನ ಒಡತಿ..ನಿಷ್ಕಲ್ಮಶ ಪ್ರೀತಿ..ತುಳುನಾಡ ದೈವ ಭಕ್ತೆ..!
ವಿಜಯ್ ರಾಘವೇಂದ್ರಗೆ ಸಿಕ್ಕಿದ್ದು ಹೇಗೆ ಮನ ಮೆಚ್ಚಿದ ಮಡದಿ..?

ವಯಸ್ಸು ಕೇವಲ 36-37 ಆಸುಪಾಸು. ಆದರ್ಶ ಪತ್ನಿ, ಆದರ್ಶ ಗೃಹಿಣಿ, ಚಿನ್ನಾರಿಮುತ್ತನ ಮನಮೆಚ್ಚಿದ ಮಡದಿ. ಈ ಆದರ್ಶ ದಂಪತಿಯ ಮೇಲೆ ಅದ್ಯಾರ ಕೆಟ್ಟ ದೃಷ್ಠಿ ಬಿತ್ತೋ ಏನೋ.. ಚಿನ್ನಾರಿ ಮುತ್ತನ ಚಿನ್ನ, ನಟ ವಿಜಯ್ ರಾಘವೇಂದ್ರ(Vijay raghavendra) ಅವರ ಮನ ಮೆಚ್ಚಿದ ಮುದ್ದಿನ ಮಡದಿ ಸ್ಪಂದನಾ ಸಪ್ತಸಾಗರದಾಚೆ, ವಯಸ್ಸಲ್ಲದ ವಯಸ್ಸಲ್ಲಿ ಉಸಿರು ಚೆಲ್ಲಿದ್ದಾರೆ. ಸ್ಯಾಂಡಲ್‌ವುಡ್‌ನ ಚಿನ್ನಾರಿ ಮುತ್ತ ಅಂತಾನೇ ಫೇಮಸ್ ಆಗಿರೋ ವಿಜಯ್ ರಾಘವೇಂದ್ರ ಅವರ ಪತ್ನಿ ಈ ಸ್ಪಂದನಾ(spandana). ಕುಟುಂಬ ಸದಸ್ಯರು ಮತ್ತು ಸ್ನೇಹಿತರ ಜೊತೆ ಥಾಯ್ಲೆಂಡ್‌ನ ಬ್ಯಾಂಕಾಕ್‌ಗೆ ಪ್ರವಾಸಕ್ಕೆ ಅಂತ ಹೋಗಿದ್ದ ಸ್ಪಂದನಾ ಅಲ್ಲೇ ಅಕಾಲಿಕ ಮರಣಕ್ಕೀಡಾಗಿದ್ದಾರೆ. ರಾತ್ರಿ ಮಲಗಿದವರಿಗೆ ತೀವ್ರ ಹೃದಯಾಘಾತವಾಗಿದೆ(Heart attack). ಆ ಆಘಾತಕ್ಕೆ ಮಲಗಿದವರು ಮತ್ತೆ ಎದ್ದಿಲ್ಲ. ಹಾಗೇ ಇಹಲೋಕ ತ್ಯಜಿಸಿ ಬಿಟ್ಟಿದ್ದಾರೆ ಅಂತ ಅತ್ತಿಗೆಯ ಆಘಾತಕಾರಿ ಸಾವಿನ ಬಗ್ಗೆ ಮಾಹಿತಿ ನೀಡಿದ್ದಾರೆ ವಿಜಯ್ ರಾಘವೇಂದ್ರ ಅವರ ಸಹೋದರ, ನಟ ಶ್ರೀಮುರುಳಿ. ವಿಜಯ್ ರಾಘವೇಂದ್ರ ಮತ್ತು ಸ್ಪಂದನಾ ಅವರದ್ದು ಆದರ್ಶ ದಾಂಪತ್ಯ. ಚಿನ್ನಾರಿ ಮುತ್ತ ಕನ್ನಡ ಚಿತ್ರರಂಗ ದೊಡ್ಮನೆಗೆ ಸೇರಿದವರು. ಅಂದ್ರೆ ವಿಜಯ್ ರಾಘವೇಂದ್ರ ಅವರ ತಂದೆ ಚಿನ್ನೇಗೌಡ್ರು, ಡಾ.ರಾಜ್ ಕುಮಾರ್ ಪತ್ನಿ ಪಾರ್ವತಮ್ಮ ಅವರ ಸ್ವಂತ ಸಹೋದರ. ಇನ್ನು ಸ್ಪಂದನಾ, ರಾಜ್ಯದ ಖ್ಯಾತ ಪೊಲೀಸ್ ಅಧಿಕಾರಿ ಬಿ.ಕೆ ಶಿವರಾಂ ಅವರ ಒಬ್ಬಳೇ ಮಗಳು. ಗಂಡ-ಹೆಂಡತಿ ಹೀಗಿರ್ಬೇಕಪ್ಪಾ ಅನ್ನೋದಕ್ಕೆ ಬೆಸ್ಟ್ ಎಕ್ಸಾಂಪಲ್ ಆಗಿದ್ದವರು ಸ್ಪಂದನಾ ಮತ್ತು ವಿಜಯ್ ರಾಘವೇಂದ್ರ.

ಇದನ್ನೂ ವೀಕ್ಷಿಸಿ:  'ಚಿನ್ನಾರಿ ಮುತ್ತನ' ಬಾಳಲ್ಲಿ ಬಿರುಗಾಳಿ: ಅಡುಗೆ ಮಾಡೋದ್ರಲ್ಲಿ ಎಕ್ಸ್‌ಪರ್ಟ್‌ ಸ್ಪಂದನಾ !

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
Read more