ಉಸಿರು ಚೆಲ್ಲಿದ ಚಿನ್ನಾರಿ ಮುತ್ತನ "ಚಿನ್ನ": ನಟ ವಿಜಯ್ ರಾಘವೇಂದ್ರಗೆ ಮನ ಮೆಚ್ಚಿದ ಮಡದಿ ಸಿಕ್ಕಿದ್ದು ಹೇಗೆ..?

ಉಸಿರು ಚೆಲ್ಲಿದ ಚಿನ್ನಾರಿ ಮುತ್ತನ "ಚಿನ್ನ": ನಟ ವಿಜಯ್ ರಾಘವೇಂದ್ರಗೆ ಮನ ಮೆಚ್ಚಿದ ಮಡದಿ ಸಿಕ್ಕಿದ್ದು ಹೇಗೆ..?

Published : Aug 08, 2023, 02:43 PM IST

ವಯಸ್ಸಲ್ಲದ ವಯಸ್ಸಲ್ಲಿ ಉಸಿರು ಚೆಲ್ಲಿದ ಚಿನ್ನಾರಿ ಮುತ್ತನ ಚಿನ್ನ..!
ನಗುವಿನ ಒಡತಿ..ನಿಷ್ಕಲ್ಮಶ ಪ್ರೀತಿ..ತುಳುನಾಡ ದೈವ ಭಕ್ತೆ..!
ವಿಜಯ್ ರಾಘವೇಂದ್ರಗೆ ಸಿಕ್ಕಿದ್ದು ಹೇಗೆ ಮನ ಮೆಚ್ಚಿದ ಮಡದಿ..?

ವಯಸ್ಸು ಕೇವಲ 36-37 ಆಸುಪಾಸು. ಆದರ್ಶ ಪತ್ನಿ, ಆದರ್ಶ ಗೃಹಿಣಿ, ಚಿನ್ನಾರಿಮುತ್ತನ ಮನಮೆಚ್ಚಿದ ಮಡದಿ. ಈ ಆದರ್ಶ ದಂಪತಿಯ ಮೇಲೆ ಅದ್ಯಾರ ಕೆಟ್ಟ ದೃಷ್ಠಿ ಬಿತ್ತೋ ಏನೋ.. ಚಿನ್ನಾರಿ ಮುತ್ತನ ಚಿನ್ನ, ನಟ ವಿಜಯ್ ರಾಘವೇಂದ್ರ(Vijay raghavendra) ಅವರ ಮನ ಮೆಚ್ಚಿದ ಮುದ್ದಿನ ಮಡದಿ ಸ್ಪಂದನಾ ಸಪ್ತಸಾಗರದಾಚೆ, ವಯಸ್ಸಲ್ಲದ ವಯಸ್ಸಲ್ಲಿ ಉಸಿರು ಚೆಲ್ಲಿದ್ದಾರೆ. ಸ್ಯಾಂಡಲ್‌ವುಡ್‌ನ ಚಿನ್ನಾರಿ ಮುತ್ತ ಅಂತಾನೇ ಫೇಮಸ್ ಆಗಿರೋ ವಿಜಯ್ ರಾಘವೇಂದ್ರ ಅವರ ಪತ್ನಿ ಈ ಸ್ಪಂದನಾ(spandana). ಕುಟುಂಬ ಸದಸ್ಯರು ಮತ್ತು ಸ್ನೇಹಿತರ ಜೊತೆ ಥಾಯ್ಲೆಂಡ್‌ನ ಬ್ಯಾಂಕಾಕ್‌ಗೆ ಪ್ರವಾಸಕ್ಕೆ ಅಂತ ಹೋಗಿದ್ದ ಸ್ಪಂದನಾ ಅಲ್ಲೇ ಅಕಾಲಿಕ ಮರಣಕ್ಕೀಡಾಗಿದ್ದಾರೆ. ರಾತ್ರಿ ಮಲಗಿದವರಿಗೆ ತೀವ್ರ ಹೃದಯಾಘಾತವಾಗಿದೆ(Heart attack). ಆ ಆಘಾತಕ್ಕೆ ಮಲಗಿದವರು ಮತ್ತೆ ಎದ್ದಿಲ್ಲ. ಹಾಗೇ ಇಹಲೋಕ ತ್ಯಜಿಸಿ ಬಿಟ್ಟಿದ್ದಾರೆ ಅಂತ ಅತ್ತಿಗೆಯ ಆಘಾತಕಾರಿ ಸಾವಿನ ಬಗ್ಗೆ ಮಾಹಿತಿ ನೀಡಿದ್ದಾರೆ ವಿಜಯ್ ರಾಘವೇಂದ್ರ ಅವರ ಸಹೋದರ, ನಟ ಶ್ರೀಮುರುಳಿ. ವಿಜಯ್ ರಾಘವೇಂದ್ರ ಮತ್ತು ಸ್ಪಂದನಾ ಅವರದ್ದು ಆದರ್ಶ ದಾಂಪತ್ಯ. ಚಿನ್ನಾರಿ ಮುತ್ತ ಕನ್ನಡ ಚಿತ್ರರಂಗ ದೊಡ್ಮನೆಗೆ ಸೇರಿದವರು. ಅಂದ್ರೆ ವಿಜಯ್ ರಾಘವೇಂದ್ರ ಅವರ ತಂದೆ ಚಿನ್ನೇಗೌಡ್ರು, ಡಾ.ರಾಜ್ ಕುಮಾರ್ ಪತ್ನಿ ಪಾರ್ವತಮ್ಮ ಅವರ ಸ್ವಂತ ಸಹೋದರ. ಇನ್ನು ಸ್ಪಂದನಾ, ರಾಜ್ಯದ ಖ್ಯಾತ ಪೊಲೀಸ್ ಅಧಿಕಾರಿ ಬಿ.ಕೆ ಶಿವರಾಂ ಅವರ ಒಬ್ಬಳೇ ಮಗಳು. ಗಂಡ-ಹೆಂಡತಿ ಹೀಗಿರ್ಬೇಕಪ್ಪಾ ಅನ್ನೋದಕ್ಕೆ ಬೆಸ್ಟ್ ಎಕ್ಸಾಂಪಲ್ ಆಗಿದ್ದವರು ಸ್ಪಂದನಾ ಮತ್ತು ವಿಜಯ್ ರಾಘವೇಂದ್ರ.

ಇದನ್ನೂ ವೀಕ್ಷಿಸಿ:  'ಚಿನ್ನಾರಿ ಮುತ್ತನ' ಬಾಳಲ್ಲಿ ಬಿರುಗಾಳಿ: ಅಡುಗೆ ಮಾಡೋದ್ರಲ್ಲಿ ಎಕ್ಸ್‌ಪರ್ಟ್‌ ಸ್ಪಂದನಾ !

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
Read more