ಸಾಹಸಸಿಂಹನ ಸ್ಮಾರಕ ನಿರ್ಮಾಣಕ್ಕಾಗಿ ಕೂಗು..! ಸರ್ಕಾರಕ್ಕೆ ಗಡುವು ಕೊಟ್ಟ ಡಾ.ವಿಷ್ಣು ಸೇನಾ ಸಮಿತಿ..!

ಸಾಹಸಸಿಂಹನ ಸ್ಮಾರಕ ನಿರ್ಮಾಣಕ್ಕಾಗಿ ಕೂಗು..! ಸರ್ಕಾರಕ್ಕೆ ಗಡುವು ಕೊಟ್ಟ ಡಾ.ವಿಷ್ಣು ಸೇನಾ ಸಮಿತಿ..!

Published : Dec 18, 2023, 02:47 PM IST

ಅಂತ್ಯವಾಗುತ್ತಾ ಸಾಹಸಸಿಂಹನ ವನವಾಸ..?
ಸ್ಮಾರಕ ನಿರ್ಮಾಣಕ್ಕೆ ಸರ್ಕಾರದ ಮೇಲೆ ಒತ್ತಡ..!
ಸಾಗರೋಪಾದಿಯಲ್ಲಿ ಬಂದ ದಾದಾ ಫ್ಯಾನ್ಸ್..!

ಸಾಹಸ ಸಿಂಹ , ಅಭಿನಯ ಭಾರ್ಗವ ಡಾ. ವಿಷ್ಣುವರ್ಧನ್ ಅಂದ್ರೆ ಕನ್ನಡ ಸಿನಿ ರಂಗ ಇರುವ ತನಕ ಮರೆಯಲಾಗದ ಹೆಸರು. ಸ್ಯಾಂಡಲ್‌ವುಡ್‌(Sandalwood) ಕಂಡ ಮೇರು ನಟರಲ್ಲಿ ವಿಷ್ಣು ದಾದಾ ಕೂಡ ಒಬ್ಬರು. ಆದ್ರೆ ಒಂದಲ್ಲ ಎರಡಲ್ಲಾ, ಹದಿನಾಲ್ಕು ವರ್ಷಗಳಿಂದ ಕೂಡ ಅವರ ಅಂತ್ಯಕ್ರಿಯೆ ನಡೆದ ಜಾಗದಲ್ಲಿ ಸ್ಮಾರಕ ನಿರ್ಮಾಣ ಆಗಬೇಕೆಂದು ಹೋರಾಟ ನಡೀತಾನೆ ಇದೆ. ಇಂದು ಆ ಹೋರಾಟ ಇನ್ನೊಂದು ಹಂತವನ್ನ ತಲುಪಿದೆ. ಸಾಹಸಸಿಂಹ ವಿಷ್ಣುವರ್ಧನ್(Vishnuvardhan). ಕನ್ನಡ ಸಿನಿ ಜಗತ್ತಿನ ಆಸ್ತಿ. ಸಿನಿಪ್ರೇಮಿಗಳ ಆರಾಧ್ಯ ದೈವ. ಕನ್ನಡಿಗರು ಎಂದೂ ಮರೆಯದಂತ ಸಿನಿಮಾಗಳನ್ನ ಕೊಟ್ಟ ಅಭಿನಯ ಭಾರ್ಗವ. ವಿಷ್ಣುವರ್ಧನ್ ಅವರು ಸಿನಿ ದುನಿಯಾದಲ್ಲಿ ದೊಡ್ಡ ಹೆಸರನ್ನ ಮಾಡಿದವರು. 1950 ಸೆ.18 ರಂದು ಜನಿಸಿದ ವಿಷ್ಣುದಾದಾ 2009 ಡಿಸೆಂಬರ್ 30ರಂದು ಇಹಲೋಕ ತ್ಯಜಿಸ್ತಾರೆ. ವಿಷ್ಣುವರ್ಧನ್ ಅವರ ಪಾರ್ಥೀವ ಶರೀರವನ್ನ ಅಭಿಮಾನ್ ಸ್ಟುಡಿಯೋದಲ್ಲಿ(Abhiman Studio) ಅಂತ್ಯಕ್ರಿಯೆಯನ್ನೂ ಮಾಡಲಾಗುತ್ತೆ. ಅಭಿಮಾನ್ ಸ್ಟುಡಿಯೋ ಅಂದ್ರೆ ವಿಷ್ಣು ಅಭಿಮಾನಿಗಳಿಗೆ ಒಂದು ಭಾವನಾತ್ಮಕ ನಂಟು ಇರೋ ಜಾಗ. ಅಲ್ಲಿಯೇ ನೆಚ್ಚಿನ ನಟ ಪಂಚಭೂತಗಳಲ್ಲಿ ಲೀನವಾಗಿದ್ದು. ಹೀಗಾಗಿ ಅಂದಿನಿಂದಲೂ ಕೂಡ ಸ್ಮಾರಕ ನಿರ್ಮಾಣ ಆಗಬೇಕು ಅನ್ನೋ ಹೋರಾಟ ನಡೀತಾನೆ ಇದೆ. ಆ ಹೋರಾಟಕ್ಕೆ ಈಗ 14 ವರ್ಷದ ಪ್ರಾಯ. ಆದ್ರೆ ಫಲಿತಾಂಶ ಮಾತ್ರ ಶೂನ್ಯ ಅನ್ನೊದು ನೋವಿನ ವಿಚಾರವಾಗಿದೆ.

ಇದನ್ನೂ ವೀಕ್ಷಿಸಿ:  ಕಂತೆ ಕಂತೆ ದುಡ್ಡೆಲ್ಲಾ ಯಾರ ಸ್ವತ್ತು..? ಹೇಗೆ ಬಂತು..? ಆ ದುಡ್ಡಿನ ಸಾಮ್ರಾಜ್ಯ ಕಟ್ಟಿದ್ದು ಹೇಗೆ ಧೀರಜ್ ಸಾಹು..?

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!