ಕಿಟ್ಟು ಪುಟ್ಟು To ಆಪ್ತಮಿತ್ರ.. ವಿಷ್ಣುವರ್ಧನ್-ದ್ವಾರಕೀಶ್ ಸ್ನೇಹದಲ್ಲಿ ಬಿರುಕು ಮೂಡಲು ಅದೊಂದೇ ಕಾರಣ!

ಕಿಟ್ಟು ಪುಟ್ಟು To ಆಪ್ತಮಿತ್ರ.. ವಿಷ್ಣುವರ್ಧನ್-ದ್ವಾರಕೀಶ್ ಸ್ನೇಹದಲ್ಲಿ ಬಿರುಕು ಮೂಡಲು ಅದೊಂದೇ ಕಾರಣ!

Published : Apr 17, 2024, 09:26 AM ISTUpdated : Apr 17, 2024, 09:27 AM IST

ನಿರ್ಮಾಣ ಮಾಡಿದ್ದು 53.. 14 ಸಿನಿಮಾಗಳಲ್ಲಿ ವಿಷ್ಣುವರ್ಧನ್..! ಕಿಟ್ಟುಪುಟ್ಟ to ಆಪ್ತಮಿತ್ರ.. ಹೇಗಿತ್ತು ಆಪ್ತಮಿತ್ರರ ಬಾಂಧವ್ಯ..? ಬಿರುಕು ಮೂಡಿದ್ದಾದರೂ ಏಕೆ..? ದೂರ ಮಾಡಲು ಎಂದೂ ಆಗಲ್ಲ.. ಎನ್ನುತ್ತಿದ್ದವರ ಸ್ನೇಹದ ಕಥೆ..!

ನಿರ್ಮಾಣ ಮಾಡಿದ್ದು 53.. 14 ಸಿನಿಮಾಗಳಲ್ಲಿ ವಿಷ್ಣುವರ್ಧನ್..! ಕಿಟ್ಟುಪುಟ್ಟ to ಆಪ್ತಮಿತ್ರ.. ಹೇಗಿತ್ತು ಆಪ್ತಮಿತ್ರರ ಬಾಂಧವ್ಯ..? ಬಿರುಕು ಮೂಡಿದ್ದಾದರೂ ಏಕೆ..? ದೂರ ಮಾಡಲು ಎಂದೂ ಆಗಲ್ಲ.. ಎನ್ನುತ್ತಿದ್ದವರ ಸ್ನೇಹದ ಕಥೆ..! ಇದೇ ಈ ಕ್ಷಣದ ಎಪಿಸೋಡ್ ಆಪ್ತಮಿತ್ರರು..! ಕನ್ನಡದ ಕುಳ್ಳ, ಸ್ಯಾಂಡಲ್‌ವುಡ್‌ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ್ ಅವರು ಇಂದು ನಮ್ಮನ್ನೆಲ್ಲ ಅಗಲಿದ್ದಾರೆ.. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಅವ್ರು ತಮ್ಮ ಮನೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.. ನಟರಾಗಿ, ನಿರ್ಮಾಪಕರಾಗಿ ಹಲವಾರು ದಶಕಗಳ ಕಾಲ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದರು. ಕನ್ನಡ ಸಿನಿಮಾ ರಂಗದಲ್ಲಿ ಕಳ್ಳ ಕುಳ್ಳ ಎಂದು ಪ್ರಖ್ಯಾತಿ ಪಡೆದಿದ್ದಂತಹ ಡಾಕ್ಟರ್ ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಸ್ನೇಹ ಎಷ್ಟರ ಮಟ್ಟಿಗೆ ಬಲವಾಗಿತ್ತು ಎಂಬುದು ನಮ್ಮೆಲ್ಲರಿಗೂ ಗೊತ್ತೇ ಇದೆ. 

ವಿಷ್ಣುವರ್ಧನ್ ದ್ವಾರಕೀಶ್ ಜೊತೆ ಬಹಳ ಮಧುರವಾದ ಬಾಂಧವ್ಯವನ್ನು ಬೆಳೆಸಿಕೊಂಡಿದ್ದರು. ಹೀಗಿರುವಾಗ ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಅವರ ಸ್ನೇಹದಲ್ಲಿ ಬಿರುಕು ಮೂಡಿತ್ತು.. ಹಾಗಾದ್ರೆ ವಿಷ್ಣು ದ್ವಾರಕೀಶ್ ನಡುವಿನ ಬಾಂಧವ್ಯ ಹೇಗಿತ್ತು..? ಆಪ್ತಮಿತ್ರ ನಂತರ ದ್ವಾರಕೀಶ್ ವಿಷ್ಣು ಜೊತೆ ಸಿನಿಮಾ ಮಾಡಲೇ ಇಲ್ಲ.. ಆದ್ರೆ ವಿಷ್ಣು ಜೊತೆ ಇನ್ನೂ ಸಿನಿಮಾ ಮಾಡ್ಬೇಕಿತ್ತು ಅಂತ ದ್ವಾರಕೀಶ್ ಹೇಳ್ಕೊಂಡಿದ್ರು. ದ್ವಾರಕೀಶ್ ಹಾಗೂ ವಿಷ್ಣುವರ್ಧನ್ ಅವ್ರ ಸ್ನೇಹ ಸಂಭಂದ ತುಂಬಾ ಚೆನ್ನಾಗಿತ್ತು.. ಈ ಜೋಡಿ ಮಾಡಿದ ಸಿನಿಮಾಗಳು ಸೂಪರ್ ಹಿಟ್ ಆಗ್ತಿತ್ತು.. ಆದ್ರೆ ಇಬ್ಬರ ಮಧ್ಯೆ ಬಿರುಕುಂಟಾಗಿ ನಂತರ ಇವ್ರಿಬ್ಬರು ಒಂದಾಗಿದ್ದು 5 ವರ್ಷಗಳ ಬಳಿಕ. ದ್ವಾರಕೀಶ್ ಅವ್ರು ನಿರ್ಮಾಣ ಮಾಡಿದ 53 ಸಿನಿಮಾಗಳ ಪೈಕಿ 14 ಸಿನಿಮಾಗಳಲ್ಲಿ ವಿಷ್ಣುವರ್ಧನ್ ನಟಿಸಿದ್ದಾರೆ.. ಅವುಗಳಲ್ಲಿ ಬಹುತೇಕ ಸಿನಿಮಾಗಳು ಈ ಆಪ್ತಮಿತ್ರರಿಗೆ ಸಕ್ಸಸ್ ತಂದು ಕೊಟ್ಟಿವೆ.

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more