ಬೆಳ್ಳಿತೆರೆ ಮೇಲೆ ಬೆಳಗುತ್ತಿದೆ ಮತ್ತೊಂದು ದೇಸಿ ಕಥೆ! ಯೋಗರಾಜ್ ಭಟ್-ಬಿ.ಸಿ. ಪಾಟೀಲ್ 'ಗರಡಿ' ಹೇಗಿದೆ?

ಬೆಳ್ಳಿತೆರೆ ಮೇಲೆ ಬೆಳಗುತ್ತಿದೆ ಮತ್ತೊಂದು ದೇಸಿ ಕಥೆ! ಯೋಗರಾಜ್ ಭಟ್-ಬಿ.ಸಿ. ಪಾಟೀಲ್ 'ಗರಡಿ' ಹೇಗಿದೆ?

Published : Nov 12, 2023, 09:12 AM IST

ಸ್ಯಾಂಡಲ್‌ವುಡ್‌ ಪ್ರೇಕ್ಷಕರು ಕನ್ನಡ ಮಣ್ಣಿನ ಅಪ್ಪಟ ದೇಸಿ ಸಿನಿಮಾ ಟಗರು ಪಲ್ಯ ನೋಡಿ ಎಂಜಾಯ್ ಮಾಡಿದ್ರು. ಈಗ ಅಂತದ್ದೇ ಮತ್ತೊಂದು ದೇಸಿ ಮೂವಿ ಬಂದಿದೆ. ಅದೇ ಗರಡಿ. ಡೈರೆಕ್ಟರ್ ಯೋಗರಾಜ್ ಭಟ್ ಹಾಗೂ ಬಿ.ಸಿ ಪಾಟೀಲ್ ಸಾರಥ್ಯದ ದೇಸಿ ಗರಡಿ ರಿಲೀಸ್‌ ಆಗಿದೆ. 
 

ಗರಡಿ ಅಂದ ಕೂಡ್ಲೆ ಇಲ್ಲಿ ಕುಸ್ತಿ ಸುತ್ತ ಕಥೆ ಸಾಗುತ್ತೆ. ಈ ದೇಸಿ ಕುಸ್ತಿ ಜೊತೆ ಪ್ಯೂರ್ ಲವ್ ಸ್ಟೋರಿ ಇದೆ. ನಾಯಕ ಯಶಸ್‌ ಸೂರ್ಯ(Yashas Surya) ಗರಡಿ ಮನೆಯಲ್ಲಿ ತೋಳು ತಟ್ಟೋದರ ಜೊತೆಗೆ ನಾಯಕಿ ಸೋನಲ್ ಮಂಥೋರೋ ಪ್ರೀತಿಯಲ್ಲೂ ಬಿಳ್ತಾರೆ. ಸೋನಲ್‌ನಲ್ಲಿ ಸಿಟಿ ಹುಡುಗಿ. ಆದ್ರೆ ಯಶಸ್ ಹಳ್ಳಿ ಹುಡುಗ. ಈ ಸಿಟಿ ಹುಡ್ಗಿ ಹಳ್ಳಿ ಹುಡುಗ ಮಧ್ಯೆ ನಡೆಯೋ ಸೀಕ್ವೆನ್ಸ್‌ಗಳು ಸಖತ್ತಾಗಿವೆ. ಕಾಲ ಕಾಲದಿಂದಲೂ ಗರಡಿ(Garadi movie) ಮನೆಯನ್ನ ನಡೆಸಿಕೊಂಡು ಬರೋ ರಾಣೆ ಕುಟುಂಬ. ರಾಣೆ ಪಾತ್ರದಲ್ಲಿ ರವಿಶಂಕರ್ ನಟಿಸಿದ್ದಾರೆ. ಆ ರಾಣೆ ಮನೆಯಲ್ಲಿ ಗರಡಿ ಪೈಲ್ವಾನ್‌ಗಳನ್ನ ಸಜ್ಜುಗೊಳಿಸುವ ಕೆಲಸ ರಂಗಪ್ಪಣ್ಣನದ್ದು. ಬಿ ಸಿ ಪಾಟೀಲ್‌(BC Patil) ಇಲ್ಲಿ ರಂಗಪ್ಪಣ್ಣ ಪಾತ್ರ ಮಾಡಿದ್ದಾರೆ. ಈ ಗರಡಿ ಮನೆಯಲ್ಲಿರುವ ನಾಯಕ ಯಶಸ್ ಸೂರ್ಯಗೆ ಕುಸ್ತಿ ಅಖಾಡಕ್ಕೆ ಇಳಿಯುವಂತಿಲ್ಲ ಅನ್ನೋ ನಿರ್ಬಂಧ ಇರುತ್ತೆ. ಆದ್ರೂ ಸೂರಿ ಹೇಗೆ ಕುಸ್ತಿ ಅಖಾಡಕ್ಕೆ ಇಳಿದು ಕುಸ್ತಿ ಮಾಡ್ತಾನೆ.? ಈ ಗರಡಿ ಪೈಲ್ವಾನ್‌ ಬದುಕಿನಲ್ಲಿ ನಾಯಕಿ ಪಪ್ಪಿ ಸೋನಲ್‌ ಹೇಗೆ ಬರ್ತಾಳೆ? ಅನ್ನೋದೆ ಗರಡಿಯ ಕಥೆ. ಗರಡಿ ಸಿನಿಮಾದ ಮತ್ತೊಂದು ಹೈಲೆಟ್ ನಟ ದರ್ಶನ್(Darshan). ಈ ಕತೆಯನ್ನ ನಟ ಯಶಸ್ ಸೂರ್ಯಗೆ ಸಿನಿಮಾ ಮಾಡಿ ಅಂತ ಯೋಗರಾಜ್ ಭಟ್ ಗೆ ಹೇಳಿದ್ದೇ ನಟ ದರ್ಶನ್. ಹೀಗಾಗಿ ಗರಡಿಯಲ್ಲಿ ದರ್ಶನ್ ಗೆಸ್ಟ್ ರೋಲ್ ಮಾಡಿದ್ದು, ಗರಡಿ ಪೋರ್ಸ್ ಹೆಚ್ಚಿಸಿದ್ದಾರೆ. ದರ್ಶನ್ ಪಾತ್ರ ಹೇಗಿದೆ ಅಂತ ನೋಡ್ಬೇಕು ಅಂದ್ರೆ ಅದಕ್ಕೆ ಗರಡಿಯನ್ನ ಥಿಯೇಟರ್ನಲ್ಲೇ ನೋಡ್ಬೇಕು.

ಇದನ್ನೂ ವೀಕ್ಷಿಸಿ:  ಅಡುಗೆ ಕುಕ್ಕರ್‌ನಲ್ಲಿ ತಯಾರಾಗುತ್ತಿತ್ತು ಮಾದಕ ವಸ್ತು: ಬೆಂಗಳೂರು ಡ್ರಗ್ ಮುಕ್ತ ನಗರವಾಗುವುದು ಯಾವಾಗ..?

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!