ಇವರು ಪ್ರತಿಭಟಿಸುವ ರೈತರಲ್ಲ! ಕೊರೆಯುವ ಚಳಿಯಲ್ಲೂ ರಸ್ತೆಯಲ್ಲೇ ಮಲಗಿದ ಕುಸ್ತಿಪಟುಗಳು!

ಇವರು ಪ್ರತಿಭಟಿಸುವ ರೈತರಲ್ಲ! ಕೊರೆಯುವ ಚಳಿಯಲ್ಲೂ ರಸ್ತೆಯಲ್ಲೇ ಮಲಗಿದ ಕುಸ್ತಿಪಟುಗಳು!

Published : Jan 29, 2021, 06:13 PM ISTUpdated : Jan 29, 2021, 06:56 PM IST

ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ತೆರಳಿದ್ದ ರಾಜ್ಯದ ಕುಸ್ತಿಪಟುಗಳಿಗೆ ರಾಜ್ಯ ಕುಸ್ತಿ ಸಂಘದಿಂದ ನಿರ್ಲಕ್ಷ್ಯ, ದೌರ್ಜನ್ಯ ಆರೋಪ ಕೇಳಿ ಬಂದಿದೆ. 

ಬೆಳಗಾವಿ (ಜ. 29):  ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ತೆರಳಿದ್ದ ರಾಜ್ಯದ ಕುಸ್ತಿಪಟುಗಳಿಗೆ ರಾಜ್ಯ ಕುಸ್ತಿ ಸಂಘದಿಂದ ನಿರ್ಲಕ್ಷ್ಯ, ದೌರ್ಜನ್ಯ ಆರೋಪ ಕೇಳಿ ಬಂದಿದೆ. 

ಜನವರಿ 21 ಹಾಗೂ 22ರಂದು ನೋಯ್ಡಾದಲ್ಲಿ ರಾಷ್ಟ್ರಮಟ್ಟದ ಹಿರಿಯರ ಕುಸ್ತಿ ಪಂದ್ಯಾವಳಿ ಆಯೀಜಿಸಲಾಗಿತ್ತು. ಪಂದ್ಯಾವಳಿಯಲ್ಲಿ ಭಾಗಿಯಾಗಲು ರಾಜ್ಯದಿಂದ ಐವರು ಕುಸ್ತಿಪಟುಗಳು ತೆರಳಿದ್ದರು. ಆದರೆ ಕುಸ್ತಿಪಟುಗಳ ಜೊತೆ ಯಾವುದೇ ತರಬೇತುದಾರ, ಸಿಬ್ಬಂದಿ ತೆರಳಿಲ್ಲ. ಯಾವುದೇ ರೀತಿಯ ಸ್ಪೋರ್ಟ್ಸ್ ಕಿಟ್ ಅಥವಾ ಸೌಲಭ್ಯ ನೀಡಿಲ್ಲ. ಪಂದ್ಯಾವಳಿ ಮುಗಿಸಿ ವಾಪಸ್ ಬರಬೇಕೆಂದರೂ ರೈಲ್ವೇ ಟಿಕೆಟ್ ರದ್ದಾಗಿತ್ತು. ಕುಸ್ತಿಪಟುಗಳು ಕರೆ ಮಾಡಿದ್ರೆ ರಾಜ್ಯ ಕುಸ್ತಿ ಸಂಘದ ಕಾರ್ಯದರ್ಶಿ ನರಸಿಂಹಮೂರ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. 

ಮರಳಿ ವಾಪಸ್ ಬರಲಾಗದೇ ಎರಡು ದಿನ ರೈಲ್ವೇ ನಿಲ್ದಾಣದ ಹೊರಗೆ ಕಳೆದು,  ಕೊನೆಗೆ ಕರ್ನಾಟಕ ರಾಜ್ಯ ಭಾರತೀಯ ಶೈಲಿ ಕುಸ್ತಿ ಸಂಘದ ಅಧ್ಯಕ್ಷ ರತನ್ ಮಠಪತಿಗೆ ಕರೆ ಮಾಡಿ, ಅವರ ನೆರವಿನಿಂದ ವಾಪಸ್ಸಾಗಿದ್ದಾರೆ. ರಾಜ್ಯ ಕುಸ್ತಿ ಸಂಘದ ಕಾರ್ಯದರ್ಶಿ ನರಸಿಂಹಮೂರ್ತಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ  ಕುಸ್ತಿಪಟುಗಳು ಡಿಸಿ ಮನವಿ ಸಲ್ಲಿಸಿದ್ದಾರೆ. 

06:06ಕಬ್ಬಡಿ ಟೀಮ್‌ನಲ್ಲಿ ಕೋಚ್‌ ಆಗಿ ಸೋನಿಯಾ ಮನ್ನಾ ಎದುರಿಸಿದ ಸವಾಲುಗಳೇನು
05:28IPL 2025: ಕೋಲ್ಕತಾದಲ್ಲೇ ಕೆಕೆಆರ್‌ಗೆ ಸೋಲುಣಿಸುತ್ತಾ ಆರ್‌ಸಿಬಿ?
18:46‘ಲೆಕ್ಕ’ ತಪ್ಪಿದ್ದೆಲ್ಲಿ ಭಾರತದ ಹೆಣ್ಣು ಹುಲಿ? ವಿನೇಶ್ ವಿರುದ್ಧ ನಡೆಯಿತಾ ಸಂಚು? ಏನದು ತೆರೆಯ ಹಿಂದಿನ ಸತ್ಯ?
11:33ಮುವಾಯ್ ಥಾಯ್​ ಫೈಟ್‌ನಲ್ಲಿ ಅರುಣ್ ಸಾಗರ್ ಪುತ್ರನ ಅಸಾಮಾನ್ಯ ಸಾಧನೆ..! ಥಾಯ್ಲೆಂಡ್‌ನಲ್ಲಿ ಧೂಳೆಬ್ಬಿಸ್ತಿರೋ ಭಾರತದ ಯಂಗ್​ ಫೈಟರ್​
19:35ನಿಜವಾಯ್ತು ‘ಅರ್ಚಕ’ವಾಣಿ, ಒಲಿದಳು ಮಾರಿಯಮ್ಮ ದೇವಿ! ಕರ್ನಾಟಕದ ಅಳಿಯ ಈಗ ಭಾರತ ಟಿ20 ತಂಡದ ನಾಯಕ!
44:42ವಾಣಿಜ್ಯನಗರಿಯಲ್ಲಿ ಕ್ರಿಕೆಟ್‌ ಪ್ರೇಮಿಗಳ ಸಂಭ್ರಮ: ಮುಂಬೈ ಬೀದಿಗಳಲ್ಲಿ ಅಭಿಮಾನಿಗಳ ಹರ್ಷೋದ್ಘಾರ
49:08ಮುಂಬೈನಲ್ಲಿ 'ವಿಶ್ವ' ವಿಜೇತರಿಗೆ ಅದ್ಧೂರಿ ಸನ್ಮಾನ: ವಿಶ್ವಕಪ್‌ ವೀರರ 2.8 ಕಿ.ಮೀ ರೋಡ್‌ ಶೋ
20:04ಎರಡು ಅಚ್ಚರಿಯ ವಿದಾಯ..ಕಾದಿದ್ಯಾ ಮತ್ತೊಂದು ಸರ್‌ಪ್ರೈಜ್? ಸೋಲಿನೊಂದಿಗೆ ಅಂತ್ಯವಾಯ್ತಾ ಮಹೇಂದ್ರನ ಕ್ರಿಕೆಟ್ ಬದುಕು?
05:46 Druva Sarja: ಜಿಂಗಲ ಜಿಂಗಲ ಜಿಂಗಲ ಜೈ RCB ಎಂದ ಧ್ರುವ..! ಯೋಗರಾಜ್ ಭಟ್ ಬರೆದ ಹಾಡಿಗೆ ಆ್ಯಕ್ಷನ್‌ ಪ್ರಿನ್ಸ್‌ ವಾಯ್ಸ್..!
18:45Sania Mirza: ಟೆನ್ನಿಸ್ ತಾರೆಯ ಬದುಕಿನಲ್ಲಿ ಆಗಿರೋದೇನು..? ಸಾನಿಯಾ ಮಿರ್ಜಾ ಜೀವನದ ರಹಸ್ಯವೇನು..?