BIG3: ಚಿನ್ನದ ಪದಕ ಗೆಲ್ಲೋ ಸ್ಫೂರ್ತಿ ಚಿವುಟಿದ ಕತ್ತಲೆಯ ಜಿಲ್ಲಾ ಕ್ರೀಡಾಂಗಣ: ಟಾರ್ಚ್‌ ಹಿಡಿದು ರನ್ನಿಂಗ್‌ ಅಭ್ಯಾಸ

BIG3: ಚಿನ್ನದ ಪದಕ ಗೆಲ್ಲೋ ಸ್ಫೂರ್ತಿ ಚಿವುಟಿದ ಕತ್ತಲೆಯ ಜಿಲ್ಲಾ ಕ್ರೀಡಾಂಗಣ: ಟಾರ್ಚ್‌ ಹಿಡಿದು ರನ್ನಿಂಗ್‌ ಅಭ್ಯಾಸ

Published : Aug 03, 2023, 06:38 PM IST

ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಆಸೆಯಿಂದ ಅಭ್ಯಾಸ ಮಾಡುವ ಕ್ರೀಡಾಪಟುಗಳಿಗೆ ವಿಜಯಪುರ ಜಿಲ್ಲಾಡಳಿತ ಮೈದಾನಕ್ಕೆ ಬೆಳಕಿನ ವ್ಯವಸ್ಥೆಯನ್ನೇ ಮಾಡಿಲ್ಲ.

ವಿಜಯಪುರ (ಆ.03): ನಮ್ಮ ದೇಶದಲ್ಲಿ 135 ಕೋಟಿ ಜನಸಂಖ್ಯೆಯಿದೆ ಕ್ರೀಡೆಯಲ್ಲಿ ಬೆರಳೆಣಿಕೆಯಷ್ಟೂ ಪದಕ ಗೆಲ್ಲೋರಿಲ್ಲ ಎಂದು ನಾವು ಮನಸ್ಸಿನಲ್ಲಿಯೇ ಕೊರಗುತ್ತೇವೆ. ಆದರೆ, ಕ್ರೀಡೆಗೆ ಪ್ರೋತ್ಸಾಹ ಕೊಡಬೇಕಾದ ಸರ್ಕಾರ ಮತ್ತು ಸರ್ಕಾರದ ಪ್ರತಿನಿಧಿಗಳು ಕ್ರೀಡೆಗೆ ಮೀಸಲಿಟ್ಟ ಹಣದಲ್ಲಿಯೂ ಭ್ರಷ್ಟಾಚಾರ ಮಾಡಿ ಕ್ರೀಡಾಪಟುಗಳ ಸ್ಫೂರ್ತಿಯನ್ನೇ ಚಿವುಟಿ ಹಾಕುತ್ತಿದ್ದಾರೆ. ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಚಿನ್ನದ ಪದಕವನ್ನು ಗೆಲ್ಲಬೇಕೆಂದರೆ ನಿದ್ದೆ, ಊಟ, ಐಷಾರಾಮಿ ಜೀವನ ಸೇರಿ ಎಲ್ಲವನ್ನೂ ತ್ಯಾಗ ಮಾಡಬೇಕಾಗುತ್ತದೆ. ಇಷ್ಟೆಲ್ಲಾ ತ್ಯಾಗ ಮಾಡಿದ ನಂತರವೂ ದಿನಕ್ಕೆ ಏಳೆಂಟು ಗಂಟೆಗಳ ಕಾಲ ಅಭ್ಯಾಸ ಮಾಡಬೇಕಾಗುತ್ತದೆ. ಆದ್ದರಿಂದ, ಬಿಸಿಲ ನಾಡು ವಿಜಯಪುರದಲ್ಲಿ ಮಧ್ಯಾಹ್ನದ ಅವಧಿ ಅಭ್ಯಾಸ ಮಾಡಲು ಸಾಧ್ಯವಿಲ್ಲವೆಂದು ಬೆಳಗ್ಗೆ 4 ಗಂಟೆ ಹಾಗೂ ರಾತ್ರಿ 8 ಗಂಟೆ ನಂತರ ಅಭ್ಯಾಸ ಮಾಡುವುದಕ್ಕೆ ಜಿಲ್ಲಾ ಕ್ರೀಡಾಂಗಣಕ್ಕೆ ಬಂದರೆ ಇಲ್ಲಿ ಪ್ರಾಣಕ್ಕೇ ಕುತ್ತು ಬರುವ ಸ್ಥಿತಿಯಿದೆ. ಕ್ರೀಡಾಂಗಣಕ್ಕೆ ಫ್ಲಡ್‌ ಲೈಟ್‌ ಹಾಕುವುದಾಗಿ ಹಣ ಬಿಲ್‌ ಮಾಡಿಸಿಕೊಳ್ಳುವ ಅಧಿಕಾರಿಗಳು ಈವರೆಗೂ ಲೈಟ್‌ ಹಾಕಿಲ್ಲ. ಈ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಕ್ರೀಡಾ ಅಧಿಕಾರಿಗಳು ಮಾತ್ರ ಒಂದಿನಿತೂ ತಲೆ ಕೆಡಿಸಿಕೊಳ್ಳದೇ ನಿರ್ಲಕ್ಷ್ಯ  ಮಾಡುತ್ತಿದ್ದಾರೆ. 

06:06ಕಬ್ಬಡಿ ಟೀಮ್‌ನಲ್ಲಿ ಕೋಚ್‌ ಆಗಿ ಸೋನಿಯಾ ಮನ್ನಾ ಎದುರಿಸಿದ ಸವಾಲುಗಳೇನು
05:28IPL 2025: ಕೋಲ್ಕತಾದಲ್ಲೇ ಕೆಕೆಆರ್‌ಗೆ ಸೋಲುಣಿಸುತ್ತಾ ಆರ್‌ಸಿಬಿ?
18:46‘ಲೆಕ್ಕ’ ತಪ್ಪಿದ್ದೆಲ್ಲಿ ಭಾರತದ ಹೆಣ್ಣು ಹುಲಿ? ವಿನೇಶ್ ವಿರುದ್ಧ ನಡೆಯಿತಾ ಸಂಚು? ಏನದು ತೆರೆಯ ಹಿಂದಿನ ಸತ್ಯ?
11:33ಮುವಾಯ್ ಥಾಯ್​ ಫೈಟ್‌ನಲ್ಲಿ ಅರುಣ್ ಸಾಗರ್ ಪುತ್ರನ ಅಸಾಮಾನ್ಯ ಸಾಧನೆ..! ಥಾಯ್ಲೆಂಡ್‌ನಲ್ಲಿ ಧೂಳೆಬ್ಬಿಸ್ತಿರೋ ಭಾರತದ ಯಂಗ್​ ಫೈಟರ್​
19:35ನಿಜವಾಯ್ತು ‘ಅರ್ಚಕ’ವಾಣಿ, ಒಲಿದಳು ಮಾರಿಯಮ್ಮ ದೇವಿ! ಕರ್ನಾಟಕದ ಅಳಿಯ ಈಗ ಭಾರತ ಟಿ20 ತಂಡದ ನಾಯಕ!
44:42ವಾಣಿಜ್ಯನಗರಿಯಲ್ಲಿ ಕ್ರಿಕೆಟ್‌ ಪ್ರೇಮಿಗಳ ಸಂಭ್ರಮ: ಮುಂಬೈ ಬೀದಿಗಳಲ್ಲಿ ಅಭಿಮಾನಿಗಳ ಹರ್ಷೋದ್ಘಾರ
49:08ಮುಂಬೈನಲ್ಲಿ 'ವಿಶ್ವ' ವಿಜೇತರಿಗೆ ಅದ್ಧೂರಿ ಸನ್ಮಾನ: ವಿಶ್ವಕಪ್‌ ವೀರರ 2.8 ಕಿ.ಮೀ ರೋಡ್‌ ಶೋ
20:04ಎರಡು ಅಚ್ಚರಿಯ ವಿದಾಯ..ಕಾದಿದ್ಯಾ ಮತ್ತೊಂದು ಸರ್‌ಪ್ರೈಜ್? ಸೋಲಿನೊಂದಿಗೆ ಅಂತ್ಯವಾಯ್ತಾ ಮಹೇಂದ್ರನ ಕ್ರಿಕೆಟ್ ಬದುಕು?
05:46 Druva Sarja: ಜಿಂಗಲ ಜಿಂಗಲ ಜಿಂಗಲ ಜೈ RCB ಎಂದ ಧ್ರುವ..! ಯೋಗರಾಜ್ ಭಟ್ ಬರೆದ ಹಾಡಿಗೆ ಆ್ಯಕ್ಷನ್‌ ಪ್ರಿನ್ಸ್‌ ವಾಯ್ಸ್..!
18:45Sania Mirza: ಟೆನ್ನಿಸ್ ತಾರೆಯ ಬದುಕಿನಲ್ಲಿ ಆಗಿರೋದೇನು..? ಸಾನಿಯಾ ಮಿರ್ಜಾ ಜೀವನದ ರಹಸ್ಯವೇನು..?
Read more