Jul 23, 2020, 11:46 AM IST
ಬೆಂಗಳೂರು (ಜು.23): ಒಂದು ಕಡೆ ಕೊರೋನಾ ಇನ್ನೊಂದು ಕಡೆ ರಾಜಕಾರಣ. ಬಿ.ಎಸ್. ಯಡಿಯೂರಪ್ಪ ಸರ್ಕಾರ ಒಂದು ವರ್ಷ ಪೂರೈಸಲಿರುವ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ನಿನ್ನೆಯಷ್ಟೇ (ಬುಧವಾರ) ಸದ್ದಗದ್ದಲವಿಲ್ಲದೇ ಐವರನ್ನು ವಿಧಾನ ಪರಿಷತ್ತಿಗೆ ಸರ್ಕಾರ ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿತ್ತು.
ಇದನ್ನೂ ಓದಿ | ವಿಧಾನ ಪರಿಷತ್ ನಾಮನಿರ್ದೇಶನ: ಹಳ್ಳಿ ಹಕ್ಕಿಗೆ ಮರು ಜೀವ, ಹಠ ಸಾಧಿಸಿದ ಬಿಎಸ್ವೈ...
ಈಗ ಸಚಿವ ಸಂಪುಟ ವಿಸ್ತರಣೆಗೆ ಲೆಕ್ಕಾಚಾರ ಶುರುವಾಗಿದೆ. ಬಾಕಿಯಿರುವ 6 ಸ್ಥಾನಗಳ ಮೇಲೆ ಮೂಲ ಬಿಜೆಪಿಗರು ಮತ್ತು ವಲಸಿಗರು ಕಣ್ಣಿಟ್ಟಿದ್ದು, ತೆರೆಮರೆಯಲ್ಲಿ ಕಸರತ್ತುಗಳು ಶುರುವಾಗಿದೆ. ಯಾರ್ಯಾರಿದ್ದಾರೆ ರೇಸ್ನಲ್ಲಿ? ಈ ಸ್ಟೋರಿ ನೋಡಿ...