Chamarajanagar: ಮೋದಿ ಮತ್ತೊಮ್ಮೆ ಪ್ರಧಾನಿ ಆಗಲೆಂದು ಮಹದೇಶ್ವರ ಬೆಟ್ಟಕ್ಕೆ 102 ವರ್ಷದ ಅಜ್ಜಿಯ ಪಾದಯಾತ್ರೆ

Chamarajanagar: ಮೋದಿ ಮತ್ತೊಮ್ಮೆ ಪ್ರಧಾನಿ ಆಗಲೆಂದು ಮಹದೇಶ್ವರ ಬೆಟ್ಟಕ್ಕೆ 102 ವರ್ಷದ ಅಜ್ಜಿಯ ಪಾದಯಾತ್ರೆ

Published : Mar 07, 2024, 05:39 PM IST


ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು. ದೇಶದಲ್ಲಿ ಮಳೆ-ಬೆಳೆ ಚೆನ್ನಾಗಿ ಆಗಬೇಕು ಎನ್ನುವ ಆಶಯದಲ್ಲಿ 102 ವರ್ಷದ ಅಜ್ಜಿ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮಾಡಿರುವ ವಿಡಿಯೋ ವೈರಲ್‌ ಆಗಿದೆ.
 

ಬೆಂಗಳೂರು (ಮಾ.7): ಮುಂದಿನ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಎನ್ನುವ ಆಶಯದೊಂದಿಗೆ ಚಾಮರಾಜನಗರದ ಹನೂರು ತಾಲೂಕಿನಲ್ಲಿರುವ ಸುಪ್ರಸಿದ್ಧ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟಕ್ಕೆ 102 ವರ್ಷದ ಅಜ್ಜಿಯೊಬ್ಬರು ಪಾದಯಾತ್ರೆ ಮಾಡಿರುವುದು ವೈರಲ್‌ ಆಗಿದೆ.

ಶತಾಯುಷಿ ಅಜ್ಜಿ ಕಾಲ್ನಡಿಗೆಯ ಮೂಲಕವೇ 18 ಕಿಲೋಮೀಟರ್‌ ಚಾರಣ ಮಾಡಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರು ಮೂಲದ ಪಾರ್ವತಮ್ಮ ಅವರಿಗೆ ಚಾರಣದ ವೇಳೆ ಮಾತನಾಡಿಸುವ ಇತರ ಪಾದಯಾತ್ರಿಗಳು, ಯಾಕಾಗಿ ಈ ಪಾದಯಾತ್ರೆ ಎಂದು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ನಮ್ಮ ರೈತರಿಗೆ ಒಳ್ಳೆಯದಾಗಬೇಕು, ಮಳೆ ಬೆಳೆ ಚೆನ್ನಾಗಿ ಆಗಬೇಕು ಎನ್ನುವ ಕಾರಣಕ್ಕೆ ಪಾದಯಾತ್ರೆ ಮಾಡುತ್ತಿದ್ದೇನೆ ಎಂದಿದ್ದಾರೆ.

370ನೇ ವಿಧಿ ರದ್ದಾದ ಬಳಿಕ ಮೊದಲ ಬಾರಿಗೆ ಶ್ರೀನಗರಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ!

ಕೊನೆಗೆ ದೇಶದ ಮುಂದಿನ ಪ್ರಧಾನಿ ಯಾರಾಗಬೇಕು ಎಂದು ಕೇಳಿದಾಗ, ನರೇಂದ್ರ ಮೋದಿಯೇ ಆಗಬೇಕು ಎಂದು ಹೇಳಿದ್ದಾರೆ. ಶತಾಯುಷಿಯ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗಿದ್ದು, ಪ್ರಧಾನಿ ಮೋದಿ ಅವರ ಅಭಿಮಾನಿಗಳು ಇದನ್ನು ಮುಕ್ತವಾಗಿ ಹಂಚಿಕೊಂಡಿದ್ದಾರೆ.
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more