ಬೆಳಗಾವಿಯೊಂದರಲ್ಲಿಯೇ ಕೋವಿಡ್‌ನಿಂದ 110 ಶಿಕ್ಷಕರು ಸಾವು

Oct 9, 2020, 1:23 PM IST

ಬೆಂಗಳೂರು (ಅ. 09): ವಿದ್ಯಾಗಮ ಯೋಜನೆ ಆರಂಭವಾದ ಬಳಿಕ ಶಿಕ್ಷಕರಲ್ಲಿ ಸೋಂಕಿನ ಪ್ರಮಾಣ, ಸಾವಿನ ಪ್ರಮಾಣ ಹೆಚ್ಚಾಗುತ್ತಿದೆ. ಸೆಪ್ಟೆಂಬರ್‌ವರೆಗೆ ರಾಜ್ಯದಲ್ಲಿ 110 ಶಿಕ್ಷಕರು ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯೊಂದರಲ್ಲಿಯೇ 57 ಶಿಕ್ಷಕರು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ನಿಜಕ್ಕೂ ಇದು ಆಘಾತಕಾರಿ ಬೆಳವಣಿಗೆ. 

ವಠಾರ ಶಾಲೆಯ 4 ಮಕ್ಕಳಿಗೆ ಸೋಂಕು; ಶಾಲೆ ಪ್ರಾರಂಭಿಸುವ ಮುನ್ನ ಈ ವರದಿ ನೋಡಲೇಬೇಕು

ಅ. 15 ರಿಂದ ಶಾಲೆಯನ್ನು ಆರಂಭಿಸಬೇಕಾ? ಬೇಡವಾ? ಎನ್ನುವುದರ ಬಗ್ಗೆ ಚರ್ಚೆ ಶುರುವಾದ ಬೆನ್ನಲ್ಲೇ ಈ ಅಂಕಿಅಂಶಗಳನ್ನು ನೋಡಿದರೆ ಪೋಷಕರಿಗೆ ಭಯ ಶುರುವಾಗೋದು ಸಹಜ. ಶಿಕ್ಷಕರು ಹಾಗೂ ಮಕ್ಕಳು ಇಬ್ಬರನ್ನೂ ಅಪಾಯಕ್ಕೆ ದೂಡಿದಂತಾಗುತ್ತದೆ.