ಅಪ್ಪು ಫ್ಯಾನ್ಸ್‌ಗೆ ಇಂದು ರಾಜ್ ಕುಟುಂಬದಿಂದ ಅನ್ನ ಸಂತರ್ಪಣೆ, ವೆಜ್, ನಾನ್‌ವೆಜ್ ಊಟದ ವ್ಯವಸ್ಥೆ

ಅಪ್ಪು ಫ್ಯಾನ್ಸ್‌ಗೆ ಇಂದು ರಾಜ್ ಕುಟುಂಬದಿಂದ ಅನ್ನ ಸಂತರ್ಪಣೆ, ವೆಜ್, ನಾನ್‌ವೆಜ್ ಊಟದ ವ್ಯವಸ್ಥೆ

Published : Nov 09, 2021, 09:48 AM ISTUpdated : Nov 09, 2021, 09:53 AM IST

ನಟ ಪುನೀತ್‌ ರಾಜ್‌ಕುಮಾರ್‌ ಪುಣ್ಯ ಸ್ಮರಣೆ ಪ್ರಯುಕ್ತ ಇಂದು ಅರಮನೆ ಮೈದಾನದಲ್ಲಿ  ಅನ್ನಸಂತರ್ಪಣೆ ಕಾರ್ಯಕ್ರಮ ಇಟ್ಟುಕೊಳ್ಳಲಾಗಿದೆ.

ಬೆಂಗಳೂರು (ನ. 09):  ನಟ ಪುನೀತ್‌ ರಾಜ್‌ಕುಮಾರ್‌ ಪುಣ್ಯ ಸ್ಮರಣೆ ಪ್ರಯುಕ್ತ ಇಂದು ಅರಮನೆ ಮೈದಾನದಲ್ಲಿ  (Palace Ground) ಅನ್ನಸಂತರ್ಪಣೆ ಕಾರ್ಯಕ್ರಮ ಇಟ್ಟುಕೊಳ್ಳಲಾಗಿದೆ. ಸುಮಾರು 25 ಸಾವಿರ ಮಂದಿ ಬರುವ ನಿರೀಕ್ಷೆ ಇದ್ದು, 1500 ಮಂದಿ ಬಾಣಸಿಗರು ಅಡುಗೆ ತಯಾರಿಸುತ್ತಿದ್ದಾರೆ. ಸಸ್ಯಾಹಾರಿ ಹಾಗೂ ಮಾಂಸಾಹಾರಿ ಊಟದ ವ್ಯವಸ್ಥೆ ಇರುತ್ತದೆ. ಏಕಕಾಲದಲ್ಲಿ 3 ಸಾವಿರ ಮಂದಿ ಕೂರಲು ವ್ಯವಸ್ಥೆ ಮಾಡಲಾಗಿದ್ದು, ಬಾಳೆಎಲೆ ಊಟ ಇರುತ್ತದೆ. ಕಾರ್ಯಕ್ರಮದ ಭದ್ರತೆಗೆ ಸುಮಾರು ಒಂದು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. 

ಅನ್ನಸಂತರ್ಪಣೆ ಕಾರ್ಯಕ್ರಮಕ್ಕೆ ಬರುವವರ ವಾಹನ ನಿಲುಗಡೆಗೆ ಬೆಂಗಳೂರು ಸಂಚಾರ ಪೊಲೀಸರು ವ್ಯವಸ್ಥೆ ಮಾಡಿದ್ದಾರೆ. ಸಾರ್ವಜನಿಕರು ಹಾಗೂ ಗಣ್ಯ ವ್ಯಕ್ತಿಗಳ ವಾಹನ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಿದ್ದಾರೆ. ಈ ಪೈಕಿ ಬಸ್‌, ಕಾರು ಹಾಗೂ ದ್ವಿಚಕ್ರ ವಾಹನ ನಿಲುಗಡೆಗೆ ಪ್ರತ್ಯೇಕ ಜಾಗ ನಿಗದಿಗೊಳಿಸಿದ್ದಾರೆ. ಸಾರ್ವಜನಿಕರ ವಾಹನಗಳಿಗೆ ಕೃಷ್ಣವಿಹಾರ ಸಭಾಂಗಣದ ಆವರಣ ಹಾಗೂ ಗಣ್ಯರ ವಾಹನಗಳಿಗೆ ಗಾಯಿತ್ರಿ ವಿಹಾರ ಸಭಾಂಗಣದ ಆವರಣದಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more