ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಪ್ರಕಟ: 22 ಮಕ್ಕಳಲ್ಲಿ ಕರ್ನಾಟಕದ ಇಬ್ಬರು ಆಯ್ಕೆ

Jan 21, 2020, 9:40 PM IST

ಬೆಂಗಳೂರು[ಜ.21]: ಕೇಂದ್ರ ಸರ್ಕಾರದಿಂದ ಸಾಹಸ ಮೆರೆದ ಮಕ್ಕಳಿಗೆ ನೀಡಲಾಗುವ 2019 ನೇ ಸಾಲಿನ  ಶೌರ್ಯ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 22 ಮಕ್ಕಳಿಗೆ ಶೌರ್ಯ ಪ್ರಶಸ್ತಿ ಘೋಷಿಸಿದ್ದು, ಇದರಲ್ಲಿ ಕರ್ನಾಟಕದ ಇಬ್ಬರು ಮಕ್ಕಳನ್ನು ಆಯ್ಕೆಯಾಗಿದ್ದಾರೆ.

ಉಕ್ಕೇರುತ್ತಿದ್ದ ನದಿಯಲ್ಲಿ ಆ್ಯಂಬುಲೆನ್ಸ್ ಗೆ ದಾರಿ ತೋರಿದ ಬಾಲಕಗೆ ಶೌರ್ಯ ಪ್ರಶಸ್ತಿ

ಜನವರಿ 26ರಂದು ರಾಜ​ಪಥದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್​​ನಲ್ಲಿ ಭಾಗಿಯಾಗಲಿರುವ ಈ ಇಬ್ಬರು ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಪ್ರತಿ ಪ್ರಶಸ್ತಿಯು ಪ್ರಶಸ್ತಿ ಪದಕ, 1,00,000 ರೂ. ನಗದು, 10,000 ರೂ. ಮಲ್ಯದ ಬುಕ್ ವೋಚರ್, ಪ್ರಮಾಣ ಪತ್ರ ಹೊಂದಿರಲಿದೆ.