ವಾರಿಯರ್ಸ್‌ಗೆ ಸಿಗುತ್ತಿಲ್ಲ ಸೂಕ್ತ ಚಿಕಿತ್ಸೆ; ಇಬ್ಬರು ಪೌರ ಕಾರ್ಮಿಕರು ಸಾವು

Jul 26, 2020, 3:29 PM IST

ಬೆಂಗಳೂರು (ಜು. 26): ಸಿಲಿಕಾನ್ ಸಿಟಿಯಲ್ಲಿ ಕೊರೊನಾ ವಾರಿಯರ್ಸ್‌ಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ. ಚಿಕಿತ್ಸೆ ಸಿಗದೇ ಇಬ್ಬರು ಪೌರ ಕಾರ್ಮಿಕರು ಮೃತಪಟ್ಟಿದ್ದಾರೆ. ಪುಲಕೇಶಿನಗರ ಹಾಗೂ ದೇವನಹಳ್ಳಿಯ ಇಬ್ಬರು ಕಾರ್ಮಿಕರು ಬಲಿಯಾಗಿದ್ದಾರೆ. 

ನಿನ್ನೆ ಕೊರೊನಾ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ಶಿಕ್ಷಕಿಯೊಬ್ಬರೂ ಇಡೀ ರಾತ್ರಿ ಅಲೆದರೂ ಚಿಕಿತ್ಸೆ ಸಿಗದೇ ಆಟೋದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಗರದಲ್ಲಿ ನಡೆದಿದೆ. ಖಾಸಗಿ ಆಸ್ಪತ್ರೆಗಳ ನಿರ್ಲಕ್ಷ್ಯದಿಂದ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. 
ಕೋವಿಡ್ 19: ಎಲ್ಲಾ ಲೆಕ್ಕಾಚಾರವನ್ನು ಉಲ್ಟಾ ಮಾಡಿದ ಮಹಾಮಾರಿ