ಶಿವಮೊಗ್ಗದಲ್ಲಿ ಅಮಾನವೀಯ ಘಟನೆ: 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ

ಶಿವಮೊಗ್ಗದಲ್ಲಿ ಅಮಾನವೀಯ ಘಟನೆ: 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ

Published : Jul 01, 2025, 10:08 AM IST

ನಮ್ಮ ಮನೆಯ ಮುಂಭಾಗ ಕಸವನ್ನು ಹಾಕಬೇಡಿ ಎಂದಿದ್ದಕ್ಕೆ ಮಹಿಳೆಯೊಬ್ಬರು 67 ವರ್ಷದ ವೃದ್ಧೆಯನ್ನು ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗ (ಜು.01): ನಮ್ಮ ಮನೆಯ ಮುಂಭಾಗ ಕಸವನ್ನು ಹಾಕಬೇಡಿ ಎಂದಿದ್ದಕ್ಕೆ ಮಹಿಳೆಯೊಬ್ಬರು 67 ವರ್ಷದ ವೃದ್ಧೆಯನ್ನು ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಗೌತಮಪುರ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹುಚ್ಚಮ್ಮ ಹಲ್ಲೆಗೊಳಗಾದ ವೃದ್ಧೆ. ಕಳೆದ ಜೂ.24ರಂದು ಈ ಘಟನೆ ನಡೆದಿದೆ. ಹುಚ್ಚಮ್ಮ ಅವರು ಮನೆಯ ಪಕ್ಕದ ಪ್ರೇಮ ಎಂಬುವರಿಗೆ ನಮ್ಮ ಮನೆಯ ಮುಂಭಾಗ ಕಸವನ್ನು ಹಾಕಬೇಡಿ ಎಂದು ಹೇಳಿದ್ದಾರೆ. ಇದರಿಂದ ಸಿಟ್ಟಿಗೆದ್ದ ಪ್ರೇಮ, ವೃದ್ಧೆಯನ್ನು ಮನೆಯಿಂದ ಎಳೆದುಕೊಂಡು ಬಂದು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದಾರೆ.

ಹುಚ್ಚಮ್ಮನ ಪುತ್ರ ಕನ್ನಪ್ಪ ಈ ವಿಚಾರವನ್ನು ಗ್ರಾಮದ ಹಿರಿಯರಿಗೆ ಮುಟ್ಟಿಸಿದ್ದಾರೆ. ಆದರೆ, ಹಿರಿಯರು ಇದನ್ನು ನಿರ್ಲಕ್ಷಿಸಿದ್ದಾರೆ. ಕನ್ನಪ್ಪ ತಾಯಿಯೊಂದಿಗೆ ಆನಂದಪುರ ಪೊಲೀಸ್ ಠಾಣೆಗೆ ತೆರಳಿ ಹಲ್ಲೆ ಮಾಡಿದ ಪ್ರೇಮ, ಆಕೆಯ ಪತಿ ಮಂಜುನಾಥ್‌, ಪುತ್ರ ದರ್ಶನ್‌ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪ್ರೇಮವನ್ನು ಬಂಧಿಸಿದ್ದ ಪೊಲೀಸರು ಬಳಿಕ ಠಾಣಾ ಜಾಮೀನು ನೀಡಿ ಮನೆಗೆ ಕಳುಹಿಸಿದ್ದರು. ಈ ವಿಚಾರ ಗಂಭೀರವಾಗುತ್ತಿದ್ದಂತೆ ಎಚ್ಚೆತ್ತ ಆನಂದಪುರ ಪೊಲೀಸರು ಮತ್ತೆ ಪ್ರೇಮಾರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more