Ganesha Chaturthi: ಸಾರ್ವಜನಿಕರ ಬಳಿ ಪೀಡಿಸಿ ಚಂದಾ ಕೇಳಿದ್ರೆ ಕ್ರಿಮಿನಲ್ ಕೇಸ್‌

Ganesha Chaturthi: ಸಾರ್ವಜನಿಕರ ಬಳಿ ಪೀಡಿಸಿ ಚಂದಾ ಕೇಳಿದ್ರೆ ಕ್ರಿಮಿನಲ್ ಕೇಸ್‌

Published : Aug 26, 2022, 10:48 AM IST

ಗಣೇಶ ಹೆಸರಲ್ಲಿ ಬೇಕಾ ಬಿಟ್ಟಿ ಚಂದಾ ಎತ್ತಿದ್ರೆ ಹುಷಾರ್‌, ಒತ್ತಾಯಪೂರ್ವಕ ಹಣ ವಸೂಲಿ ಮಾಡದಂತೆ ವಾರ್ನಿಂಗ್‌, ಸಾರ್ವಜನಿಕರ ಬಳಿ ಪೀಡಿಸಿ ಚಂದಾ ಕೇಳಿದ್ರೆ ಕ್ರಿಮಿನಲ್ ಕೇಸ್‌ ಹಾಕಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಖಡಕ್ ವಾರ್ನಿಂಗ್ ನೀಡಿದ್ದಾರೆ. 

ಬೆಂಗಳೂರು (ಆ.26): ಗಣೇಶ ಹೆಸರಲ್ಲಿ ಬೇಕಾ ಬಿಟ್ಟಿ ಚಂದಾ ಎತ್ತಿದ್ರೆ ಹುಷಾರ್‌, ಒತ್ತಾಯಪೂರ್ವಕ ಹಣ ವಸೂಲಿ ಮಾಡದಂತೆ ವಾರ್ನಿಂಗ್‌, ಸಾರ್ವಜನಿಕರ ಬಳಿ ಪೀಡಿಸಿ ಚಂದಾ ಕೇಳಿದ್ರೆ ಕ್ರಿಮಿನಲ್ ಕೇಸ್‌ ಹಾಕಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಖಡಕ್ ವಾರ್ನಿಂಗ್ ನೀಡಿದ್ದಾರೆ. ನಗರದ ಎಲ್ಲ ವಿಭಾಗಗಳ ಡಿಸಿಪಿ ಜೊತೆ ಸಭೆ ನಡೆಸಿ ಈ ಸೂಚನೆಯನ್ನು ನೀಡಲಾಗಿದೆ. ಯಾರೂ ಮನೆಗಳ ಬಳಿ ಹೋಗಿ ಚಂದಾ ಕೇಳಬಾರದು, ಸ್ವಯಂಪ್ರೇರಿತವಾಗಿ ಜನರು ಹಣ ಕೊಟ್ಟರೆ ತೆಗೆದುಕೊಳ್ಳಬೇಕು. ಮಾತ್ರವಲ್ಲದೇ ಇಷ್ಟೇ ಹಣ ಕೊಡಿ ಅಂತಾ ಡಿಮ್ಯಾಂಡ್ ಮಾಡಬಾರದು, ಆಕಸ್ಮಾತ್ ಮಾಡಿದರೆ ಅವರ ವಿರುದ್ದ ಕೇಸ್ ಹಾಕಲಾಗುತ್ತದೆ. ಮುಖ್ಯವಾಗಿ ಹಣ ಕೊಟ್ಟಿಲ್ಲ ಅಂದರೆ ನೋಡ್ಕೋತಿನಿ ಅನ್ನುವವರಿಗೆ ವಾರ್ನಿಂಗ್ ಕೊಟ್ಟು ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಖಾಕಿ ಪಡೆ ಎಚ್ಚರಿಕೆಯನ್ನು ಕೊಟ್ಟಿದೆ. ಸಾವರ್ಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಪೊಲೀಸ್ ಆಯುಕ್ತರಿಂದ ಈ ಕ್ರಮವನ್ನು ಕೈಗೊಳ್ಳಲಾಗಿದೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more