ಆಸ್ತಿ ಲೆಕ್ಕ 40 ಕೋಟಿ...ಅರಮನೆಯೇ 80 ಕೋಟಿ, ಜಮೀರ್‌ ದರ್ಬಾರ್‌ಗೆ ಬೀಳುತ್ತಾ ಬ್ರೇಕ್.?

ಆಸ್ತಿ ಲೆಕ್ಕ 40 ಕೋಟಿ...ಅರಮನೆಯೇ 80 ಕೋಟಿ, ಜಮೀರ್‌ ದರ್ಬಾರ್‌ಗೆ ಬೀಳುತ್ತಾ ಬ್ರೇಕ್.?

Published : Jul 06, 2022, 03:50 PM ISTUpdated : Jul 06, 2022, 03:57 PM IST

ಜಾರಿ ನಿರ್ದೇಶನಾಲಯ ವರದಿ ಆಧರಿಸಿ ಶಾಸಕ ಜಮೀರ್‌ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಎಸಿಬಿ, ಈಗ ಜಮೀರ್‌ ಸಾಮ್ರಾಜ್ಯದ ಸಂಪತ್ತಿನ ಶೋಧನೆಗೆ ಕಾರ್ಯಾಚರಣೆ ಶುರು ಮಾಡಿದೆ. ಎಸಿಬಿ ದಾಳಿ ಬಳಿಕ ಜಮೀರ್‌ಗೀಗ ಬಂಧನದ ಭೀತಿ ಎದುರಾಗಿದೆ. 

ಬೆಂಗಳೂರು (ಜು. 06): ಜಾರಿ ನಿರ್ದೇಶನಾಲಯ (ED) ವರದಿ ಆಧರಿಸಿ ಶಾಸಕ ಜಮೀರ್‌ (Zameer Ahmad) ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಎಸಿಬಿ, ಈಗ ಜಮೀರ್‌ ಸಾಮ್ರಾಜ್ಯದ ಸಂಪತ್ತಿನ ಶೋಧನೆಗೆ ಕಾರ್ಯಾಚರಣೆ ಶುರು ಮಾಡಿದೆ. ಎಸಿಬಿ ದಾಳಿ ಬಳಿಕ ಜಮೀರ್‌ಗೀಗ ಬಂಧನದ ಭೀತಿ ಎದುರಾಗಿದೆ. 

ಜಮೀರ್‌ ಅಹಮದ್‌ ಖಾನ್‌ ಅವರ ನಿವಾಸದ ಮೇಲೆ ನಡೆದ ದಾಳಿ ವೇಳೆ ಲಕ್ಷಾಂತರ ರು. ನಗದು, ಕೋಟ್ಯಂತರ ಮೌಲ್ಯದ ವಜ್ರ ವೈಢೂರ್ಯ, ಚಿನ್ನಾಭರಣ, ಬೆಳ್ಳಿ ವಸ್ತುಗಳು, 9 ಲೀಟರ್‌ ವಿದೇಶಿ ಮದ್ಯ, ಅಪಾರ ಪ್ರಮಾಣದ ಭೂ ದಾಖಲೆಗಳು, 30ಕ್ಕೂ ಹೆಚ್ಚು ಜೀವಂತ ಗುಂಡುಗಳು ಹಾಗೂ ಪರವಾನಗಿ ಹೊಂದಿರುವ ರಿವಾಲ್ವಾರ್‌ ಅನ್ನು ಎಸಿಬಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ 2019ರಲ್ಲಿ ಬೆಳಕಿಗೆ ಬಂದಿದ್ದ IMA ಕಂಪನಿಯ ಬಹುಕೋಟಿ ವಂಚನೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಬಗ್ಗೆ ಇಡಿ ತನಿಖೆ ನಡೆಸಿತ್ತು. ಆಗ ಐಎಂಐ ಕಂಪನಿ ಮಾಲೀಕ ಮನ್ಸೂರ್‌ ಮಹಮ್ಮದ್‌ ಖಾನ್‌ನಿಂದ 45 ಕೋಟಿ ರು ಮೌಲ್ಯದ ಆಸ್ತಿ ಖರೀದಿಸಿದ್ದು ಜಮೀರ್‌ ಅವರಿಗೆ ಇಡಿ ಉರುಳು ಸುತ್ತಿಕೊಂಡಿತು. ಈ ಸಂಬಂಧ ಎರಡು ಬಾರಿ ಶಾಸಕರನ್ನು ವಿಚಾರಣೆ ನಡೆಸಿದ ಇಡಿ, ಈ ಸಂಬಂಧ ಶಾಸಕರ ಮನೆ ಹಾಗೂ ಅವರ ವ್ಯವಹಾರದ ಕಂಪನಿಗಳ ಮೇಲೆ ದಾಳಿ ಸಹ ನಡೆಸಿ ದಾಖಲೆಗಳನ್ನು ಜಪ್ತಿ ಮಾಡಿತ್ತು. ತನ್ನ ತನಿಖೆ ವೇಳೆ ಜಮೀರ್‌ ಅವರು ಸರ್ಕಾರಕ್ಕೆ ಸಲ್ಲಿಸಿದ ಆಸ್ತಿ ಪ್ರಮಾಣಕ್ಕೂ ಅಗಣಿತ ವ್ಯತ್ಯಾಸ ಕಂಡು ಬಂದಿತು. ಈ ವರದಿ ಆಧರಿಸಿ ಕೊನೆಗೂ ಎಸಿಬಿ ತನಿಖೆ ಶುರು ಮಾಡಿದೆ.

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?