ACB Raid: 28 ಮನೆಗಳು , 16 ಸೈಟ್‌ಗಳು, 31.20 ಕೋಟಿ ಮೌಲ್ಯದ ಆಸ್ತಿ, ನಿವೃತ್ತ ಅಧಿಕಾರಿ ಅರೆಸ್ಟ್‌

ACB Raid: 28 ಮನೆಗಳು , 16 ಸೈಟ್‌ಗಳು, 31.20 ಕೋಟಿ ಮೌಲ್ಯದ ಆಸ್ತಿ, ನಿವೃತ್ತ ಅಧಿಕಾರಿ ಅರೆಸ್ಟ್‌

Suvarna News   | Asianet News
Published : Nov 29, 2021, 05:35 PM IST

- ಅಕ್ರಮವಾಗಿ 28 ಮನೆ, 16 ಸೈಟ್‌ ಸಂಪಾದಿಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆ ನಿರ್ಮಿತಿ ಯೋಜನಾ ಮಾಜಿ ನಿರ್ದೇಶಕ

- ಬೆಂಗಳೂರು ಸುತ್ತಮುತ್ತ ಅಕ್ರಮವಾಗಿ ಆಸ್ತಿ ಸಂಪಾದನೆ

- ನಿವೃತ್ತ ಅಧಿಕಾರಿ ವಾಸುದೇವ್ ಬಂಧನ

ಬೆಂಗಳೂರು (ನ. 29):  ನಗರದ ಸುತ್ತಮುತ್ತ 28 ಮನೆಗಳು ಹಾಗೂ 16 ನಿವೇಶನಗಳು ಸೇರಿದಂತೆ ಅಕ್ರಮವಾಗಿ .31.20 ಕೋಟಿ ಮೌಲ್ಯದ ಆಸ್ತಿ ಸಂಪಾದನೆ ಮಾಡಿ ಸಿಕ್ಕಿಬಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆ (Bengaluru Rural) ನಿರ್ಮಿತಿ ಕೇಂದ್ರದ ಮಾಜಿ ಯೋಜನಾ ನಿರ್ದೇಶಕ ಆರ್‌.ಎನ್‌.ವಾಸುದೇವ್‌ (RN Vasudev) ಅವರನ್ನು ಎಸಿಬಿ (ACB) ಬಂಧಿಸಿದೆ. 

ನಾಲ್ಕು ದಿನಗಳ ಹಿಂದೆ ಅವರ ಅಕ್ರಮ ‘ಸಂಪತ್ತಿನ ಗಣಿ’ ಮೇಲೆ ದಾಳಿ ನಡೆಸಿದ್ದ ಎಸಿಬಿ, ವಾಸುದೇವ್‌ ಬಳಿ ಆದಾಯಕ್ಕಿಂತ ಶೇ. 1434 ರಷ್ಟುಅಧಿಕ ಅಕ್ರಮ ಸಂಪತ್ತು ಪತ್ತೆ ಹಚ್ಚಿತ್ತು. ಆ ಬಳಿಕ ವಾಸುದೇವ್‌ ಬಳಿ ಬೆಂಗಳೂರಿನಲ್ಲಿರುವ ಆಸ್ತಿಯಲ್ಲದೆ ರಾಮನಗರ (Ramanagar) ಜಿಲ್ಲೆ ಮಾಗಡಿ ತಾಲೂಕಿನ ಗೊಲ್ಲರಪಾಳ್ಯದಲ್ಲಿ 6.20 ಎಕರೆ ಹಾಗೂ ರಾಮನಗರ ತಾಲೂಕಿನ ಫಾಲಬೋವಿದೊಡ್ಡಿ ಗ್ರಾಮದಲ್ಲಿ 10 ಗುಂಟೆ ಜಾಗ ಪುತ್ರನ ಹೆಸರಿನಲ್ಲಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಕೆಂಗೇರಿ ಉಪ ನಗರ, ಮಲ್ಲೇಶ್ವರ, ನೆಲಮಂಗಲದ ಸೋಂಪುರ (ದಾಬಸಪೇಟೆ), ಅರ್ಕಾವತಿ ಬಡಾವಣೆ, ಯಲಹಂಕ ಉಪನಗರ, ವಿಶ್ವೇಶ್ವರಯ್ಯ ಬಡಾವಣೆ ಹಾಗೂ ಜ್ಞಾನಭಾರತಿಗಳಲ್ಲಿ ವಾಸುದೇವ್‌ ಅವರು ಸಂಪಾದಿಸಿದ್ದ 16 ನಿವೇಶನಗಳು ಪತ್ತೆಯಾಗಿವೆ. ಅಬ್ಬಬ್ಬಾ...ಕೋಟಿ ಕುಬೇರ ಅಂದ್ರೆ ಇವರೇ ನೋಡಿ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more