ACB Raid: 28 ಮನೆಗಳು , 16 ಸೈಟ್‌ಗಳು, 31.20 ಕೋಟಿ ಮೌಲ್ಯದ ಆಸ್ತಿ, ನಿವೃತ್ತ ಅಧಿಕಾರಿ ಅರೆಸ್ಟ್‌

ACB Raid: 28 ಮನೆಗಳು , 16 ಸೈಟ್‌ಗಳು, 31.20 ಕೋಟಿ ಮೌಲ್ಯದ ಆಸ್ತಿ, ನಿವೃತ್ತ ಅಧಿಕಾರಿ ಅರೆಸ್ಟ್‌

Suvarna News   | Asianet News
Published : Nov 29, 2021, 05:35 PM IST

- ಅಕ್ರಮವಾಗಿ 28 ಮನೆ, 16 ಸೈಟ್‌ ಸಂಪಾದಿಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆ ನಿರ್ಮಿತಿ ಯೋಜನಾ ಮಾಜಿ ನಿರ್ದೇಶಕ

- ಬೆಂಗಳೂರು ಸುತ್ತಮುತ್ತ ಅಕ್ರಮವಾಗಿ ಆಸ್ತಿ ಸಂಪಾದನೆ

- ನಿವೃತ್ತ ಅಧಿಕಾರಿ ವಾಸುದೇವ್ ಬಂಧನ

ಬೆಂಗಳೂರು (ನ. 29):  ನಗರದ ಸುತ್ತಮುತ್ತ 28 ಮನೆಗಳು ಹಾಗೂ 16 ನಿವೇಶನಗಳು ಸೇರಿದಂತೆ ಅಕ್ರಮವಾಗಿ .31.20 ಕೋಟಿ ಮೌಲ್ಯದ ಆಸ್ತಿ ಸಂಪಾದನೆ ಮಾಡಿ ಸಿಕ್ಕಿಬಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆ (Bengaluru Rural) ನಿರ್ಮಿತಿ ಕೇಂದ್ರದ ಮಾಜಿ ಯೋಜನಾ ನಿರ್ದೇಶಕ ಆರ್‌.ಎನ್‌.ವಾಸುದೇವ್‌ (RN Vasudev) ಅವರನ್ನು ಎಸಿಬಿ (ACB) ಬಂಧಿಸಿದೆ. 

ನಾಲ್ಕು ದಿನಗಳ ಹಿಂದೆ ಅವರ ಅಕ್ರಮ ‘ಸಂಪತ್ತಿನ ಗಣಿ’ ಮೇಲೆ ದಾಳಿ ನಡೆಸಿದ್ದ ಎಸಿಬಿ, ವಾಸುದೇವ್‌ ಬಳಿ ಆದಾಯಕ್ಕಿಂತ ಶೇ. 1434 ರಷ್ಟುಅಧಿಕ ಅಕ್ರಮ ಸಂಪತ್ತು ಪತ್ತೆ ಹಚ್ಚಿತ್ತು. ಆ ಬಳಿಕ ವಾಸುದೇವ್‌ ಬಳಿ ಬೆಂಗಳೂರಿನಲ್ಲಿರುವ ಆಸ್ತಿಯಲ್ಲದೆ ರಾಮನಗರ (Ramanagar) ಜಿಲ್ಲೆ ಮಾಗಡಿ ತಾಲೂಕಿನ ಗೊಲ್ಲರಪಾಳ್ಯದಲ್ಲಿ 6.20 ಎಕರೆ ಹಾಗೂ ರಾಮನಗರ ತಾಲೂಕಿನ ಫಾಲಬೋವಿದೊಡ್ಡಿ ಗ್ರಾಮದಲ್ಲಿ 10 ಗುಂಟೆ ಜಾಗ ಪುತ್ರನ ಹೆಸರಿನಲ್ಲಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಕೆಂಗೇರಿ ಉಪ ನಗರ, ಮಲ್ಲೇಶ್ವರ, ನೆಲಮಂಗಲದ ಸೋಂಪುರ (ದಾಬಸಪೇಟೆ), ಅರ್ಕಾವತಿ ಬಡಾವಣೆ, ಯಲಹಂಕ ಉಪನಗರ, ವಿಶ್ವೇಶ್ವರಯ್ಯ ಬಡಾವಣೆ ಹಾಗೂ ಜ್ಞಾನಭಾರತಿಗಳಲ್ಲಿ ವಾಸುದೇವ್‌ ಅವರು ಸಂಪಾದಿಸಿದ್ದ 16 ನಿವೇಶನಗಳು ಪತ್ತೆಯಾಗಿವೆ. ಅಬ್ಬಬ್ಬಾ...ಕೋಟಿ ಕುಬೇರ ಅಂದ್ರೆ ಇವರೇ ನೋಡಿ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more