ಹೆಚ್ಚುವರಿ ಹಣ ವಸೂಲಿ ಮಾಡಿದರೆ ಮುಲಾಜಿಲ್ಲದೆ ಕಠಿಣ ಕ್ರಮ; ಐಜಿಪಿ ಡಿ. ರೂಪಾ

ಹೆಚ್ಚುವರಿ ಹಣ ವಸೂಲಿ ಮಾಡಿದರೆ ಮುಲಾಜಿಲ್ಲದೆ ಕಠಿಣ ಕ್ರಮ; ಐಜಿಪಿ ಡಿ. ರೂಪಾ

Suvarna News   | Asianet News
Published : Jul 28, 2020, 03:55 PM ISTUpdated : Jul 28, 2020, 03:57 PM IST

ಕ್ರಿಮಿನಲ್‌ ಕೇಸ್‌ ದಾಖಲಿಸುವುದಾಗಿ ಹಿರಿಯ ಐಎಎಸ್‌ ಅಧಿಕಾರಿ ಹರ್ಷಗುಪ್ತ ಮತ್ತು ಐಜಿಪಿ ಡಿ.ರೂಪಾ ನೇತೃತ್ವದ ತಂಡ ಎಚ್ಚರಿಕೆ ನೀಡಿದ ಬೆನ್ನಲ್ಲೇ ಕೊರೋನಾ ಚಿಕಿತ್ಸೆ ಸಲುವಾಗಿ 22 ಮಂದಿ ಸೋಂಕಿತರಿಂದ ಹೆಚ್ಚುವರಿಯಾಗಿ ಪಡೆದಿದ್ದ .24 ಲಕ್ಷ ಹಣವನ್ನು ರಾಜರಾಜೇಶ್ವರಿ ನಗರ ಸಮೀಪದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದು ಸೋಮವಾರ ಮರಳಿಸಿದೆ.

ಬೆಂಗಳೂರು (ಜು. 28): ಒಂದು ಕಡೆ ಸರ್ಕಾರ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಕೊಡಿಸಲು ಹರಸಾಹಸ ಪಡುತ್ತಿದ್ದರೆ ಇತ್ತ ಖಾಸಗಿ ಆಸ್ಪತ್ರೆಗಳ ನಿಯಮ ಉಲ್ಲಂಘನೆ, ಹೆಚ್ಚು ದರ ವಸೂಲಿ ಮುಂದುವರೆದಿದೆ. 

ಕ್ರಿಮಿನಲ್‌ ಕೇಸ್‌ ದಾಖಲಿಸುವುದಾಗಿ ಹಿರಿಯ ಐಎಎಸ್‌ ಅಧಿಕಾರಿ ಹರ್ಷಗುಪ್ತ ಮತ್ತು ಐಜಿಪಿ ಡಿ.ರೂಪಾ ನೇತೃತ್ವದ ತಂಡ ಎಚ್ಚರಿಕೆ ನೀಡಿದ ಬೆನ್ನಲ್ಲೇ ಕೊರೋನಾ ಚಿಕಿತ್ಸೆ ಸಲುವಾಗಿ 22 ಮಂದಿ ಸೋಂಕಿತರಿಂದ ಹೆಚ್ಚುವರಿಯಾಗಿ ಪಡೆದಿದ್ದ .24 ಲಕ್ಷ ಹಣವನ್ನು ರಾಜರಾಜೇಶ್ವರಿ ನಗರ ಸಮೀಪದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದು ಸೋಮವಾರ ಮರಳಿಸಿದೆ.

ಕೊರೋನಾ ಚಿಕಿತ್ಸೆಗೆ ಸೋಂಕಿತರಿಂದ ಪಡೆದಿದ್ದ ಮುಂಗಡ ಹಣವನ್ನು ಮರಳಿಸಿ ಆಸ್ಪತ್ರೆ ಉಚಿತ ಚಿಕಿತ್ಸೆ ನೀಡಿದೆ. ಇದರಿಂದ ಜನ ಸಾಮಾನ್ಯರಿಗೆ ಬಹಳ ಉಪಯೋಗವಾಗಿದೆ. ಐಎಎಸ್‌ ಅಧಿಕಾರಿ ಹರ್ಷಗುಪ್ತ, ಬಿಬಿಎಂಪಿ ಎಇಇ ಅಶೋಕ್‌ ಗೌಡ ಒಳಗೊಂಡ ನಮ್ಮ ತಂಡದ ಪರಿಶ್ರಮ ಸಾರ್ಥಕವಾಗಿದೆ. ಸೋಂಕಿತರ ಚಿಕಿತ್ಸೆಗೆ ಸರ್ಕಾರದ ಸೂಚನೆಗಳನ್ನು ಖಾಸಗಿ ಆಸ್ಪತ್ರೆಗಳು ಕಟ್ಟುನಿಟ್ಟಾಗಿ ಪಾಲಿಸಬೇಕು. ಆಸ್ಪತ್ರೆಗಳ ಮೇಲೆ ನಿಗಾವಹಿಸಲಾಗಿದ್ದು, ಹೆಚ್ಚುವರಿ ಹಣ ವಸೂಲಿ ಮಾಡಿದರೆ ಮುಲಾಜಿಲ್ಲದೆ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ಡಿ ರೂಪಾ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!